ಗೋಮಾಳ ಖಾಸಗಿ ಸಂಸ್ಥೆಗಳಿಗೆ ನೀಡುವುದಕ್ಕೆ ವಿರೋಧ

ಬಂಡವಾಳದಿಂದ ಅಭಿವೃದ್ಧಿಪಡಿಸಿ ಫಲವತ್ತಾದ ಕೃಷಿ ಯೋಗ್ಯ ಜಮೀನುಗಳನ್ನಾಗಿಸಿದ್ದಾರೆ.

Team Udayavani, Feb 3, 2022, 6:26 PM IST

ಗೋಮಾಳ ಖಾಸಗಿ ಸಂಸ್ಥೆಗಳಿಗೆ ನೀಡುವುದಕ್ಕೆ ವಿರೋಧ

ಅಂಕೋಲಾ: ಗೋಮಾಳ-ಗೈರಾಣು ಮುಂತಾದ ಜಮೀನುಗಳನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ರಾಜ್ಯ ಸರಕಾರದ ಪ್ರಸ್ತಾಪಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸರಕಾರವು ಗೋಮಾಳ, ಗೈರಾಣು, ಹುಲ್ಲುಬನ್ನಿ, ಸೊಪ್ಪಿನ ಬೆಟ್ಟ ಮುಂತಾದ ಜಮೀನುಗಳನ್ನು ಅದರಲ್ಲಿ ಹಾಲಿ ಸಾಗುವಳಿ ನಿರತ ಬಡ ರೈತ ಹಾಗೂ ಕೃಷಿ ಕೂಲಿಕಾರರು ಮತ್ತು ಕಸುಬುದಾರರನ್ನು ಒಕ್ಕಲೆಬ್ಬಿಸಿ ಖಾಸಗಿ ಸಂಸ್ಥೆಗಳಿಗೆ ನೀಡುವ ದುರುದ್ದೇಶದಿಂದ ಒಂದು ನೀತಿ ರೂಪಿಸಲು ಸಚಿವರ ಉಪ ಸಮಿತಿ ರಚಿಸಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಮನವಿಯಲ್ಲಿ ಬಲವಾಗಿ ಖಂಡಿಸಿದೆ.

ಈ ಬಡ ರೈತರು, ಕೃಷಿಕೂಲಿಕಾರರು, ಇಂತಹ ದಶ ಲಕ್ಷಾಂತರ ಎಕರೆ ಪ್ರದೇಶಗಳನ್ನು, ತಮ್ಮ ಸ್ವಂತ ಕುಟುಂಬದ ಶ್ರಮ ಮತ್ತು ದುಬಾರಿ ಬಡ್ಡಿ ಸಾಲದ ಬಂಡವಾಳದಿಂದ ಅಭಿವೃದ್ಧಿಪಡಿಸಿ ಫಲವತ್ತಾದ ಕೃಷಿ ಯೋಗ್ಯ ಜಮೀನುಗಳನ್ನಾಗಿಸಿದ್ದಾರೆ. ಅವುಗಳಲ್ಲಿ ದಶ ಲಕ್ಷಾಂತರ ಟನ್‌ ಗಳಷ್ಟು ಬೆಳೆಯನ್ನು ಬೆಳೆದು ರಾಜ್ಯದ ಆಹಾರದ ಭದ್ರತೆಗೆ ಹಾಗೂ ಆಂತರಿಕ ಕೃಷಿ ಉತ್ಪಾದನೆಯ ಹೆಚ್ಚಳಕ್ಕೆ ಕಾರಣೀಭೂತರಾಗಿದ್ದಾರೆ.

ಇಂತಹ ಬಹುತೇಕ ರೈತರು ಈಗಾಗಲೇ ಹಕ್ಕು ಪತ್ರಕ್ಕಾಗಿ ಕರ್ನಾಟಕ ಸರಕಾರದ ಕರೆಯಂತೆ ಫಾರ್ಮ್- 57 ಭರ್ತಿ ಮಾಡಿ ಸರಕಾರಕ್ಕೆ ಸಲ್ಲಿಸಿದ್ದಾರೆ. ಇನ್ನು ಹಲವರು ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಬಡವರನ್ನು ವಂಚಿಸಿ ಕಾರ್ಪೊರೇಟ್‌ ಕಂಪನಿಗಳಿಗೆ ವಹಿಸಿಕೊಡುವ ದುರ್ನಡೆಯಾಗಿದೆ. ಆದ್ದರಿಂದ ರಾಜ್ಯ ಸರಕಾರ ತಕ್ಷಣವೇ ಬಡವರು ಅಭಿವೃದ್ಧಿ ಪಡಿಸಿದ ಈ ಜಮೀನುಗಳನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಕ್ರಮವನ್ನು ಈ ಕೂಡಲೇ ನಿಲ್ಲಿಸಬೇಕು. ಅಂತಹ ಬಡವರ ವಿರೋಧಿ ಹಾಗೂ ಲೂಟಿಕೋರ ಕಾರ್ಪೊರೇಟ್‌ ನೀತಿಗಾಗಿ ರಚಿಸಲಾದ ಸಚಿವರ ಉಪ ಸಮಿತಿಯನ್ನು ರದ್ದು ಪಡಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸರಕಾರವನ್ನು ಬಲವಾಗಿ ಒತ್ತಾಯಿಸುತ್ತದೆ.

ಅದೇ ರೀತಿ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ಮಾಡಿ, ನಗರ ಹಾಗೂ ಗ್ರಾಮಿಣ ಪ್ರದೇಶದ ಫಾರ್ಮ್- 57 ಸಲ್ಲಿಸದ ಎಲ್ಲ ಬಡ ಸಾಗುವಳಿದಾರರಿಗೆ ಹೊಸದಾಗಿ ಅರ್ಜಿ ಹಾಕಿಕೊಳ್ಳಲು ಅವಕಾಶ ನೀಡಬೇಕು. ಈಗಾಗಲೇ ಸಲ್ಲಿಸಲಾದ ಅರ್ಜಿಗಳ ವಿಲೇವಾರಿಗಾಗಿ ಭೂ ಮಂಜೂರಾತಿ ಸಮಿತಿಗಳನ್ನು ರಾಜ್ಯದಾದ್ಯಂತ ನೇಮಕ ಮಾಡಬೇಕು ಹಾಗೂ ಹಕ್ಕು ಪತ್ರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ತಹಶೀಲ್ದಾರ್‌ ಉದಯ ಕುಂಬಾರ ಮನವಿ ಸ್ವೀಕರಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ, ತಾಲೂಕು ಅಧ್ಯಕ್ಷ ಗೌರೀಶ ನಾಯಕ, ಕಾರ್ಯದರ್ಶಿ ಸಂತೋಷ ನಾಯ್ಕ, ಸಹಕಾರ್ಯದರ್ಶಿ ಉದಯ ನಾಯ್ಕ, ಸದಸ್ಯ ಶೇಖ್‌ ಇಸೂಬ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.