ಅವೈಜ್ಞಾನಿಕ ಬಾಂಬ್‌ ಸಿಡಿಸಲು ವಿರೋಧ

•ಮನೆಗಳ ಮೇಲೆ ಕಲ್ಲಿನ ಸುರಿಮಳೆ•ಜೀವ ಭಯದಿಂದ ಮನೆ ತೊರೆದ ಸ್ಥಳೀಯರು

Team Udayavani, May 18, 2019, 2:52 PM IST

uk-tdy-3..

ಕುಮಟಾ: ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ತಡೆದು ಐಆರ್‌ಬಿ ವಿರುದ್ಧ ಪ್ರತಿಭಟನೆ ನಡೆಸಿದರು.

ಕುಮಟಾ: ದಿವಗಿ ಗ್ರಾಪಂ ವ್ಯಾಪ್ತಿಯ ತಂಡ್ರಕುಳಿಯಲ್ಲಿ ಚತುಷ್ಪಥ ಕಾಮಗಾರಿಗಾಗಿ ಶುಕ್ರವಾರ ಬಂಡೆ ಒಡೆಯಲು ಅವೈಜ್ಞಾನಿಕವಾಗಿ ಬಾಂಬ್‌ ಸಿಡಿಸಿರುವುದನ್ನು ವಿರೋಧಿಸಿ ಸ್ಥಳೀಯರು ಕೆಲಗಂಟೆಗಳ ಕಾಲ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ತಂಡ್ರಕುಳಿಯಲ್ಲಿ ಚತುಷ್ಪಥ ಕಾಮಗಾರಿಗಾಗಿ ಮಧ್ಯಾಹ್ನ ಅವೈಜ್ಞಾನಿಕವಾಗಿ ಸಿಡಿಮದ್ದನ್ನು ಸ್ಫೊಧೀಟಿಸಿದ್ದರಿಂದ ಮನೆ, ಶಾಲೆ, ಅಂಗನವಾಡಿಗಳ ಮೇಲೆ ಭಾರೀ ಗಾತ್ರದ ಕಲ್ಲುಗಳ ಸುರಿಮಳೆಯಾಗಿ ಸ್ಥಳೀಯರು ಜೀವಭಯದಿಂದ ಮನೆ ಬಿಟ್ಟಿದ್ದಾರೆ. ಸಿಡಿದ ಕಲ್ಲುಗಳು ಸೂರನ್ನು ಒಡೆದುಕೊಂಡು ಒಳಗೆ ಬಿದ್ದರೂ ಅದೃಷ್ಟವಶಾತ್‌ ಯಾರಿಗೂ ಜೀವಾಪಾಯವಾಗಿಲ್ಲ. ರಾಘವೇಂದ್ರ ಅಪ್ಪಯ್ಯ ಅಂಬಿಗ ಎಂಬುವವರ ಮನೆಯ ಕೋಣೆಯೊಳಗೆ ಮಕ್ಕಳು ಮಲಗಿದ್ದ ಹಾಸಿಗೆ ಪಕ್ಕವೇ ದೊಡ್ಡ ಕಲ್ಲು ಬಿದ್ದಿದ್ದು, ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ. ಶಾಲೆಯ ಹಂಚುಗಳನ್ನು ಪುಡಿಗಟ್ಟಿ ಒಳಗೆ ಕಲ್ಲುಗಳು ಬಿದ್ದಿದ್ದು, ಒಂದೊಮ್ಮೆ ಕೊಠಡಿಯಲ್ಲಿ ಮಕ್ಕಳು ಇದ್ದಿದ್ದರೆ ಏನಾಗಬಹುದಿತ್ತು ಎಂದು ಜನ ಪ್ರಶ್ನಿಸಿದ್ದಾರೆ.

ತಕ್ಷಣ ಸಂಘಟಿತರಾದ ಗ್ರಾಮಸ್ಥರು ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಐಆರ್‌ಬಿಯವರು ಅವೈಜ್ಞಾನಿಕವಾಗಿ ಬಾಂಬ್‌ ಸಿಡಿಸುವುದನ್ನು ವಿರೋಧಿಸಿ ಪ್ರತಿಭಟಿಸಿದರು. 2 ತಾಸುಗಳಾದರೂ ಐಆರ್‌ಬಿ ಅಥವಾ ಸರ್ಕಾರದ ಯಾವ ಅಧಿಕಾರಿಯೂ ಸ್ಥಳಕ್ಕೆ ಬಾರದೇ ಇರುವುದು ಜನರ ಆಕ್ರೋಶ ಹೆಚ್ಚಲು ಕಾರಣವಾಯಿತು. ನಂತರ ಸ್ಥಳೀಯರು ಹೆದ್ದಾರಿ ತಡೆ ನಡೆಸಿ ನ್ಯಾಯಕ್ಕಾಗಿ ಘೋಷಣೆ ಕೂಗಲಾರಂಭಿಸಿದರು. ಸಿಪಿಐ ಸಂತೋಷ ಶೆಟ್ಟಿ, ತಹಶೀಲ್ದಾರ್‌ ಪಿ.ಕೆ. ದೇಶಪಾಂಡೆ, ಪಿಎಸೈ ಈಸಿ ಸಂಪತ್‌ ಸ್ಥಳಕ್ಕೆ ಆಗಮಿಸಿ ಘಟನೆಯ ಮಾಹಿತಿ ಪಡೆದರು. ಬಾಂಬ್‌ ಸ್ಫೊಧೀಟದಿಂದ ನೂರಾರು ಮೀಟರು ದೂರಕ್ಕೆ ಸಿಡಿದ ದೊಡ್ಡ ಕಲ್ಲುಗಳು ಉಂಟು ಮಾಡಿದ ಹಾನಿಯನ್ನು ಕಂಡು ದಂಗಾದರು.

ದಿವಗಿ ಪಂಚಾಯಿತಿ ಮಾಜಿ ಸದಸ್ಯ ಆರ್‌.ಕೆ. ಅಂಬಿಗ ಮಾತನಾಡಿ, ಚತುಷ್ಪಥ ಕಾಮಗಾರಿಯಿಂದ ತಂಡ್ರಕುಳಿಯಲ್ಲಿ ವರ್ಷದ ಹಿಂದೆ ಮೂರು ಜೀವಗಳ ಹಾನಿಯಾಗಿದೆ. ಪರಿಹಾರ ಕೊಡುತ್ತೇವೆ ಊರುಬಿಡಿ ಎಂದ ಸರ್ಕಾರ ಈವರೆಗೆ ನಯಾಪೈಸೆ ಜನರಿಗೆ ಕೊಟ್ಟಿಲ್ಲ. ದಿಕ್ಕಿಲ್ಲದ ಜನ ಪುನಃ ತಂಡ್ರಕುಳಿಯಲ್ಲೇ ಗೂಡುಕಟ್ಟಿಕೊಂಡು ಬದುಕು ನಡೆಸುತ್ತಿದ್ದಾರೆ. ಸ್ಥಳೀಯರಿಗೆ ಹೇಳದೇ ಕೇಳದೇ ಅವೈಜ್ಞಾನಿಕವಾಗಿ ಬಾಂಬ್‌ ನ್ಪೊಧೀಟಿಸಿದ್ದಾರೆ. ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆ ಐಆರ್‌ಬಿ ಕಂಪನಿಯದ್ದಾಗಿದೆ. ನಮಗೆ ಭರವಸೆ ಕೊಟ್ಟಂತೆ ಅಧಿಕಾರಿಗಳು ನಡೆದುಕೊಳ್ಳಬೇಕು. ಇಲ್ಲವಾದರೆ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದರು.

ಅಂಬಿಗ ಸಮಾಜದ ಕಾರ್ಯದರ್ಶಿ ಗಣೇಶ ಅಂಬಿಗ ಮಾತನಾಡಿ, ಅಧಿಕಾರಿಗಳು ತಂಡ್ರಕುಳಿಯ ಜನತೆಗೆ ಪರಿಹಾರದ ಬಗ್ಗೆ ಕೊಟ್ಟ ಭರವಸೆಯನ್ನು ಮೊದಲು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪೊಲೀಸ್‌ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿದ ತಹಶೀಲ್ದಾರ ದೇಶಪಾಂಡೆಯವರು ಈ ಕೂಡಲೇ ಇಲ್ಲಿನ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲಾಗುವುದು. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ದಿನಾಂಕ ನಿಗದಿ ಪಡಿಸಿ ಉಪವಿಭಾಗಾಧಿಕಾರಿಗಳ ಸಮಕ್ಷಮ ಸ್ಥಳೀಯರ ಸಭೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲಾಗುವುದು ಎಂದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.