ಹೆಗಡೆಕಟ್ಟಾದಲ್ಲಿನ ಗೋಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಆಕ್ರೋಶ
ಹೀನ ಮನಸ್ಸಿನ ದುರುಳರ ದುಷ್ಕೃತ್ಯವನ್ನು ಸಹಿಸಲಸಾಧ್ಯ
Team Udayavani, Jul 1, 2023, 8:08 PM IST
ಶಿರಸಿ: ತಾಲೂಕಿನ ಹೆಗಡೆಕಟ್ಟಾ ಬಳಿ ಗೋವನ್ನು ಕಡಿದು ತಲೆ ಭಾಗವನ್ನು ರಸ್ತೆ ಪಕ್ಕ ಎಸೆದಿದ್ದ ಘಟನೆಗೆ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಖಂಡಿಸಿ ಶನಿವಾರ ಹಿಂದೂ ಜಾಗರಣಾ ವೇದಿಕೆಯ ಶಿರಸಿ ಘಟಕವು ಗ್ರಾಮೀಣ ಪೋಲೀಸ್ ಠಾಣೆಗೆ ಪಿಎಸೈಗೆ ಮನವಿ ಸಲ್ಲಿಸಿದೆ.
ಹಿಂದುಗಳಿಗೆ ಪವಿತ್ರವಾಗಿರುವ, ನಿತ್ಯ ಪೂಜಿಸುವ ಗೋವಿನ ತಲೆಯನ್ನು ಕಡಿದಿರುವುದು ಖಂಡನೀಯ. ಗೋವು ಸಮಸ್ತ ಹಿಂದುಗಳಿಗೆ ಪೂಜನೀಯವಾಗಿದ್ದು, ಮುಕ್ಕೋಟಿ ದೇವರ ಸ್ವರೂಪವಾಗಿ ನಾವು ಗೋವನ್ನು ಪೂಜಿಸುತ್ತೇವೆ ಮತ್ತು ಆದರದಿಂದ ಕಾಣುತ್ತೇವೆ. ದುಷ್ಕರ್ಮಿಗಳು, ಸಮಾಜ ಘಾತುಕರು ಹಿಂದುಗಳ ಪವಿತ್ರ ಗೋವನ್ನು ವಧಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರದಲ್ಲಿದ್ದಾರೆ. ಗೋವು ನಮ್ಮ ಹಿಂದುಗಳ ಜೀವನದ ಅವಿಭಾಜ್ಯ ಅಂಗವೇ ಆಗಿದೆ. ಹೀಗಿರುವಾಗ ನಮ್ಮ ಹಿಂದು ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕಾರಣದಿಂದಲೇ ದುರುದ್ಧೇಶಪೂರಿತವಾಗಿ ಗೋವನ್ನು ಕಡಿಯುವ ಹೀನ ಮನಸ್ಸಿನ ದುರುಳರ ದುಷ್ಕೃತ್ಯವನ್ನು ಸಹಿಸಲಸಾಧ್ಯ. ಈ ಕೂಡಲೇ ಪೋಲೀಸ್ ಇಲಾಖೆ ತೀವ್ರತರವಾಗಿ ಅಗತ್ಯ ಕ್ರಮ ವಹಿಸಿ, ಈ ದುಷ್ಕೃತ್ಯದಲ್ಲಿ ಭಾಗಿಯಾದ ಆಪರಾಧಿಗಳನ್ನು ಬಂಧಿಸಬೇಕು. ಮತ್ತು ಮುಂದೆ ಎಲ್ಲಿಯೂ ಇಂತಹ ದುರ್ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗು ರಾಜ್ಯ ಸರಕಾರಗಳು ಇಂತಹ ಸಮಾಜ ಘಾತುಕ ದುಷ್ಟಶಕ್ತಿಗಳನ್ನು ಹತ್ತಿಕ್ಕಬೇಕು ಎಂದು ಸಮಸ್ತ ಹಿಂದೂ ಸಮಾಜದ ಸಂಘಟನೆಗಳ ಪರವಾಗಿ ಹಿಂದೂ ಜಾಗರಣಾ ವೇದಿಕೆ ಶಿರಸಿ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಹಿಂದೂ ಜಾಗರಣ ವೇದಿಕೆ ಶಿರಸಿ ಸಂಚಾಲಕ ಹರೀಶ ಕರ್ಕಿ, ಸಂಘಟನೆಯ ಸತೀಶ ನಾಯ್ಕ, ನಂದನ ಸಾಗರ, ಕಿರಣ ದಾವಣಗೆರೆ, ಮಂಜು ಪಡ್ಡಿ, ಹರೀಶ ಪಟಗಾರ್, ದಿನೇಶ ಮೊಗೇರ್, ಕಮಲಾಕರ ಹನೇಹಳ್ಳಿ, ಬಜರಂಗದಳದ ಅಮಿತ್ ಶೇಟ್ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !