ನಮ್ಮ ನೀರು ನಮಗೆ ಉಳಿಸಿಕೊಳ್ಳಲೇ ಬೇಕು

•ಸರ್ವ ಹೋರಾಟಕ್ಕೂ ಸಿದ್ಧರಾಗೋಣ •ಸಾರ್ವಜನಿಕರು-ಮೀನುಗಾರರಲ್ಲಿ ಜಾಗೃತಿ ಮೂಡಿಸಿ

Team Udayavani, Jul 6, 2019, 12:24 PM IST

Udayavani Kannada Newspaper

ಕುಮಟಾ: ಶಾಸಕ ದಿನಕರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕುಮಟಾ: ಸರ್ಕಾರದಿಂದ ಉತ್ತರಕನ್ನಡ ಜಿಲ್ಲೆಗೆ ಬರುವ ಅನುದಾನಗಳು ಕಡಿಮೆ. ಆದರೆ ನಮ್ಮ ಜಿಲ್ಲೆಯಿಂದ ಸರ್ಕಾರ ಸಾಕಷ್ಟು ಲಾಭ ಪಡೆಯುತ್ತಿದೆ. ನಮ್ಮ ಜಿಲ್ಲೆಯ ಸಂಪತ್ತನ್ನು ಉಳಿಸಿಕೊಳ್ಳುವ ಜವಬ್ದಾರಿ ನಮ್ಮ ಮೇಲಿದೆ. ಶರಾವತಿ ಹಾಗೂ ಅಘನಾಶಿನಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಬಿಡಬಾರದು. ಈ ನಿಟ್ಟಿನಲ್ಲಿ ನಾವೆಲ್ಲರೂ ಪಕ್ಷಾತೀತವಾಗಿ ಹೋರಾಡಬೇಕಿದೆ ಎಂದು ಉತ್ತರಕನ್ನಡ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಹಾಗೂ ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿನ ಸರ್ಕಾರ ನಮ್ಮ ಜಿಲ್ಲೆಯ ಶರಾವತಿ ಹಾಗೂ ಅಘನಾಶಿನಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಯತ್ನಿಸುತ್ತಿದೆ. ಈಗಲಾದರೂ ಜಿಲ್ಲೆಯ ಜನತೆ ಎಚ್ಚೆತ್ತು ಅದನ್ನು ಉಳಿಸಿಕೊಳ್ಳಬೇಕಿದೆ. ಈ ಕುರಿತು ಪ್ರತಿ ಗ್ರಾಮಮಟ್ಟದಲ್ಲಿ ಹಾಗೂ ಮೀನುಗಾರರಿಗೆ ಜಾಗೃತಿ ಮೂಡಿಸಬೇಕು. ನಾನೊಬ್ಬ ಶಾಸಕನಾಗಲ್ಲ ಜಿಲ್ಲೆಯ ಪ್ರಜೆಯಾಗಿ ಜಿಲ್ಲೆಯನ್ನು ಉಳಿಸಿಕೊಳ್ಳಲು ಹೋರಾಡುತ್ತೇನೆ. ಈ ಕುರಿತಂತೆ ಶಾಸಕ ಸುನೀಲ ನಾಯ್ಕ ಅವರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಸಂದರ್ಭ ಬಂದಾಗ ಉಗ್ರ ಹೋರಾಟಕ್ಕೂ ನಾವೆಲ್ಲ ಸನ್ನದ್ಧರಾಗೋಣ ಎಂದರು. ಸಮಿತಿಯ ಗೌರವ ಮಾರ್ಗದರ್ಶಕ ಹಾಗೂ ಉದ್ಯಮಿ ಮುರಲೀಧರ ಪ್ರಭು ಮಾತನಾಡಿ, ನದಿಯ ಹರಿವನ್ನು ಬದಲಾಯಿಸಿದರೆ ಜಿಲ್ಲೆಗೆ ಅಪಾರ ನಷ್ಟವುಂಟಾಗಲಿದೆ. ಮೀನುಗಾರಿಕೆಯನ್ನೇ ಅವಲಂಬಿಸಿರುವ ಮೀನುಗಾರರಿಗೆ ಅಪಾರ ತೊಂದರೆ ಯಾಗಲಿದೆ. ಹಾಗಾಗಿ ಹೋರಾಟಕ್ಕೆ ಮೀನುಗಾರರು ಬೆಂಬಲ ಸೂಚಿಸಬೇಕು. ಜಿಲ್ಲೆಯಲ್ಲಿ ಇದೊಂದೆ ಸಮಸ್ಯೆಯಲ್ಲ. ಉತ್ತರಕನ್ನಡವನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹೆಚ್ಚಿನ ಗಮನಹರಿಸಬೇಕು. ಹೈ.ಕಕ್ಕೆ ನೀಡಿದ ಮಹತ್ವವನ್ನು ಉತ್ತರಕನ್ನಡಕ್ಕೂ ನೀಡಬೇಕು. ಈ ಕುರಿತು ಜಿಲ್ಲೆಯ ಶಾಸಕರು ಸರ್ಕಾರದ ಗಮನಸೆಳೆಯಬೇಕು ಎಂದರು.

ಸಮಿತಿ ಅಧ್ಯಕ್ಷ ಎಂ.ಜಿ. ಭಟ್ಟ ಮಾತನಾಡಿ, ಕಳೆದ ಬೇಸಿಗೆಯಲ್ಲಿ ಕುಮಟಾ, ಹೊನ್ನಾವರ ಸೇರಿದಂತೆ ಜಿಲ್ಲೆಯ ಹಲವೆಡೆ ನೀರಿನ ಸಮಸ್ಯೆ ಅನುಭವಿಸಲಾಗಿದೆ. ಆದರೆ ನದಿಯ ಸಾಂದ್ರತೆ ಕಡಿಮೆಯಾದರೆ ಇರುವ ಸಿಹಿ ನೀರು ಉಪ್ಪಾಗುವುದರಲ್ಲಿ ಸಂಶಯವಿಲ್ಲ. ಈ ಯೋಜನೆಯಿಂದ ಜಲಜೀವಿಗಳ ನಾಶವಾಗುವ ಸಾಧ್ಯತೆಯಿದೆ. ಸರ್ಕಾರ ಈ ಯೋಜನೆ ಕೈಬಿಡಬೇಕು. ಒಂದು ವೇಳೆ ಯೋಜನೆ ಜಾರಿಯಾದರೆ ಪಕ್ಷಾತೀತವಾಗಿ ಉಗ್ರಹೋರಾಟ ನಡೆಸಲಾಗುತ್ತದೆ ಎಂದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ ಹೆಗಡೆ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯ ಜನತೆ ಜಿಲ್ಲೆಯಲ್ಲಿನ ಭೂಮಿ, ಪರಿಸರ ಸೇರಿದಂತೆ ಹಲವು ಸಂಪತ್ತುಗಳನ್ನು ಸರ್ಕಾರದೊತ್ತಡಕ್ಕೆ ಮಣಿದು ತ್ಯಾಗ ಮಾಡಿದ್ದಾರೆ. ಈಗ ಸರ್ಕಾರ ನೀರನ್ನು ತ್ಯಾಗ ಮಾಡಲು ಆಗ್ರಹಿಸಿದೆ. ಇದು ಸರಿಯಲ್ಲ. ಈ ಯೋಜನೆಯನ್ನು ತಡೆಯಲು ನಾವೆಲ್ಲರೂ ಒಂದಾಗಬೇಕು. ಜನಪ್ರತಿನಿಧಿಗಳು ನಮ್ಮ ಜಿಲ್ಲೆಯ ಜನತೆಯ ಕೂಗನ್ನು ಸರ್ಕಾರಕ್ಕೆ ಮುಟ್ಟಿಸಬೇಕು ಎಂದರು.

ಸಾಮಾಜಿಕ ಕಾರ್ಯಕರ್ತ ವಿನೋದ ಪ್ರಭು, ಸಮಿತಿ ಹೊನ್ನಾವರ ಹಾಗೂ ಕುಮಟಾ ಭಾಗದ ಸದಸ್ಯರು, ಪದಾಧಿಕಾರಿಗಳು ಇದ್ದರು. ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಭುವನ ಭಾಗ್ವತ ಸ್ವಾಗತಿಸಿದರು. ಹೇಮಂತಕುಮಾರ ಗಾಂವಕರ ವಂದಿಸಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.