ಭಟ್ಕಳ : ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿದೆ ಆಂಬ್ಯುಲೆನ್ಸ್…


Team Udayavani, Jul 14, 2022, 6:34 PM IST

ಭಟ್ಕಳ : ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿದೆ ಆಂಬ್ಯುಲೆನ್ಸ್

ಭಟ್ಕಳ : ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರಿಗಾಗಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುದಾನ ನೀಡಿ ಹೊಸ ಆಂಬ್ಯುಲೆನ್ಸ್ ಖರೀದಿ ಮಾಡಿದ್ದು ಮೊಬೈಲ್ ಆರೋಗ್ಯ ತಪಾಸಣೆಯನ್ನು ಮಾಡಲು ಉಪಯೋಗಕ್ಕೆಂದು ನೀಡಲಾಗಿತ್ತು. ಸರಕಾರದ ನಿಯಮದಂತೆ ಈ ಮೊಬೈಲ್ ಹೆಲ್ತ್ ಚೆಕ್‌ಅಪ್‌ನ್ನು ಕಾರವಾರದ ಅಪೋಲೋ ಕ್ಲಿನಿಕ್ ಮಾಡಬೇಕಾಗಿದ್ದರೂ ಸಹ ಕಳೆದ ಕೆಲವು ತಿಂಗಳಿಂದ ವಾಹನ ಭಟ್ಕಳದಲ್ಲಿಯೇ ನಿಂತುಕೊಂಡಿದ್ದು ತುಕ್ಕು ಹಿಡಿಯುತ್ತಿದೆ.

ಕಾರ್ಮಿಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಆರಂಭಿಸಲಾದ ಯೋಜನೆ ಇಂದು ಸರಿಯಾದ ನಿರ್ವಹಣೆ ಇಲ್ಲದೇ ಹಳ್ಳ ಹಿಡಿಯುತ್ತಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖರೀದಿ ಮಾಡಿದ್ದ ಅಂಬುಲೆನ್ಸ್ ತುಕ್ಕು ಹಿಡಿಯುತ್ತಿದೆ.

ಹಿಂದೆ ಸರಕಾರ ಕಾರ್ಮಿಕರಿಗಾಗಿ ಈ ಯೋಜನೆಯನ್ನು ಆರಂಭಿಸಿದಾಗ ಭಟ್ಕಳದಲ್ಲಿ ಕಾರ್ಮಿಕ ಇಲಾಖೆಯ ಇನ್ಸ್ ಪೆಕ್ಟರ್ ಆಗಿದ್ದ ಗುರುಪ್ರಸಾದ್ ಅವರು ಎರಡು ಅಂಬುಲೆನ್ಸ್ ತರಿಸಿ ಭಟ್ಕಳ ಹೊನ್ನಾವರದಲ್ಲಿ ಆರಂಭಿಸಿದ್ದರು. ಮೊದ ಮೊದಲು ಭಟ್ಕಳದಲ್ಲಿ ಕಾರ್ಮಿಕರಿಂದ ಉತ್ತಮ ಪ್ರತಿಕ್ರಿಯೆ ಬಾರದ್ದರಿಂದ ಸಾಕಷ್ಟು ಪ್ರಚಾರ ನೀಡಿದ್ದರು. ನಂತರ ಹೊನ್ನಾವರದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಅಲ್ಲಿನ ಗ್ರಾಮೀಣ ಭಾಗದ ಕಾರ್ಮಿಕರು ಪ್ರಯೋಜನ ಪಡೆದಿದ್ದರು. ಆದರೆ ಭಟ್ಕಳದಲ್ಲಿ ಕುಂಟುತ್ತಾ ಸಾಗಿದ ಯೋಜನೆ ನಂತರ ಎಂ.ಎಲ್.ಸಿ. ಚುನಾವಣೆಯ ವೇಳೆಗೆ ನೀತಿ ಸಂಹಿತೆಯ ನೆಪವೊಡ್ಡಿ ನಿಂತು ಹೋಗಿತ್ತು. ಆಗ ನಿಂತುಕೊಂಡಿದ್ದ ಅಂಬುಲೆನ್ಸ್ ಇನ್ನೂ ತನಕ ನಿಂತುಕೊಂಡೇ ಇದೆ.

ಇದನ್ನೂ ಓದಿ : “ದಿವ್ಯ ಕಾಶಿ – ಭವ್ಯ ಕಾಶಿ”ಯನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ: ಸಿಎಂ

ಈಗಾಗಲೇ ಇನ್ನೊಂದು ಅಂಬುಲೆನ್ಸ್ ಮುಂಡಗೋಡಿಗೆ ಹೋಗಿ ಅಲ್ಲಿ ಆರೋಗ್ಯ ತಪಾಸಣೆಯನ್ನು ಆರಂಭಿಸಿದೆ ಎಂದು ತಿಳಿದು ಬಂದಿದೆ. ಆದರೆ ಭಟ್ಕಳದಲ್ಲಿ ಮಾತ್ರ ತುಕ್ಕು ಹಿಡಿಯುತ್ತಿರುವ ಅಂಬುಲೆನ್ಸ್ ತನ್ನ ಕಾರ್ಯವನ್ನು ಆರಂಭಿಸಿಯೇ ಇಲ್ಲ.

ಸರಕಾರದಿಂದ ಅಂಬುಲೆನ್ಸ್ ನಲ್ಲಿ ಆರೋಗ್ಯ ತಪಾಸಣೆಯ ಟೆಂಡರ್ ಅಪೋಲೋ ಹೆಲ್ತ್ ಕ್ಲಿನಿಕ್ ಎನ್ನುವ ಸಂಸ್ಥೆ ಪಡೆದುಕೊಂಡಿದ್ದು ಅಂಬುಲೆನ್ಸ್ ಮೇಲೆ ತಮ್ಮ ನಂಬರನ್ನು ಸಹ ನಮೂದಿಸಿಲ್ಲ. ಅಂಬುಲೆನ್ಸ್ ನಲ್ಲಿ ಅಪೋಲೋ ಕ್ಲಿನಿಕ್ ಕಾರವಾರ ಎಂದು ಬರೆದಿದ್ದರೂ ಕೂಡಾ ಕಾರವಾರದಲ್ಲಿ ಯಾವುದೇ ಅಸ್ತಿತ್ವ ಇಲ್ಲದೇ ಬೆಂಗಳೂರಿನಲ್ಲಿಯೇ ಕೇಂದ್ರೀಕೃತವಾಗಿದೆ ಎಂದು ತಿಳಿದು ಬಂದಿದೆ.

ನಾನು ಹೊಸದಾಗಿ ಚಾರ್ಜ್ ತೆಗೆದುಕೊಂಡಿದ್ದೇನೆ, ನನಗೆ ಅಂಬುಲೆನ್ಸ್ ಬಗ್ಗೆಯಾಗಲೀ, ಅದನ್ನು ನಿರ್ವಹಣೆ ಮಾಡುವ ಏಜೆನ್ಸಿಯ ಬಗ್ಗೆಯಾಗಲೀ ತಿಳಿದಿಲ್ಲ.
– ತೀರ್ಥಬಾಬು, ಕಾರ್ಮಿಕ ಇಲಾಖೆಯ ಇನ್ಸಪೆಕ್ಟರ್.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.