ಕಳಪೆ ಕಾಮಗಾರಿಗೆ ಆಕ್ರೋಶ

ಕೆಎಚ್‌ಬಿ ಕಾಲೋನಿಯಲ್ಲಿ ಜಾಲಿ ಗ್ರಾಮಸ್ಥರಿಂದ ಪ್ರತಿಭಟನೆ

Team Udayavani, Nov 29, 2020, 3:52 PM IST

Outrage-for-poor-work

ಭಟ್ಕಳ: ಜಾಲಿ ಪಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಗುಣಮಟ್ಟದ ಕುರಿತು ಆತಂಕ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು ಶುಕ್ರವಾರ ಸಂಜೆ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಪ್ರತಿಭಟನೆ ನಡೆಸಿದರು.ಗ್ರಾಮಸ್ಥರು, ಒಳಚರಂಡಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್‌ ಮ್ಯಾನ್‌ಹೋಲ್‌ ಕಾಮಗಾರಿಸರಿಯಾಗಿ ಆಗದೇ ಮಳೆಗಾಲದಲ್ಲಿ ನೀರು ಒಳನುಗ್ಗುವ ಸಾಧ್ಯತೆ ಇದೆ.

ಅಲ್ಲದೇ ಕೇವಲ 10 ಇಂಚು ಪೈಪ್‌ ಅಳವಡಿಸುತ್ತಿದ್ದು ಇದು ಇಲ್ಲಿನ ವಾಸ್ತವ್ಯದ ಮನೆಗಳ ಲೆಕ್ಕಾಚಾರದಂತೆಡಿಸೈನ್‌ ಮಾಡಿದಂತೆ ಕಂಡು ಬರುತ್ತಿಲ್ಲ. ಇಷ್ಟೊಂದು ಚಿಕ್ಕ ಪೈಪ್‌ ಅಳವಡಿಕೆಯಿಂದ ಮುಂದೆ ತೀವ್ರ ತೊಂದರೆ ಆಗಲಿದೆ ಎಂದೂ ನಾಗರಿಕರು ದೂರಿದರು. ಅಲ್ಲದೇ ಒಳಚರಂಡಿ ಚೇಂಬರ್‌ನಲ್ಲಿ ಮೊದಲು ಸ್ಥಳಾವಕಾಶ ಇಟ್ಟು ಕೊನೆಗೆ ಪೈಪ್‌ ಜೋಡಣೆ ಮಾಡುವುದರಿಂದ ಮತ್ತು ಒಳಗಡೆಯಲ್ಲಿ ಸರಿಯಾಗಿ ಸಿಮೆಂಟ್‌ ಗಾರೆ ಮಾಡದೇ ಇರುವುದರಿಂದ ನೀರು ಲೀಕೇಜ್‌ ಆಗುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ:ಜಾತಿಗೊಂದು ನಿಗಮ: ಸಮಾಜ ಒಡೆಯುವ ಕೆಲಸ

ಹಾಗೇನಾದರೂ ಆದರೆ ಇಲ್ಲಿನ ನಾಗರಿಕರ ಮನೆಗಳಲ್ಲಿನ ಕುಡಿಯುವ ನೀರಿನ ಬಾವಿಗಳು ಹಾಳಾಗಿ ಮತ್ತೆ ಭಟ್ಕಳ ನಗರದಲ್ಲಿ ಆದ ಅವ್ಯವಸ್ಥೆ ಜಾಲಿ ಪಪಂನಲ್ಲಿ ಆಗಲಿದೆ ಎನ್ನುವುದು ನಾಗರಿಕರ ಆರೋಪವಾಗಿದೆ. ಈ ರೀತಿಯಾಗಿ ಮಾಡುವ ಕಾಮಗಾರಿಗಳನ್ನು ತಕ್ಷಣ ನಿಲ್ಲಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದೂ ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ಬಿಡ್ಲೂಎಸ್‌ಎಸ್‌ಬಿ ಇಂಜಿನಿಯರ್‌ ಶಶಿಧರ ಹೆಗಡೆ ನಾಗರಿಕರೊಂದಿಗೆ ಮಾತನಾಡಿ, ನಾವುಕಾಮಗಾರಿಯ ಗುಣಮಟ್ಟಕ್ಕೆ ಆದ್ಯತೆ ನೀಡುತ್ತಿದ್ದು ಇಲ್ಲಿ ಉತ್ತಮ ಸಿಮೆಂಟ್‌ ಹಾಗೂ ಸಾಮಗ್ರಿ ಬಳಸುತ್ತಿದ್ದೇವೆ. ಒಮ್ಮೆ ಕಾಮಗಾರಿಗಳ ಡಿಸೈನ್‌ ಒಪ್ಪಿಗೆಯಾಗಿ ಆರಂಭವಾದ ನಂತರ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.

ಕಾಮಗಾರಿ ಕುರಿತು ಯಾವುದೇ ತಕರಾರಿದ್ದರೂಸಹ ಸರಿಪಡಿಸಿಕೊಡಬಹುದು ಎಂದು ಸಮಜಾಯಿಷಿ ನೀಡಿದರು. ಇದರಿಂದ ತೃಪ್ತರಾಗದ ಜನತೆ ಕಾಮಗಾರಿಯಲ್ಲಿ ನಮಗೆ ವಿಶ್ವಾಸವಿಲ್ಲ,ಈಗಾಗಲೇ ಭಟ್ಕಳ ನಗರದಲ್ಲಿನ ನೂರಾರು ಮನೆಗಳವರ ವಾಸನೆಯುಕ್ತ ಬದುಕುನೋಡಿ ನಮಗೆ ಸಾಕಾಗಿದೆ. ಇರುವ ಬಾವಿಗಳನ್ನು, ಕುಡಿಯುವ ನೀರಿನ ಸೆಲೆಯನ್ನು ಬಿಟ್ಟುಕೊಡಲು ನಾವು ತಯಾರಿಲ್ಲ ಎಂದು ಪಟ್ಟು ಹಿಡಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.