ಉತ್ತಮ ನಾಯಕತ್ವಕ್ಕೆ ಸಂಘಟನಾ ಪರ್ವ

•ರಾಷ್ಟ್ರ ರಾಜಕಾರಣದಲ್ಲಿ ವಿರೋಧಿಗಳೇ ಇರಬಾರದು ಎಂಬುದೇ ಉದ್ದೇಶ: ಹೆಗಡೆ

Team Udayavani, Jul 7, 2019, 4:35 PM IST

uk-tdy-6..

ಕುಮಟಾ: ನಾದಶ್ರೀ ಕಲಾಕೇಂದ್ರದಲ್ಲಿ ನಡೆದ ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಸಂಸದ ಅನಂತಕುಮಾರ ಹೆಗಡೆ ಹಾಗೂ ಮಾಜಿ ಸೈನಿಕ ಎನ್‌.ಎನ್‌. ಪಟಗಾರ ಉದ್ಘಾಟಿಸಿದರು.

ಕುಮಟಾ: ಚುನಾವಣೆ ಸಂದರ್ಭದಲ್ಲಿ ಬೇಕಾಗಬಹುದು ಎಂಬ ಹಮಾಲಿಗಳನ್ನು ಸದಸ್ಯತ್ವ ಅಭಿಯಾನದಲ್ಲಿ ಹುಡುಕುತ್ತಿಲ್ಲ. ಬದಲಾಗಿ ಭವಿಷ್ಯದ ಉತ್ತಮ ನಾಯಕರ ಹುಡುಕಾಟಕ್ಕಾಗಿ ಸಂಘಟನಾ ಪರ್ವ ಸದಸ್ಯತಾ ಅಭಿಯಾನ ಆರಂಭಿಸಲಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದರು.

ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಶನಿವಾರ ನಡೆದ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಮಾಜಿ ಸೈನಿಕ ಎನ್‌.ಎನ್‌. ಪಟಗಾರ ಜೊತೆ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ದಾಖಲೆ ನಿರ್ಮಿಸಿದೆ. ಈ ಅಭಿಯಾನದಲ್ಲಿ ಉತ್ತರಕನ್ನಡ ಜಿಲ್ಲೆಯಿಂದ 4 ಲಕ್ಷ ಜನರ ಸದಸ್ಯತ್ವ ನೋಂದಾಯಿಸುವ ಜವಬ್ದಾರಿ ನಮ್ಮಮೇಲಿದೆ. ಪಕ್ಷದ ತತ್ವ ಸಿದ್ಧಾಂತವನ್ನು ಅರಿತು, ನಾನೊಬ್ಬ ಬಿಜೆಪಿಯ ಸದಸ್ಯ ಎಂದು ಹೆಮ್ಮೆಯಿಂದ ಹೇಳುವ ಮನೋಭಾವನೆಯ ಸದಸ್ಯರು ನಮಗೆ ಬೇಕು. ಈ ಸಂಘಟನೆ ಭವಿಷ್ಯ ರಾಜಕೀಯದ ಬೆಳವಣಿಗೆಗೆ ಮುನ್ನುಡಿಯಾಗಲಿದೆ ಎಂದರು.

ರಾಜ್ಯ ಸರ್ಕಾರ ರಾಜ್ಯದ ಅಭಿವೃದ್ಧಿಯ ಹಾದಿ ಹಿಡಿಯಬೇಕು. ಆದರೆ ಈಗಿನ ಸರ್ಕಾರ ಜಾತಿ, ಧರ್ಮ ಹಾಗೂ ಗುಂಪು ರಾಜಕೀಯ ಮಾಡುತ್ತಿವೆ. ಅವರ ಸಮ್ಮಿಶ್ರದ ನಿಲುವೇ ಅವರ ಅರಿವಿಗಿಲ್ಲ. ಆದ್ದರಿಂದ ದಿನಕ್ಕೊಂದು ರಾಜಕೀಯದ ನಾಟಕ ಬಯಲಿಗೆ ಬರುತ್ತಿದೆ. ಅವರ ರಾಜಕೀಯದ ತೆವಲಿಗೆ ರಾಜ್ಯದ ಜನತೆ ಬಲಿಪಶುಗಳಾಗುತ್ತಿದ್ದಾರೆ ಎಂದು ಆರೋಪಿಸಿದರು.

ಇಷ್ಟು ವರ್ಷಗಳ ಕಾಲ ಕಾಂಗ್ರೆಸ್‌ ಕಲ್ಪನೆಯ ದರಿದ್ರತೆ ನಮ್ಮ ದೇಶಕ್ಕೆ ಬಡಿದಿತ್ತು. ಆದರೆ ರಾಷ್ಟ್ರದ ಜನತೆಗೆ ಈಗ ಅರಿವಾಗಿದೆ. ಮೋದಿ ನೇತೃತ್ವದ ನಾಯಕತ್ವವನ್ನು ಜನ ಮೆಚ್ಚಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ವಿರೋಧಿಗಳೇ ಇರಬಾರದು ಎಂಬುದು ನಮ್ಮ ಉದ್ದೇಶ. ಹಿಂದೆ ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಅಂತರವಿತ್ತು. ಅದನ್ನು ಹೋಗಲಾಡಿಸಲು ಇನ್ನೊಂದು ದಾಪುಗಾಲು ಇಡಲಿದ್ದೇವೆ. ಕೇಂದ್ರ ಸರ್ಕಾರದ ನಡತೆಯಿಂದ ಕೆಲ ದಿನಗಳಲ್ಲಿ ಸೈನಿಕರು ಅಜೇಯ ಶಕ್ತಿಯಾಗಿ ಹೊರಬೀಳಲಿದ್ದಾರೆ. ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳ ಪುಂಗಿ ಅಡಗಿದೆ. ರಾಷ್ಟ್ರೀಯ ಅಭಿವೃದ್ಧಿಯ ನಕ್ಷೆಯಲ್ಲಿ ಉತ್ತರಕನ್ನಡವನ್ನು ಬರೆಯಲಾಗಿದೆ. ಅದರ ಫಲವನ್ನು ನೀವೇ ಕಾಣಲಿದ್ದೀರಿ ಎಂದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಭಾರತೀಯರ ಸಾಕ್ಷರತೆ ಹಾಗೂ ಮೋದಿಜಿ ಪ್ರಭಲ ನಾಯಕತ್ವದಿಂದ ಕಾಂಗ್ರೆಸ್‌ ಕಾಲ ಮುಗಿಯುತ್ತಿದೆ. ದೇಶ ಉಳಿಯಲು ಬಿಜೆಪಿ ಬೇಕು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಿದೆ. ಬಿಜೆಪಿಗೆ ಹೆಮ್ಮೆಯಿಂದ ಬರುವವರನ್ನು ಪಕ್ಷ ಸ್ವಾಗತಿಸುತ್ತದೆ. ಆದರೆ ಪಕ್ಷದ ನಿಷ್ಠೆ ಹಾಗೂ ತತ್ವ, ಸಿದ್ಧಾಂತವನ್ನು ಅನುಸರಿಸಬೇಕು. ಪಕ್ಷಕ್ಕಾಗಿ ನಿಸ್ವಾರ್ಥ ಮನೋಭಾವನೆಯಿಂದ ದುಡಿಯಬೇಕು. ಸದಸ್ಯತ್ವ ಅಭಿಯಾನವನ್ನು ಗ್ರಾಮೀಣ ಮಟ್ಟದಲ್ಲೂ ನಡೆಸಬೇಕು ಎಂದರು.

ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಸದಸ್ಯತಾ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು. ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹೆಚ್ಚಾಗಬೇಕು. ಎಲ್ಲ ಧರ್ಮದವರನ್ನೂ ಸದಸ್ಯರನ್ನಾಗಿ ಸೇರಿಸಿಕೊಳ್ಳಬೇಕು. ಸಂಸದ ಅನಂತಕುಮಾರ ಹೆಗಡೆಯವರ ಪ್ರಾಮಾಣಿಕ ಪ್ರಯತ್ನದಿಂದ ಕಾರವಾರದಲ್ಲಿ ಸದ್ಯದಲ್ಲೇ ಬೃಹತ್‌ ಅಂತಾರಾಷ್ಟ್ರೀಯ ಬಂದರು ಸ್ಥಾಪನೆಯಾಗಲಿದೆ ಎಂದರು.

ಶಾಸಕ ಸುನೀಲ ನಾಯ್ಕ ಭಟ್ಕಳ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಬಿಜೆಪಿ ಶಾಸಕರ ಮನವಿಗಳಿಗೆ ಕವಡೆ ಕಾಸಿನ ಬೆಲೆ ಸಿಗುತ್ತಿಲ್ಲ. ನಮ್ಮ ಅರ್ಜಿ ಹಾಗೂ ಬೇಡಿಕೆಗಳನ್ನು ತಿಪ್ಪೆಗೆ ಎಸೆಯಲಾಗುತ್ತಿದೆ. ಎಲ್ಲರ ಉತ್ತಮ ಭವಿಷ್ಯಕ್ಕಾಗಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕಿದೆ. ಈ ಸಂಘಟನೆ ಮುಂಬರುವ ತಾ.ಪಂ., ಪ.ಪಂ, ಜಿ.ಪಂ ಸೇರಿದಂತೆ ಎಲ್ಲ ಚುನಾವಣೆಗಳಿಗೂ ಸಹಕಾರಿಯಾಗಲಿದೆ ಎಂದರು.

ಮಾಜಿ ಶಾಸಕ ಸುನಿಲ ಹೆಗಡೆ ಹಳಿಯಾಳ, ರಾಜ್ಯ ವಕ್ತಾರ ಪ್ರಮೋದ ಹೆಗಡೆ ಯಲ್ಲಾಪುರ, ನಿವೃತ್ತ ಸೈನಿಕ ಎನ್‌.ಎನ್‌.ಪಟಗಾರ. ಬಿಜೆಪಿ ಮುಖಂಡ ವಿನೋದ ಪ್ರಭು, ವಿವಿಧ ತಾಲೂಕಿನ ಮಂಡಲಾಧ್ಯಕ್ಷರು, ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಲಕ್ಷ್ಮೀ ನಾರಾಯಣ ಹೆಗಡೆಕರ ವಂದೇ ಮಾತರಂ ಹಾಡಿದರು. ಪ್ರಧಾನ ಕಾರ್ಯದರ್ಶಿ ವೆಂಕಟೇಶ ನಾಯಕ ಸ್ವಾಗತಿಸಿದರು. ಎಂ.ಎಸ್‌. ಹೆಗಡೆ ನಿರೂಪಿಸಿದರು. ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಎನ್‌.ಎಸ್‌. ಹೆಗಡೆ ವಂದಿಸಿದರು.

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.