![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪಂಪ್ಸೆಟ್ ಸ್ಥಗಿತಕ್ಕೆ ಆದೇಶ
•ನದಿ ನೀರಿನ ಹರಿವು ಕ್ಷೀಣ•ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
Team Udayavani, May 11, 2019, 3:35 PM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಕಾರವಾರ: ಗಂಗಾವಳಿ ನದಿ ಪಾತ್ರದಲ್ಲಿ ನೀರಿನ ಹರಿವು ಪ್ರಮಾಣ ಕಡಿಮೆಯಾಗಿರುವುದರಿಂದ ಕುಡಿಯುವ ನೀರು ಸರಬರಾಜಾಗುವ ಗಂಗಾವಳಿ ನದಿ ದಂಡೆಯ ಕೆಲ ಗ್ರಾಮಗಳ ತೋಟಪಟ್ಟಿಗಳಿಗೆ ಅಳವಡಿಸಿರುವ ಕೃಷಿ ಪಂಪ್ಸೆಟ್ಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಕಾರವಾರ ಮತ್ತು ಅಂಕೋಲ ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಡಾ| ಹರೀಶ್ಕುಮಾರ್ ಆದೇಶಿಸಿದ್ದಾರೆ.
ಕಾರವಾರ ಮತ್ತು ಅಂಕೋಲಾ ಪಟ್ಟಣಗಳ ಜನ ವಸತಿಗೆ ಕುಡಿಯುವ ನೀರಿನ ಸರಬರಾಜಿಗೆ ಪ್ರಮುಖ ನೀರಿನ ಮೂಲವಾಗಿರುವ ಗಂಗಾವಳಿ ನದಿ ಪಾತ್ರದಲ್ಲಿ ಮಳೆಯಾಗಿಲ್ಲದಿರುವುದರಿಂದ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಪರಿಣಾಮ ಕುಡಿಯುವ ನೀರಿನ ಸರಬರಾಜು ಬಹುತೇಕ ಸ್ಥಗಿತವಾಗಿದೆ. ನದಿಯಲ್ಲಿ ದಿನವೂ 5 ಲಕ್ಷ ಲೀಟರ್ ನೀರು ಪೂರೈಸಲು ಇರುವ ಜಲಮೂಲ ತೋಟಪಟ್ಟಿಗಳಿಗೆ ಬಳಸುತ್ತಿರುವ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕಿದ್ದು, ಅದನ್ನು ತಕ್ಷಣ ಕಡಿತಗೊಳಿಸಲು ಅಧಿಕಾರಿ ವರ್ಗಕ್ಕೆ ಜಿಲ್ಲಾಡಳಿತ ಸೂಚಿಸಿದೆ. ಈ ವಿಷಯದಲ್ಲಿ ಖಡಕ್ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಗಂಗಾವಳಿ ನದಿ ನೀರನ್ನು ಕೆಲವರು ಮಾತ್ರ ಬಳಸಿಕೊಳ್ಳುತ್ತಿರುವ ರಹಸ್ಯ ಮಾಹಿತಿ ಸಹ ಜಿಲ್ಲಾಡಳಿತಕ್ಕೆ ದೊರೆತಿದೆ. ಅಲ್ಲದೇ ಗಂಗಾವಳಿ ಹಿನ್ನೀರಿನ ಭಾಗದಲ್ಲಿ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್ಗ್ಳನ್ನು ಸ್ಥಗಿತಗೊಳಿಸಬೇಕಾಗಿದೆ. ಹೆಸ್ಕಾಂ ಅಧಿಕಾರಿಗಳು, ಕಾರವಾರ ನಗರಸಭೆ ಹಾಗೂ ಅಂಕೋಲ ಪುರಸಭೆ ಅಧಿಕಾರಿಗಳು ಪಂಪ್ಸೆಟ್ಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮೇ ತಿಂಗಳಲ್ಲಿ ಘಟ್ಟದ ಮೇಲ್ಭಾಗದಲ್ಲಿ ಮಳೆಯಾಗಿದ್ದರೆ ಗಂಗಾವಳಿ ನದಿಗೆ ನೀರಿನ ಹರಿವು ಸಮರ್ಪಕವಾಗುತ್ತಿತ್ತು. ಆದರೆ ಮಳೆಯಾಗದ ಕಾರಣ ಹಾಗೂ ತೀವ್ರ ಬೇಸಿಗೆ ಕಾರಣ ನೀರಿನ ಹರಿವು ಕಡಿಮೆಯಾಗಿದೆ. ಅಲ್ಲದೆ ಅಂತರ್ಜಲ ಕುಸಿದಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇರುವುದರಿಂದ ಪ್ರಸ್ತುತ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್ಸೆಟ್ಗಳನ್ನು ಸ್ಥಗಿತಗೊಳಿಸುವುದು ಅಗತ್ಯವಿದೆ. ಅಲ್ಲದೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ. ಕಾರವಾರ ಉಪವಿಭಾಗದ ಸಹಾಯಕ ಆಯುಕ್ತರು ನದಿ ನೀರನ್ನು ತೋಟಗಳಿಗೆ ಬಳಸುವ ಕುರಿತು ಮೇಲ್ವಿಚಾರಣೆ ವಹಿಸಿ, ಪಂಪ್ ಸೆಟ್ ಕನೆಕ್ಷನ್ಗಳನ್ನು ನದಿ ನೀರಿನ ಹರಿವಿನಿಂದ ಸ್ಥಗಿತಗೊಳಿಸಿದ ಕ್ರಮದ ಬಗ್ಗೆ ವರದಿ ನೀಡುವಂತೆ ಅವರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.