ಹೊರಗುತ್ತಿಗೆ ಸಿಬ್ಬಂದಿ ಪ್ರತಿಭಟನೆ
•7 ತಿಂಗಳಿಂದ ವೇತನವಿಲ್ಲ-ಎರಡು ತಿಂಗಳಿಂದ ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶ
Team Udayavani, Jun 19, 2019, 3:45 PM IST
ಹಳಿಯಾಳ: ಅನ್ಯಾಯಕ್ಕೊಳಗಾದ ಮಹಿಳಾ ಸಿಬ್ಬಂದಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಹಳಿಯಾಳ: 7 ತಿಂಗಳಿಂದ ವೇತನ ನೀಡದೆ ಸತಾಯಿಸಿದ್ದು ಅಲ್ಲದೇ ಕಳೆದ 2 ತಿಂಗಳಿಂದ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ತಾಲೂಕು ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಕೆಲಸದಿಂದ ವಂಚಿತರಾದ 9 ಮಹಿಳಾ ಸಿಬ್ಬಂದಿ ತಮ್ಮ ಕುಟುಂಬದವರೊಡನೆ ತಾಲೂಕು ಆಸ್ಪತ್ರೆ ಎದುರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ವೈದ್ಯಾಧಿಕಾರಿ ಡಾ| ರಮೇಶ ಕದಂ ಹಾಗೂ ಸಿಪಿಐ ಲೋಕಾಪುರ ಮನವೊಲಿಸಲು ಯತ್ನಿಸಿದಾಗ ಕೇಳದ ಪ್ರತಿಭಟನಾಕಾರರು ತಹಶೀಲ್ದಾರ್ ಸ್ಥಳಕ್ಕಾಗಮಿಸಬೇಕೆಂದು ಪಟ್ಟು ಹಿಡಿದರು.
ಹಳಿಯಾಳದ ಮಾತೆ ಸಾವಿತ್ರಿಬಾಯಿ ಪುಲೆ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷೆ ಶಾಂತಾ ಅನಂತಸೇನ ಕುಲಕರ್ಣಿ, ಸಿಐಟಿಯು ಜಿಲ್ಲಾ ಪ್ರಮುಖ ಹರೀಶ ನಾಯ್ಕ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ ಸಂಘಟನೆ ಅಧ್ಯಕ್ಷೆ ಮಂಗಲಾ ಕಶೀಲಕರ, ದಲಿತ ಸಂಘಟನೆಯ ಭರಮೋಜಿ ವಡ್ಡರ, ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ಅಧ್ಯಕ್ಷ ವಿಬಿ ರಾಮಚಂದ್ರ, ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಸೇರಿದಂತೆ ಮೊದಲಾದವರಿಗೆ ಮನವಿ ಸಲ್ಲಿಸಿದ್ದು ಮಂಗಳವಾರ ನಡೆದ ಪ್ರತಿಭಟನೆಗೆ ಈ ಎಲ್ಲ ಸಂಘಟನೆಗಳವರು ಬೆಂಬಲ ವ್ಯಕ್ತಪಡಿಸಿದ್ದು ಅನ್ಯಾಯಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿದ್ದಾರೆ.
ನಂತರ ಪತ್ರಿಕಾ ಹೇಳಿಕೆ ನೀಡಿರುವ ಪ್ರತಿಭಟನಾಕಾರರು ಕಳೆದ 10-15 ವರ್ಷಗಳಿಂದ ತಾಲೂಕು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೆ ತಾಲೂಕು ಆಸ್ಪತ್ರೆ ಗುತ್ತಿಗೆದಾರರಾದ ಚೆನ್ನಬಸಪ್ಪಾ ಗುಳನ್ನವರ ಮತ್ತು ದಿಲೀಪ ನಾಯ್ಕ ತಮಗೆ 7 ತಿಂಗಳ ಸಂಬಳ ನೀಡಿಲ್ಲ ಮಾತ್ರವಲ್ಲದೇ ಕೆಲಸದಿಂದಲೇ ತೆಗೆದು ಹಾಕಿದ್ದಾರೆ. ತಮಗೆ ಪ್ರತಿ ತಿಂಗಳಿಗೆ 5285/- ವೇತನ ನೀಡುತ್ತಿದ್ದರು. ಇದರಲ್ಲಿ 7 ಜನರಿಗೆ ಪ್ರತಿಯೊಬ್ಬರಿಂದ 785 ರೂ. ಮತ್ತು 5 ಜನರಿಗೆ ಪ್ರತಿಯೊಬ್ಬರಿಂದ 1285/- ಸಂಬಳದ ಪಾಲು ಕೇಳುತ್ತಿದ್ದರು ಎಂದು ಆರೋಪಿಸಿರುವ ಅವರು, ಇದನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಸಂಬಳವನ್ನು ತಡೆಹಿಡಿದು ಕೆಲಸದಿಂದ ಕಿತ್ತು ಹಾಕಿದ್ದಾರೆಂದು ಆರೋಪಿಸಿದರು. ಅಲ್ಲದೇ ತಮಗೆ ಪಿಎಫ್ ಮಾಡದೆ ಇರುವುದರ ಬಗ್ಗೆ ನಾವು ಕಾರ್ಮಿಕರ ನ್ಯಾಯಾಲಯಕ್ಕೆ ಪ್ರಕರಣ ದಾಖಲಿಸಿದ್ದನ್ನು ಈ ಗುತ್ತಿಗೆದಾರರು ಖಂಡಿಸಿ ತಮಗೆ ಸಾಕಷ್ಟು ಸಮಸ್ಯೆ ಮಾಡಿದ್ದಾರೆ ಎಂದು ತಮ್ಮ ಅಳಲನ್ನು ತೊಡಿಕೊಂಡರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಪ್ರತಿಭಟನಾಕಾರರ ಅಳಲನ್ನು ಆಲಿಸಿ ಜೂ.21 ರಂದು ಹಳಿಯಾಳದಲ್ಲಿ ಈ ಕುರಿತು ಸಭೆ ನಡೆಸಿ ಡಿಎಚ್ಒ ಸಮಕ್ಷಮದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ನಯೋಮಿ ಮಾದರ, ಶಕುಂತಲಾ ಕಲ್ಲವಡ್ಡರ, ಶಾಂತವ್ವಾ ವಡ್ಡರ, ಲಕ್ಷ್ಮೀ ಪೂಜಾರಿ, ರಾಧಾ ಮಾದರ, ಮಾದೇವಿ ವಡ್ಡರ, ಮುಬಾರಕ ಅರ್ಲವಾಡ, ನಾಗವ್ವಾ ವಡ್ಡರ ಹಾಗೂ ಲಕ್ಷ್ಮೀ ವಡ್ಡರ ಸೇರಿದಂತೆ ಅವರ ಕುಟುಂಬದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ