ಅಧಿಕಾರಿಗಳು ರೈತರ ಸಮಸ್ಯೆ ಬಗೆಹರಿಸಲಿ
•ಆಡಳಿತಾತ್ಮಕ ತಪ್ಪಿನ ಪರಿಣಾಮ ರೈತರು ತೊಂದರೆ ಅನುಭವಿಸುವಂತಾಗಿದೆ: ಕಾಗೇರಿ
Team Udayavani, Jun 14, 2019, 3:05 PM IST
ಶಿರಸಿ: ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹುಲೇಕಲ್ನಲ್ಲಿ ಕೃಷಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.
ಶಿರಸಿ: ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಲಾಖೆಗಳ ಸಮನ್ವಯತೆ ಕೊರತೆಯ ಪರಿಣಾಮ ರಾಜ್ಯಾದ್ಯಂತ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಗುರುವಾರ ತಾಲೂಕಿನ ಹುಲೇಕಲ್ ಗ್ರಾಪಂ ಆವಾರದಲ್ಲಿ ತಾಲೂಕಿನಾದ್ಯಂತ ಸಂಚರಿಸಲಿರುವ ಸಮಗ್ರ ಕೃಷಿ ಅಭಿಯಾನ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಅಧಿಕಾರಿಗಳು ರೈತರ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ತೋರಬೇಕೆ ವಿನಃ ತಮ್ಮ ಆಡಳಿತಾತ್ಮಕ ತಪ್ಪಿನ ಪರಿಣಾಮವನ್ನು ರೈತರು ಅನುಭವಿಸುವಂತೆ ಆಗಬಾರದು ಎಂದರು.
ಜಿಲ್ಲಾದ್ಯಂತ ಕಳೆದ ಅವಧಿಯಲ್ಲಿ ರೈತರ ಬೆಳೆಯ ಮಾಹಿತಿ ಮತ್ತು ಚಿತ್ರಣಗಳ ಜೊತೆಗೆ ಜಿಪಿಎಸ್ ಮಾಡಲಾಗಿದೆ. ಆದರೆ ಪಹಣಿ ಪತ್ರಿಕೆಯಲ್ಲಿ ತದ್ವಿರುದ್ಧ ಬೆಳೆ ನಮೂದಾಗಿರುವ ಪರಿಣಾಮ ರೈತರು ಸಹಕಾರಿ ಸಂಘ ಮತ್ತು ಬ್ಯಾಂಕ್ ಗಳಲ್ಲಿ ಸಾಲ ಪಡೆಯಲು ತೀವ್ರ ಅನಾನುಕೂಲ ಉಂಟಾಗಿದೆ ಎಂದರು.
ರೈತರ ಬಂದೂಕು ಪರವಾನಗಿ ಪರಿಷ್ಕೃತ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಆರು ತಿಂಗಳ ಹಿಂದೆಯೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಆಗಿಲ್ಲ. ಚುನಾವಣೆ ನಿಮಿತ್ತ ಬಂದೂಕುಗಳನ್ನು ಠಾಣೆಯಲ್ಲಿ ಇಡಲಾಗಿದೆ. ಈಗ ರೈತರ ಬಳಿ ಪರವಾನಗಿ ಇಲ್ಲ ಎಂಬ ಕಾರಣಕ್ಕೆ ಬಂದೂಕುಗಳನ್ನು ಹಿಂತಿರುಗಿಸುತ್ತಿಲ್ಲ. ರೈತರು ತಮ್ಮ ಬೆಳಗೆಳನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು, ಸರ್ಕಾರ ಸಾಲಮನ್ನಾ ವಿಚಾರವಾಗಿ ರೈತರಿಂದ ಪಡೆದಿದ್ದ ಮಾಹಿತಿಗಳು ಹಾಗೂ ವಿಧಿಸಿದ್ದ ನಿಯಮಗಳ ಗೊಂದಲಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.
ಜಿಪಂ ಸದಸ್ಯ ಜಿ.ಎನ್ ಹೆಗಡೆ ಮುರೇಗಾರ್ ಮತಾನಾಡಿ, ಇಲಾಖೆಗಳ ಸಮನ್ವಯತೆ ಸರಿಯಾಗಿದ್ದಾಗ ಮಾತ್ರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ಕೃಷಿಕರ ಎಲ್ಲ ಸಾಲಗಳು ಮನ್ನಾ ಆಗಬೇಕಿದೆ. ರೈತ ಸಮುದಾಯ ಸರ್ಕಾರಿ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದೆ. ರೈತರ ಮಕ್ಕಳ ನಗರ ಫಲಾಯನ ತಪ್ಪಿಸಲು ಸಬಲೀಕರಣ ಕಡ್ಡಾಯವಾಗಿ ಆಗಬೇಕಿದೆ ಎಂದರು.
ತಾಪಂ ಸದಸ್ಯರಾದ ನರಸಿಂಹ ಹೆಗಡೆ, ರವಿ ಹೆಗಡೆ ಹಳದೋಟ, ಸೋಂದಾ ಗ್ರಾಪಂ ಅಧ್ಯಕ್ಷ ಮಂಜುನಾಥ ಭಂಡಾರಿ, ಕೃಷಿ ಇಲಾಖೆ ಉಪನಿರ್ದೇಶಕ ನಟರಾಜ, ಶಂಕರ ಹೆಗಡೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!