ಹೊರ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
Team Udayavani, Jul 20, 2019, 4:58 PM IST
ಅಂಕೋಲಾ: ತಾಲೂಕು ಆಸ್ಪತ್ರೆ ಎದುರು ಹೊರ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಅಂಕೋಲಾ: ತಾಲೂಕಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗೌರವಧನ ನೀಡದೆ ಸೇವೆಯಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆ ಎದುರು ಶುಕ್ರವಾರ ತಮ್ಮ ಬೇಡಿಕೆ ಇಡೆರಿಸುವಂತೆ ಧರಣಿ ನಡೆಸಿದರು.
ಹೊರಗುತ್ತಿಗೆ ಕಾರ್ಮಿಕ ಸಂಘದ ರವಿಕಲಾ ಗುರವ ಮಾತನಾಡಿ ನಾವು ಕಳೆದ ಮೂರು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸವನ್ನು ಮಾಡುತ್ತಿದ್ದೇವೆ. ನಮಗೆ ಎಂಟು ತಿಂಗಳಿಂದ ಯಾವುದೇ ಗೌರವಧನ ನೀಡಿಲ್ಲ. ನಮ್ಮನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ನಮಗೆ ಕೆಲಸ ಕೊಡಿ. ಏಕಾಏಕಿ ಹೊರ ದಬ್ಬಿದರೆ ನಾವೆಲ್ಲಿ ಹೋಗಬೇಕು. ನಮಗೆ ಜೀವನ ನಡೆಸುವುದು ಕಷ್ಟವಾಗಿದೆ. ನಮ್ಮ ಹೋರಾಟ ಬೇಡಿಕೆ ಈಡೇರುವವರೆಗೆ ಮುಂದುವರಿಯಲಿದೆ ಎಂದು ಹೇಳಿದರು.
ಸ್ಥಳಕ್ಕಾಗಮಿಸಿದ ಡಿಎಚ್ಒ ಡಾ| ಅಶೋಕಕುಮಾರ ಮಾತನಾಡಿ ನನಗೆ ನಿಮ್ಮ ಪರಿಸ್ಥಿತಿ ಅರ್ಥವಾಗುತ್ತದೆ. ನೀವೆಲ್ಲರೂ ನಮ್ಮ ಕುಟುಂಬದವರರು ಇದ್ದ ಹಾಗೆ ನಮ್ಮ ಜೊತೆ ಕೆಲಸ ಮಾಡುತ್ತಿದ್ದೀರಿ. ಜು.30ರವರೆಗೆ ತಾಳ್ಮೆಯಿಂದಿರಿ. ನಿಮ್ಮ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಮೂರು ತಿಂಗಳ ಗೌರವಧನ ಕೊಡಿಸಲು ಪ್ರಯತ್ನಿಸುತ್ತೇನೆ. ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಈ ಮೊದಲು ನೇಮಕವಾಗಿರುವ ಎಲ್ಲರಿಗೂ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದರು.
ನಿತ್ಯಾನಂದ ನಾಯ್ಕ, ಶೈಲಾ ಬಂಡಾರಿ, ಮಹೇಶ ನಾಯ್ಕ, ದಿವ್ಯಾ ನಾಯ್ಕ, ನೀಲಾ ಆಗೇರ, ಅಶ್ವಿನಿ ಹರಿಜನ್, ರಾಮಚಂದ್ರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ