ಅಭಯಾರಣ್ಯ ಶಿವಮೊಗ್ಗ ಸೇರ್ಪಡೆಗೆ ವಿರೋಧ

•ಶರಾವತಿ ಕಣಿವೆ ಅಭಯಾರಣ್ಯಕ್ಕೆ ಅಘನಾಶಿನಿ ಸಂರಕ್ಷಿತ ಪ್ರದೇಶ ಸೇರ್ಪಡೆಗೆ ಸಿದ್ಧತೆ

Team Udayavani, Jun 8, 2019, 10:45 AM IST

uk-tdy-1..

ಶಿರಸಿ: ಉತ್ತರ ಕನ್ನಡದ ಸಂರಕ್ಷಿತ ಅರಣ್ಯವನ್ನು ಶಿವಮೊಗ್ಗ ಜಿಲ್ಲೆಗೆ ಸೇರಿಸುವ ಹುನ್ನಾರ ನಡೆದಿದೆ. ಶರಾವತಿ ಕಣಿವೆ ಅಭಯಾರಣ್ಯಕ್ಕೆ ಅಘನಾಶಿನಿ ಸಂರಕ್ಷಿತ ಪ್ರದೇಶ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ವನ್ಯಜೀವಿ ಅರಣ್ಯ ಇಲಾಖೆ ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದೆ ಎಂದು ವೃಕ್ಷಲಕ್ಷ ಆಂದೋಲನದ ಮುಖ್ಯಸ್ಥ ಅನಂತ ಅಶೀಸರ ಬಹಿರಂಗಗೊಳಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡದ ಅಘನಾಶಿನಿ ಅಭಯಾರಣ್ಯವನ್ನು ಶಿವಮೊಗ್ಗಕ್ಕೆ ಸೇರ್ಪಡೆ ಮಾಡುವ ಪ್ರಕ್ರಿಯೆಯನ್ನು ಸಚಿವರು, ಸಂಸದರು, ಶಾಸಕರು ತಡೆಯಬೇಕು ಎಂದೂ ಹಕ್ಕೊತ್ತಾಯ ಮಾಡಿದ್ದಾರೆ. ಈ ಕುರಿತು ರಾಜ್ಯ ವನ್ಯಜೀವಿ ಮಂಡಳಿ ಅಧ್ಯಕ್ಷರಿಗೆ ಜಿಲ್ಲಾ ಅರಣ್ಯ ಅಧಿಕಾರಿ ಮೂಲಕ ಜೂ.11ರಂದು ಶಿರಸಿಯಲ್ಲಿ ಅಹವಾಲು ಸಲ್ಲಿಕೆ ಕೂಡ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಕಳೆದ 4 ತಿಂಗಳಲ್ಲಿ ಚುನಾವಣೆಯಲ್ಲಿ ನಿರತವಾಗಿರುವ ಹೊತ್ತಿಗೆ ರಾಜ್ಯ ವನ್ಯಜೀವಿ ಅರಣ್ಯ ಇಲಾಖೆ ಉತ್ತರ ಕನ್ನಡ ಜಿಲ್ಲೆಯ ಅರಣ್ಯಗಳನ್ನು ಶಿವಮೊಗ್ಗ ಅರಣ್ಯ ಇಲಾಖೆಗೆ ಸೇರ್ಪಡೆ ಮಾಡುವ ಪ್ರಸ್ತಾವನೆ ತಯಾರಿಗೆ ಮುಂದಾಗಿತ್ತು. 2019, ಜ.9ರಂದು ರಾಜ್ಯ ವನ್ಯಜೀವಿ ಮಂಡಳಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಸೇರಿತ್ತು. ಅಂದು ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಶರಾವತಿ ಅಭಯಾರಣ್ಯಕ್ಕೆ ಕೆನರಾ ಅರಣ್ಯ ವೃತ್ತದ ಅಘನಾಶಿನಿ ಕಣಿವೆಯ 30000 ಹೆಕ್ಟೇರ್‌ ಅರಣ್ಯ ಪ್ರದೇಶ ಸೇರ್ಪಡೆ ಮಾಡುವ ಪ್ರಸ್ತಾವನೆಯನ್ನು ಅರಣ್ಯ ಇಲಾಖೆ ಮಂಡಿಸಿ ಅನುಮೋದನೆ ಕೂಡ ಪಡೆದಿದೆ. ವನ್ಯಜೀವಿ ಇಲಾಖೆ ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಈ ಕುರಿತ ವಿವರ ವರದಿಯನ್ನೂ ಸಿದ್ಧಗೊಳಿಸಿದೆ. ಬೆಂಗಳೂರು, ಶಿವಮೊಗ್ಗ, ಜೋಗಗಳಲ್ಲಿ ಅರಣ್ಯ ಅಧಿಕಾರಿಗಳ ಸಭೆ ನಡೆಸಿತು. ನಕಾಶೆ, ತಾಂತ್ರಿಕ ಪ್ರಸ್ತಾವನೆ ಅಖೈರುಗೊಳಿಸಿದೆ ಎಂದು ಅಶೀಸರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ಅಧಿಕೃತ ಸರ್ಕಾರಿ ಆದೇಶ ಹೊರಡಿಸಲು ವನ್ಯಜೀವಿ ಅರಣ್ಯ ಇಲಾಖೆ ಮುಂದಾಗಿದೆ. ಕರಡು ನೋಟಿಫಿಕೇಶನ್‌ ಪ್ರಕಾರ ಶರಾವತಿ ಅಭಯಾರಣ್ಯ ಸಾಗರ ತಾಲೂಕು ವ್ಯಾಪ್ತಿಯಲ್ಲಿದೆ. ಈಗ ಉ.ಕ ಜಿಲ್ಲೆಯ ಅರಣ್ಯಗಳನ್ನು ಸೇರಿಸಿ ಶರಾವತಿ ಸಿಂಗಳೀಕ ಅಭಯಾರಣ್ಯ ಎಂದು ಘೋಷಿಸಲು ಸರ್ಕಾರ ಹೊರಟಿದೆ. ಸಾಗರ ತಾಲೂಕಿನ 3000 ಹೆಕ್ಟೇರ್‌ ಅರಣ್ಯ ಪ್ರದೇಶಗಳು ಶರಾವತಿ ಅಭಯಾರಣ್ಯಕ್ಕೆ ಸೇರ್ಪಡೆ ಆಗಲಿವೆ. ಜೊತೆಗೆ ಉ.ಕ ಜಿಲ್ಲೆಯ ಅಘನಾಶಿನಿ ಸುಮಾರು 30000 ಹೆಕ್ಟೇರ್‌ ಸಂರಕ್ಷಿತ ಪ್ರದೇಶವನ್ನು ಶರಾವತಿ ಅಭಯಾರಣ್ಯಕ್ಕೆ ಸೇರ್ಪಡೆ ಮಾಡುವ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ಹೇಳಿದ್ದಾರೆ.

2012ರಲ್ಲಿ ಪಶ್ಚಿಮಘಟ್ಟ ಕಾರ್ಯಪಡೆ ಶಿಫಾರಸಿನಂತೆ ಅಘನಾಶಿನಿ ಸಿಂಗಳೀಕ ಸಂರಕ್ಷಿತ ಪ್ರದೇಶ ಎಂದು ವನ್ಯಜೀವಿ ಕಾಯಿದೆ ಅಡಿಯಲ್ಲಿ ಘೋಷಿಸಲಾಗಿತ್ತು. ಇದನ್ನು ಸ್ಥಳೀಯ ಜನತೆಯ ಕೋರಿಕೆಯಂತೆ, ಅಭಿಪ್ರಾಯ, ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಈಗ ಏಕಪಕ್ಷೀಯವಾಗಿ, ಸ್ಥಳೀಯರು, ಜನಪ್ರತಿನಿಧಿಗಳು, ಪರಿಸರ, ವನ್ಯಜೀವಿ ಕಾರ್ಯಕರ್ತರ ಅಭಿಪ್ರಾಯ ಕೇಳದೆ ಈ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ ಎಂದು ವೃಕ್ಷಲಕ್ಷ ಅಭಿಪ್ರಾಯ ನೀಡಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.