ಕಟ್ಟಡ ನಿರ್ಮಾಣಕ್ಕೆ ವಿರೋಧ
ಕಟ್ಟಡ ನಿರ್ಮಾಣಕ್ಕೆ ವಿರೋಧ •ಕ್ರೀಡಾಂಗಣದಲ್ಲಿ ಖಾಲಿ ಇರುವ ಸ್ಥಳದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಿ
Team Udayavani, May 1, 2019, 1:32 PM IST
ಅಂಕೋಲಾ: ಅನಾದಿ ಕಾಲದಿಂದ ಶಾಲಾ ವಿದ್ಯಾರ್ಥಿಗಳು, ಊರ ನಾಗರಿಕರು, ಯುವಕ ಸಂಘದವರು ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಂಡು ಬಂದಿರುವ ಕ್ರೀಡಾಂಗಣದಲ್ಲಿ ಯಾವುದೇ ಕಟ್ಟಡ ಕಟ್ಟಬಾರದು ಎಂದು ಗೋಕರ್ಣ ಅರ್ಬನ್ ಬ್ಯಾಂಕಿನ ನಿರ್ದೇಶಕ ಮಹೇಶ ನಾಯಕ ಹೇಳಿದರು.
ಅವರು ಪ್ರಭಾರ ಉಪ ತಹಶೀಲ್ದಾರ್ ಎಸ್.ಟಿ ಹರಿಕಂತ್ರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ಮಾದನಗೇರಿ ಹಿ.ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ಶಾಲೆ ಪ್ರಾರಂಭವಾದಾಗಿನಿಂದ ಇದೊಂದೇ ಕ್ರೀಡಾಂಗಣವಿದ್ದು ಅಂಕೋಲಾ ಮತ್ತು ಕುಮಟಾ ತಾಲೂಕಿನ ಕ್ರೀಡಾಸಕ್ತರು ಈ ಕ್ರೀಡಾಂಗಣದಲ್ಲಿಯೇ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆಕಸ್ಮಿಕವಾಗಿ ಈ ಕ್ರೀಡಾಂಗಣದಲ್ಲಿಯೇ ರೈತಸಂಪರ್ಕ ಕೇಂದ್ರವನ್ನು ನಿರ್ಮಿಸುವ ಕಾರ್ಯಕ್ಕೆ ಕೃಷಿ ಇಲಾಖೆ ಮುಂದಾಗಿದೆ. ಕ್ರೀಡಾಂಗಣದ ಸ್ಥಳ ಬಿಟ್ಟು ಖಾಲಿ ಇರುವ ಸ್ಥಳದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಿ ಎಂದರು.
ಸಗಡಗೇರಿ ಗ್ರಾಪಂ ಸದಸ್ಯ ಸತೀಶ ಗೌಡ ಮಾತನಾಡಿ ಸಂಬಂದಪಟ್ಟ ಅಕಾರಿಗಳು ಈ ಕುರಿತು ಗಮನಹರಿಸಿ ಕ್ರೀಡಾಂಗಣವನ್ನು ಉಳಿಸುವ ಕೆಲಸ ಮಾಡಬೇಕಾಗಿದೆ ಎಂದರು. ಸಗಡಗೇರಿ ಗ್ರಾಪಂ ಮಾಜಿ ಉಪಾದ್ಯಕ್ಷ ನಾಗರಾಜ ನಾಯಕ ಮಾತನಾಡಿ ಬಳಲೆ ಮತ್ತು ಮಾದನಗೇರಿಯ ಈ ಕ್ರೀಡಾಂಗಣ ಬಹಳ ಹಳೆಯ ಕ್ರೀಡಾಂಗಣವಾಗಿದ್ದು ಅಧಿಕಾರಿಗಳು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಮುಂದಾಗಲಿ ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಧರ ನಾಯ್ಕ, ಎನ್.ಜಿ. ಅಂಬಿಗ, ರಮೇಶ ಲಮಾಣಿ, ಗ್ರಾಮ ಲೆಕ್ಕಾಧಿಕಾರಿ ಸಿ.ಎನ್ ಗುನಗಾ, ತೊರ್ಕೆ ಗ್ರಾಪಂ ಸದಸ್ಯ ನಾರಾಯಣ ನಾಯ್ಕ, ಗೋಕರ್ಣ ಅರ್ಬನ್ ಬ್ಯಾಂಕ್ ನಿರ್ದೇಶಕ ತಿಮ್ಮಣ್ಣ ನಾಯಕ, ಶಾಲಾಭಿವೃದ್ಧಿ ಸಮೀತಿ ಅಧ್ಯಕ್ಷ ರಾಜು ಹರಿಕಂತ್ರ, ಸದಸ್ಯ ಕೇಶವ ಗೌಡ, ಕಿರಣ ಹೊಸಕಟ್ಟಾ, ಗುರು ಗೌಡ, ಸುದಾಕರ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ