ಬೆಸ್ತರಿಗೆ ತೊಂದರೆಯಾಗದು: ಪೂಜಾರಿ


Team Udayavani, Dec 25, 2019, 2:44 PM IST

uk-tdy-1

ಕಾರವಾರ: ಇಲ್ಲಿನ ಸರ್ವಋತು ಬಂದರು ಎರಡನೇ ಹಂತದ ವಿಸ್ತರಣೆ ಹಾಗೂ ಅಲೆತಡೆಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸಪೂಜಾರಿ ಸಮ್ಮುಖದಲ್ಲಿ ಡಿಸಿ ಕಚೇರಿಯಲ್ಲಿ ಮೀನುಗಾರ ಮುಖಂಡರ ಅಹವಾಲು ಆಲಿಕೆ ಸಭೆ ಮಂಗಳವಾರ ನಡೆಯಿತು.

ಸಚಿವರು ತಾಳ್ಮೆಯಿಂದ ಮೀನುಗಾರ ಮುಖಂಡರ ಆತಂಕವನ್ನು ಆಲಿಸಿದರು. ಬಂದರು ವಿಸ್ತರಣೆಯಿಂದ ಮೀನುಗಾರಿಕೆಗೆ ತೊಂದರೆಯಾಗಲಿದೆ. ಕಾರವಾರ ಸಮುದ್ರ ಕೊರೆತಕ್ಕೆ ತುತ್ತಾಗಬಹುದು. ಅಲೆತಡೆಗೋಡೆಯನ್ನು ಬಾವುಟ ಕಟ್ಟೆಯ ಸರಹದ್ದು ಮೀರಿ, ಮಕ್ಕಳ ಉದ್ಯಾನವನದಪ್ಯಾರಾಗೋಲಾದಿಂದ ಪ್ರಾರಂಭಿಸುತ್ತಿರುವುದು ಅವೈಜ್ಞಾನಿಕ ಎಂದು ವಾದ ಮಂಡಿಸಿದರು. ಕಾರವಾರ ಬಂದರು ಈಗ ಹೇಗಿದೆಯೋ ಹಾಗೆ ಇರಲಿ. ಇಲ್ಲಿ ಎರಡನೇ ಹಂತದ ವಿಸ್ತರಣೆ ಅಗತ್ಯವಿಲ್ಲ. ಬೀಚ್‌ ಪ್ರವಾಸಿಗರಿಗೆ, ಸಾಂಪ್ರದಾಯಿಕ ಮೀನುಗಾರರಿಗೆ ಉಳಿಯಬೇಕು. ಯಾಂತ್ರಿಕ ಮೀನುಗಾರರಿಗೂ ಬಂದರು ವಿಸ್ತರಣೆಯಿಂದ ತೊಂದರೆಯಾಗಲಿದೆ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದರು.

ಕೆ.ಟಿ. ತಾಂಡೇಲ, ಪ್ರಸಾದ್‌ ಕಾರವಾರಕರ್‌, ಬಿ.ಎಸ್‌. ಪೈ, ಪ್ರೀತಮ್‌ ಮಾಸೂರಕರ್‌ ಬಂದರು ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದರು. ಫಿಶರಿಸ್‌ ಫೆಡರೇಶನ್‌ ಅಧ್ಯಕ್ಷ ಗಣಪತಿ ಮಾಂಗ್ರೆ ಮಾತನಾಡಿ, ಕಾರವಾರ ಬಂದರಿನ ಗುಣವನ್ನು ಸುದೀರ್ಘ‌ವಾಗಿ ವಿವರಿಸಿದರು. ಬಂದರು ವಿಸ್ತರಣೆ, ಅಲೆತಡೆಗೋಡೆ ಯೋಜನೆಗಳನ್ನು ಬೇರೆಡೆ ಸ್ಥಳಾಂತರಿಸಿ, ಕಾರವಾರಕ್ಕೆ ಈ ಯೋಜನೆಗಳು ಬೇಡ ಎಂದರು.

ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಈ ಯೋಜನೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಯಾದುದು. ಅವರೇ ಯೋಜನೆಗೆ ಬಜೆಟ್‌ನಲ್ಲಿ ಹಣ ನೀಡಿ, ಅಡಿಗಲ್ಲು ಸಹ ಹಾಕಿದ್ದರು. ಆಗ ಮೀನುಗಾರ ಮುಖಂಡರು ಯೋಜನೆಗೆ ವಿರೋಧ ವ್ಯಕ್ತಮಾಡದೇ, ಈಗ ಮಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಸುದೀರ್ಘ‌ ಚರ್ಚೆ ಆಲಿಸಿದ ಮೀನುಗಾರಿಕೆ ಮತ್ತು ಬಂದರು ಸಚಿವರು ಮೀನುಗಾರರಿಗೆ ತೊಂದರೆಯಾಗದಿರುವುದನ್ನು ಮತ್ತೂಮ್ಮೆ ಖಚಿತ ಮಾಡಲಾಗುವುದು. ಉನ್ನತ ಅಧಿಕಾರಿಗಳು ಹಾಗೂ ತಾಂತ್ರಿಕ ತಜ್ಞರ ಜೊತೆ ಚರ್ಚಿಸಲಾಗುವುದು. ಈ ಯೋಜನೆಯಿಂದ ಮೀನುಗಾರರಿಗೆ ತೊಂದರೆ ಇಲ್ಲ ಎಂದು ಅಧಿಕಾರಿಗಳಿಂದ ಲಿಖೀತ ಭರವಸೆ ನೀಡಲಾಗುವುದು. ಉನ್ನತ ಮಟ್ಟದ ಚರ್ಚೆಯ ನಂತರವೇ ಖಚಿತ ನಿರ್ಧಾರಕ್ಕೆ ಬರಲಾಗುವುದು. ಈಗ ಮೀನುಗಾರರಿಗೆ ತೊಂದರೆ ಕೊಡುವ ಯಾವುದೇ ಕೆಲಸ ಮಾಡಲ್ಲ ಎಂಬ ಭರವಸೆ ನೀಡಬಲ್ಲೆ.

ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಇವತ್ತಿನ ಸಭೆಯಲ್ಲಿ ಬೆಳಕು ಚೆಲ್ಲಲಾಗಿದೆ. ತಂತ್ರಜ್ಞರಿಂದ ಮಾಹಿತಿ ಪಡೆದು, ಸರ್ಕಾರದ ನಿಲುವು ತಿಳಿಸಲಾಗುವುದು ಎಂದರು. ಯೋಜನೆ ನಿಲ್ಲಲಿದೆ ಅಥವಾ ಮುಂದುವರಿಯಲಿದೆ ಎಂಬ ಸ್ಪಷ್ಟ ನಿರ್ಣಯ ಅಂತಿಮವಾಗಿ ಹೊರಡಲಿಲ್ಲ. ಜಿಲ್ಲಾಧಿ ಕಾರಿ ಕಚೇರಿ ಹೊರ ಆವರಣದಲ್ಲಿದ್ದ ಸಾವಿರಾರು ಮೀನುಗಾರರನ್ನು, ಸಭೆಯ ನಂತರ ಸಚಿವ ಪೂಜಾರಿ ಭೇಟಿ ಮಾಡಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.