ಮಾರುಕಟ್ಟೆಯಲ್ಲಿ ಕಾಣದ ಸಾಮಾಜಿಕ ಅಂತರ


Team Udayavani, May 3, 2021, 9:03 PM IST

3-17

ಕಾರವಾರ: ನಗರದಲ್ಲಿ ಬೆಳಗ್ಗೆ 6ರಿಂದ 10ರ ವರೆಗೆ ಹಣ್ಣು-ತರಕಾರಿ ವ್ಯಾಪಾರದ ವೇಳೆ ಸಾಮಾಜಿಕ ಅಂತರ ಕಾಣದ ಕಾರಣ ಕೊನೆಗೆ ಪೊಲೀಸರು ಲಘು ಲಾಟಿ ಪ್ರಹಾರ ಮಾಡಿದರು.

ಸಾರ್ವಜನಿಕರು ಮಾಸ್ಕ್ ಧರಿಸಿದ್ದರು. ಆದರೆ ಸಮಾಜಿಕ ಅಂತರ ರವಿವಾರ ಬೆಳಗ್ಗೆ 9ರಿಂದ 10ರ ಸುಮಾರಿಗೆ ಕಾಣಲಿಲ್ಲ. ಸಮಯ ಮೀರುತ್ತಾ ಬಂದ ಕಾರಣ ಜನರು ವ್ಯಾಪಾರಕ್ಕೆ ಮುಗಿ ಬಿದ್ದರು. ಹಣ್ಣು ತರಕಾರಿ ಕೊಳ್ಳುವಲ್ಲಿ ನಿರತರಾದರು. ಕೊನೆಗೆ ನಗರಸಭೆ ಸಿಬ್ಬಂದಿ ಪೊಲೀಸರ ನೆರವು ಪಡೆದು ವ್ಯಾಪಾರ ಬಂದ್‌ ಮಾಡಿಸಲು ಮುಂದಾದರು.

ಸಮಯ ಮೀರಿದರೂ ವ್ಯಾಪಾರ ಮುಗಿಯದ ಕಾರಣ ಪೊಲೀಸರು ಲಘು ಲಾಟಿ ಪ್ರಹಾರಕ್ಕೆ ಮುಂದಾದರು. ಯುವಕರಿಗೆ ಲಘುವಾಗಿ ಲಾಟಿ ಬೀಸಿದರು. ಆಗ ಮಾರುಕಟ್ಟೆಯಲ್ಲಿ ಜನ ಕರಗುತ್ತಾ ಬಂದರು.

ಮಾಸ್ಕ್ ಧರಿಸಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ತರಕಾರಿ, ಹಣ್ಣು ವ್ಯಾಪಾರ ಪೂರ್ಣವಾಗಿಲ್ಲ ಎಂದು ಕೊರಗಿದರು. ಸಾರ್ವಜನಿಕರು ಅಲ್ಪಸ್ವಲ್ಪ ತರಕಾರಿ, ಹಣ್ಣು ಹೂ ಖರೀದಿಸಿ ಮನೆಗಳತ್ತ ಧಾವಿಸಿದರು.

ನಗರಸಭೆ ಘೋಷಣೆ: ಇನ್ನು ಮುಂದೆ ಬೆಳಗ್ಗೆ 6ರಿಂದ 10ರವರೆಗೆ ರಸ್ತೆ ಬದಿ ಕುಳಿತು ಹೂ, ಹಣ್ಣು, ಮೀನು ಮಾರಾಟಕ್ಕೆ ಮೇ 3ರಿಂದ ಬ್ರೇಕ್‌ ಹಾಕಿದೆ. ಹಣ್ಣು, ಹೂ ಹಾಗೂ ಮೀನು ಮಾರಾಟವನ್ನು ಮನೆ ಮನೆಗೆ ತೆರಳಿ ಅಥವಾ ತಳ್ಳುಗಾಡಿಯಲ್ಲಿಟ್ಟು ಬೆಳಗ್ಗೆ 6ರಿಂದ ಸಂಜೆ 6ರ ತನಕ ಮಾಡಬಹುದಾಗಿದೆ. ತರಕಾರಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ತನಕ ತೆಗೆಯಬಹುದು ಎಂದು ಮೈಕ್‌ನಲ್ಲಿ ಘೋಷಣೆ ಮಾಡಲಾಯಿತು.

ನಗರಸಭೆಯಿಂದ ನೆರವು: ನಗರದ ಪಿಂಗೆ ರಸ್ತೆಯ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಅಜಯ್‌ ಶಿಂಧೆ ಎಂಬುವವರು ಅಸ್ವಸ್ಥರಾಗಿದ್ದಾರೆ ಎಂಬ ಸುದ್ದಿ ನಗರಸಭೆ ಅಧಿಕಾರಿಗಳನ್ನು ತಲುಪಿತು. ತಕ್ಷಣ ನಗರಸಭೆ ಪೌರಾಯುಕ್ತರು ಅಂಬುಲೆನ್ಸ್‌ ವ್ಯವಸ್ಥೆ ಮಾಡಿ ಅಜಯ್‌ ಅವರನ್ನು ಇಲ್ಲಿನ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ಸಾಗಿಸಿ ದಾಖಲಿಸಿದರು.

ಈ ಕ್ರಮ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯಿತು. ಇಲ್ಲಿನ ಮೆಡಿಕಲ್‌ ಕಾಲೇಜಿನ ಎಂಬಿಬಿಎಸ್‌ ವಿದ್ಯಾರ್ಥಿಗಳನ್ನು ಕೊರೊನಾ ರೋಗಿಗಳ ಸೇವೆಗೆ ಬಳಸಿಕೊಳ್ಳಲು ರವಿವಾರ ಕ್ರಮ ತೆಗೆದುಕೊಳ್ಳಲಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ಕಾಡುತ್ತಿದ್ದ ನಸ್‌ ìಗಳ ಸೇವೆಯ ಜಾಗವನ್ನು ಎಂಬಿಬಿಎಸ್‌ ಮುಗಿಸುತ್ತಿರುವ ವಿದ್ಯಾರ್ಥಿಗಳು ತುಂಬಿದಂತಾಗಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.