ಮಳೆಗಾಲ: ಅಪಾಯದ ಸ್ಥಳ ಪರಿಶೀಲನೆ
Team Udayavani, Apr 10, 2021, 6:43 PM IST
ಕಾರವಾರ: ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ -66ರ ಕಾಮಗಾರಿಯನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶುಕ್ರವಾರ ಪರಿಶೀಲಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಸಹಾಯಕ ಕಮಿಷನರ್ ವಿದ್ಯಾ ಚಂದರಗಿ, ತಹಶೀಲ್ದಾರ್ ಆರ್.ವಿ. ಕಟ್ಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದರು.
ಐಆರ್ಬಿ ಕಂಪನಿ ಅಧಿಕಾರಿಗಳು ಸಹ ಈ ವೇಳೆ ಇದ್ದರು. ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿಯುವ ಸ್ಥಳಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಕೈಗೊಳ್ಳಬೇಕಾದ ಮುಂಜಾಗ್ರತಾ ಕೆಲಸಗಳ ಬಗ್ಗೆ ನಿರ್ದೇಶನ ನೀಡಿದರು. ನೆರೆ ಹಾವಳಿಯಿಂದ ನೀರು ತುಂಬಿ ಜನ ಜೀವನಕ್ಕೆ ವ್ಯತ್ಯಯ ಉಂಟಾಗುವ ಸ್ಥಳಗಳಿಗೆ ಸಹ ಭೇಟಿ ನೀಡಿ ಪರಿಶೀಲಿಸಿದರು.
ಕಾರವಾರದ ಸಂಕ್ರುಬಾಗ ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಜಾಗದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಥಳದಲ್ಲಿದ್ದ ಐಆರ್ಬಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಮದಳ್ಳಿ ಮುದಗಾ ತಿರುವಿನಲ್ಲಿ ಅತಿವೃಷ್ಟಿಯಿಂದ ನೀರು ತುಂಬುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ನಡೆಸುವ ಕಂಪನಿಯ ಅಧಿಕಾರಿಗಳಿಗೆ ಅಗತ್ಯ ಕ್ರಮದ ಬಗ್ಗೆ ಕಟ್ಟುನಿಟ್ಟಿನ ಆದೇಶ ನೀಡಲಾಯಿತು. ಹಾಗೂ ನೌಕಾನೆಲೆ ಅಧಿಕಾರಿಗಳಿಗೆ ನೀರು ಸರಾಗವಾಗಿ ಹರಿದು ಹೋಗುವಂತೆ ಜೆಸಿಬಿ ಬಳಸಿ ಏಪ್ರಿಲ್ ಅಂತ್ಯದೊಳಗಾಗಿ ಸೂಕ್ತ ಕಾರ್ಯ ಮಾಡಿ, ಮಳೆ ನೀರು ಹರಿಯಲು ದಾರಿ ಮಾಡಿಕೊಡಬೇಕೆಂದು ಆದೇಶಿಸಲಾಯಿತು. ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಬೇಕಾಗಿರುವ ಭೂಸ್ವಾಧೀನವಾಗುವ ಸ್ಥಳಗಳಿಗೆ ಸಹ ಭೇಟಿ ನೀಡಲಾಯಿತು.
ಪರಿಹಾರ ಪಡೆದುಕೊಂಡ, ಭೂಸ್ವಾಧೀನವಾದ, ಆದರೆ ಕಂಪನಿಗೆ ಭೂಮಿ, ಮನೆಯ ಜಾಗ ನೀಡಲು ಬಾಕಿ ಉಳಿದಿರುವ ಜಮೀನುಗಳನ್ನು ತಕ್ಷಣ ವಶಕ್ಕೆ ಪಡೆದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ