ಸಮುದ್ರ ತೀರದಲ್ಲಿ ತೈಲ ಮಿಶ್ರಿತ ಡಾಂಬರು


Team Udayavani, May 5, 2019, 4:44 PM IST

nc-3

ಅಂಕೋಲಾ: ತಾಲೂಕಿನ ಸಮುದ್ರ ತೀರದಲ್ಲಿ ವಿಷಕಾರಿ ತೈಲ ಮಿಶ್ರಿತ ಡಾಂಬರು ಕಡಲ ದಂಡೆಯುದ್ದಕ್ಕೂ ಶೇಖರಣೆ ಆಗುತ್ತಿದ್ದು, ಇದು ಮೀನುಗಾರರ ನಿದ್ದೆಗೆಡಿಸಿದೆ.

ಬೆಳಂಬಾರ, ನದಿಬಾಗ, ಹೊನ್ನೆಗುಡಿ, ಶೇಡಿಕುಳಿ, ಕೇಣಿ, ಹನಿಬೀಚ್, ಬೇಲೆಕೇರಿ, ಹಾರವಾಡಾ ಭಾಗದ ಸಮುದ್ರ ತೀರಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಮುದ್ರ ನೀರಿನಲ್ಲಿ ತೇಲಿ ಬರುವ ಈ ವಿಷಕಾರಿ ಡಾಂಬರು ಶೇಖರಣೆ ಆಗುತ್ತಿರುವುದು ಕಂಡುಬಂದಿದೆ. ಕಳೆದೆರಡು ದಿನಗಳಂದಂತೂ ಈ ಪ್ರಮಾಣ ಏರುಗತಿಯಲ್ಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಹಡಗುಗಳಿಂದ ವಿಸರ್ಜಿಸಲಾಗುತ್ತಿರುವ ಎಂಜಿನ್‌ ಆಯಿಲ್ ಕಾರಣವಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ನೂರಾರು ದೊಡ್ಡ ಹಡಗುಗಳು ಸಮುದ್ರದಲ್ಲಿ ಸಂಚರಿಸುತ್ತವೆ. ಇತರ ವಾಹನಗಳಂತೆ ಇಂತಿಷ್ಟು ಕಿ.ಮೀ ಓಡಿದ ಮೇಲೆ ಹಡಗುಗಳ ಎಂಜಿನ್‌ ಆಯಿಲ್ಬ ದಲಾಯಿಸಬೇಕಾಗುತ್ತದೆ. ಎಂಜಿನ್‌ ಆಯಿಲ್ ಬದಲಿಸಲು ಬಂದರಿನಲ್ಲಿ ನಿಲ್ಲಿಸಿದರೆ ಶುಲ್ಕ ಕಟ್ಟಬೇಕು. ಹಾಗಾಗಿ ಅವರು ಸಮುದ್ರಕ್ಕೆ ಬಿಡುತ್ತಾರೆ ಎನ್ನುತ್ತಾರೆ.

ಕರಾವಳಿ ತೀರದ ಕೆಲವು ಸಮುದ್ರ ತೀರಗಳಲ್ಲಿಯು ಇಂಥ ಡಾಂಬರು ಉಂಡೆಗಳನ್ನು ಸಮುದ್ರ ಹೊರಹಾಕುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಸಮುದ್ರ ತೀರಗಳಲ್ಲಿ ಕಂಡುಬರುತ್ತಿರುವ ಡಾಂಬರ್‌ಗಳು ಜಲಚರಗಳಿಗೆ ಮಾರಕವಾಗಿದ್ದು ಈ ಬಗ್ಗೆ ಪರಿಸರ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಡಲ ತೀರದಲ್ಲೀಗ ಮೀನಿಗೆ ಬರ!
ಸಮುದ್ರ ಕಲುಷಿತಗೊಂಡಿರುವುದರಿಂದ ಈ ಬಾರಿ ಕಡಲ ತೀರದಲ್ಲಿ ಸಾಕಷ್ಟು ಮೀನು ಸಿಗದೆ ಮೀನುಗಾರ ಕುಟುಂಬಗಳು ಸಂಕಷ್ಟದಲ್ಲಿವೆ. ನಾಡದೋಣಿ, ಪರ್ಸೀನ್‌ ಬೋಟುಗಳಿಗೆ ಕಳೆದ 2-3 ತಿಂಗಳಿಂದ ಮೀನು ಸಿಗುತ್ತಿಲ್ಲ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಉತ್ತಮ ಮೀನು ಸಿಗುತ್ತಿತ್ತು. ಬಂಗುಡೆ, ತಾರ್ಲಿ ಸಿಗುತ್ತಿದ್ದವು. ಗುಂಪಾಗಿ ತೆಪ್ಪದಲ್ಲಿ ಬರುವ ಮೀನುಗಳು ಸಿಗುವುದರಿಂದ ಪರ್ಸಿನ್‌ ಬೋಟುಗಳ ಮಾಲೀಕರಿಗೆ ಸಾಕಷ್ಟು ಆದಾಯ ಸಿಗುತ್ತಿತ್ತು. ಆದರೆ ಈ ಬಾರಿ ಮೀನು ಸಿಗದೆ ತೀವ್ರ ಸಂಕಷ್ಟ ಅನುಭವಿಸಬೇಕಾಗಿದೆ.
•ಸುಧಾಕರ ಜಾಂಬಾವಾಳಿಕರ, ಮೀನುಗಾರ ಮುಖಂಡ ಬೇಲೇಕೇರಿ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.