ಮಹಿಳೆಯರ ಸುರಕ್ಷತೆಗೆ ಓಬವ್ವ ತಂಡ ರಚನೆ


Team Udayavani, Jan 7, 2020, 6:11 PM IST

uk-tdy-1

ಕುಮಟಾ: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಹಾಗೂ ಮಹಿಳೆಯರ ಮೇಲೆ ನಡೆಯುವ ಕೃತ್ಯಗಳಿಗೆ ಕಡಿವಾಣ ಹಾಕಲು ಭಟ್ಕಳ ಉಪವಿಭಾಗದಲ್ಲಿ 16 ಪೊಲೀಸರನ್ನೊಳಗೊಂಡ ಓಬವ್ವ ಪಡೆಯನ್ನು ಇಲಾಖೆ ಜಾರಿಗೆ ತಂದಿದೆ ಎಂದು ಎಸ್ಪಿ ಶಿವಪ್ರಕಾಶ ದೇವರಾಜು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಲಾ ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಒಬ್ಬೊಬ್ಬರಾಗಿ ಮನೆಗೆ ಹೋಗುತ್ತಾರೆ. ಅವರಿಗೆ ಯಾವುದೇ ಸುರಕ್ಷತೆ ಇರುವುದಿಲ್ಲ. ಅಂಥ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಈ ತಂಡವನ್ನು ರಚಿಸಲಾಗಿದೆ ಎಂದ ಅವರು, 1 ಮಹಿಳಾ ಪಿ.ಎಸ್‌.ಐ, 1 ಎ.ಎಸ್‌.ಐ ಹಾಗೂ 14 ಸಿಬ್ಬಂದಿಗಳು ಸೇರಿದಂತೆ ಒಟ್ಟೂ 16 ಸಿಬ್ಬಂದಿ ಈ ತಂಡದಲ್ಲಿ ಇರಲಿದ್ದಾರೆ ಎಂದರು.

ಬಸ್‌ ನಿಲ್ದಾಣ, ಶಾಲಾ-ಕಾಲೇಜುಗಳು ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರನ್ನು ಚುಡಾಯಿಸುವವರ ಮೇಲೆ ಕಣ್ಣಿಡಲಾಗುತ್ತದೆ. ಓಬವ್ವ ತಂಡದ ಸಿಬ್ಬಂದಿಗೆ ಸರಿಯಾದ ಕಾನೂನು ತಿಳಿವಳಿಕೆ ಬಂದ ನಂತರ ಎಲ್ಲ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ವಿವಿಧ ಕಾರ್ಯಾಗಾರದ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಲೈಂಗಿಕ ದೌರ್ಜನ್ಯ ಹಾಗೂ ಫೂಕೊÕà ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದ ಅವರು, ಸಾಮಾಜಿಕ ಜಾಲತಾಣ ಹಾಗೂ ಸೈಬರ್‌ ಕ್ರೈಂ ಮೂಲಕ ನಡೆಯುವ ದೌರ್ಜನ್ಯಗಳ ಮೇಲೆ ನಿಗಾ ವಹಿಸಲಾಗುತ್ತದೆ. ಸಮಾಜದಲ್ಲಿ ದುಷ್ಕೃತ್ಯಗಳು ನಡೆಯದಂತೆ ಕಠಿಣ ಕ್ರಮ ವಹಿಸಲಾಗುತ್ತದೆ ಎಂದರು.

ಹೈದ್ರಾಬಾದಿನಲ್ಲಿ ನಡೆದ ದುಷ್ಕೃತ್ಯಗಳು ಹಾಗೂ ಇನ್ನಿತರ ಅಹಿತಕರ ಘಟನೆಗಳು ಉತ್ತರಕನ್ನಡ ಜಿಲ್ಲೆಯಲ್ಲಿ ನಡೆಯದಂತೆ ಈ ಪಡೆ ನಿಗಾ ವಹಿಸುತ್ತಾರೆ. ಮಹಿಳೆಯರಿಗೆ ತೊಂದರೆಯಾದಲ್ಲಿ ನೇರವಾಗಿ ಓಬ್ಬವ್ವ ಪಡೆಯ ಮಹಿಳಾ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ. ಠಾಣೆಗೆ ತಿಳಿಸಿದರೂ ತಕ್ಷಣಕ್ಕೆ ಪೊಲೀಸ್‌ ಸಿಬ್ಬಂದಿ ಸ್ಪಂದಿಸಲಿದ್ದಾರೆ ಎಂದರು.

ಓಬವ್ವ ಪಡೆಯವರಿಗೆ ರಕ್ಷಕ ಗಾಡಿಯನ್ನು ನೀಡಲಾಗಿದ್ದು, ಪೊಲೀಸ್‌ ಠಾಣೆಗೆ ನಿರ್ಭಯದಿಂದ ಸಾರ್ವಜನಿಕರು ಆಗಮಿಸಬಹುದಾಗಿದೆ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಪ್ರತಿಯೊಂದು ಠಾಣೆಗಳಲ್ಲಿಯೂ ಸ್ವಾಗತಗಾರರನ್ನು ನೇಮಿಸಲಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ಪೊಲೀಸ್‌ ಬೀಟ್‌ ವ್ಯವಸ್ಥೆಯನ್ನು ಸದೃಢಗೊಳಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಬಗ್ಗೆಯೂ ನಿಗಾ ಇಡಲಾಗುತ್ತದೆ ಎಂದ ಅವರು, ಸಾರ್ವಜನಿಕರು ಸಹ ಪೊಲೀಸ್‌ ಇಲಾಖೆಗೆ ಸಹಕಾರ ನೀಡಬೇಕು ಎಂದರು.

ಅಲ್ಲದೇ, ಪೊಲೀಸ್‌ ಸಿಬ್ಬಂದಿ ಸಾರ್ವಜನಿಕರ ಜೊತೆ ಸರಿಯಾಗಿ ವರ್ತಿಸದಿದ್ದಲ್ಲಿ ಅಥವಾ ಅಹಿತಕರ ಘಟನೆಗಳಿಗೆ ಆಸ್ಪದ ನೀಡಿದರೆ ತಕ್ಷಣ ಮೇಲಧಿಕಾರಿಗಳಿಗೆ ತಿಳಿಸಬೇಕು ಎಂದರು.

Ad

ಟಾಪ್ ನ್ಯೂಸ್

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirsi

Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ

arrested

ಭಟ್ಕಳ ಠಾಣೆಗೆ ಬಾಂ*ಬ್‌ ಬೆದರಿಕೆ ಸಂದೇಶ : ಪ್ರಮುಖ ಆರೋಪಿ ಖಾಲಿದ್‌ ಪತ್ತೆ

1-aa-aa-crick-ssss

ಯಲ್ಲಾಪುರ: ನಟೋರಿಯಸ್ ಆರೋಪಿ ಕಾಲಿಗೆ ಪೊಲೀಸರ ಗುಂಡು

18

Mundgod: ರಸ್ತೆಗಳು ಹೊಂಡಮಯ-ಸಂಚಾರ ಅಯೋಮಯ

17

Yellapur: ಹದಗೆಟ್ಟಿದೆ ಕೈಗಾ-ಇಳಕಲ್‌ ರಾಜ್ಯ ಹೆದ್ದಾರಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

11-hunsur

Hunsur: ಕೋಳಿ ಫಾರಂ ರೈಟರ್ ನಾಪತ್ತೆ; ದೂರು ದಾಖಲು

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.