ಆನ್‌ಲೈನ್‌ ಮದುವೆಯಾದ ಮಾಜಿ ಸಚಿವರ ಮರಿ ಮೊಮ್ಮಗ


Team Udayavani, Jul 27, 2020, 2:07 PM IST

ಆನ್‌ಲೈನ್‌ ಮದುವೆಯಾದ ಮಾಜಿ ಸಚಿವರ ಮರಿ ಮೊಮ್ಮಗ

ಭಟ್ಕಳ: ಕೋವಿಡ್ ಸಮಯದಲ್ಲಿ ಜನ ಪರಿಸ್ಥಿತಿಗೆ ಹೊಂದಿಕೊಂಡು ಜೀವನ ಸಾಗಿಸಲು ಪ್ರಾರಂಭಿಸಿದ್ದಾರೆ. ಅದಕ್ಕೆ ತಕ್ಕಂತೆ ಕೆಲ ಬದಲಾವಣೆಗಳನ್ನೂ ಮಾಡಿಕೊಂಡಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ಆನ್‌ಲೈನ್‌ ಮದುವೆ ನಡೆದಿದೆ.

ಭಟ್ಕಳ ಮೂಲದ ಆದಿಲ್‌ ಕೌಡ ಮಾಲ್ಡೀವ್ಸ್‌ನಲ್ಲಿ ಪೈಲೆಟ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಲಾಕ್‌ ಡೌನ್‌ ಪೂರ್ವ ಬೆಂಗಳೂರಿಗೆ ಬಂದು ನೆಲೆಸಿದ್ದರು. ಈ ನಡುವೆ ಇವರ ಹೆತ್ತವರು ಚೆನೈ ಮೂಲದ ಅಂಬೂರು ನಿವಾಸಿ ಆಫಿಯಾ ಮರಿಯಮ್‌ ಎನ್ನುವ ಕನ್ಯೆಯೊಂದಿಗೆ ನಿಶ್ಚಿತಾರ್ಥ ಮಾಡಿದ್ದು, ಇನ್ನೇನು ಲಾಕ್‌ಡೌನ್‌ ಮುಗಿದೇ ಹೋಗುತ್ತದೆ ಎಂದು ಮದುವೆ ದಿನಾಂಕ ಕೂಡಾ ನಿಗದಿ ಮಾಡಿದ್ದರು.

ಆದರೆ ಕೋವಿಡ್ ಮಹಾಮಾರಿ ಯಾರನ್ನೂ ಬಿಟ್ಟಿಲ್ಲ ಎನ್ನುವಂತೆ ಮದುವೆಗೆ ಅಡ್ಡಿಯಾಗಿತ್ತು. ನೂರಾರು ಕಿ.ಮೀ. ದೂರದಲ್ಲಿರುವ ವಧು-ವರರು ಪರಸ್ಪರ ನಿಗದಿಯಾಗಿದ್ದ ಸಮಯದಲ್ಲಿಯೇ ಮದುವೆಯಾಗಬೇಕು ಎಂದು ನಿರ್ಣಯಿಸಿದ್ದರು. ಎರಡೂ ಕಡೆಯವರಿಗೆ ಮದುವೆ ಮುಂದೆ ಹಾಕಲು ಇಚ್ಚೆ ಇರಲಿಲ್ಲ. ಆದರೆ ಸರಕಾರದ ನಿಯಮಾವಳಿಯಂತೆ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಬರುವುದು, ಹೋಗುವುದು ಎರಡೂ ಕಷ್ಟಕರವಾಗಿತ್ತು. ಇಂತಹ ಸಂದರ್ಭದಲ್ಲಿ ಎರಡೂ ಕುಟುಂಬದವರು ಪರಸ್ಪರ ಮಾತುಕತೆಯಿಂದ ಒಪ್ಪಿ ಆನ್‌ಲೈನ್‌ ಮದುವೆ ಮಾಡಲು ನಿರ್ಣಯಿಸಿದ್ದು, ಕಳೆದ ಶುಕ್ರವಾರ ಬೆಂಗಳೂರಿನಲ್ಲಿರುವ ಯುವಕ, ಚೆನೈನಲ್ಲಿರುವ ಯುವತಿ ಪರಸ್ಪರ ಆನ್‌ಲೈನ್‌ ವಿವಾಹ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಹಿತೈಷಿಗಳು ನೂರಾರು ಸಂಖ್ಯೆಯಲ್ಲಿ ಆನ್‌ಲೈನ್‌ನಲ್ಲಿಯೇ ಮದುವೆಗೆ ಸಾಕ್ಷಿಯಾಗಿ ಪರಸ್ಪರ ಶುಭಾಶಯ ಕೋರಿದರು.

ಅಷ್ಟಕ್ಕೂ ಮದುವೆಯಾದ ವರ ಭಟ್ಕಳದಲ್ಲಿ ಅತ್ಯಂತ ಜನಪ್ರಿಯರಾಗಿದ್ದ ರಾಜ್ಯದ ಮಾಜಿ ಸಚಿವ ದಿವಂಗತ ಶಂಶುದ್ಧೀನ್‌ ಜುಕಾಕೋ ಅವರ ಮರಿ ಮೊಮ್ಮಗ ಎನ್ನುವುದು ವಿಶೇಷ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.