ನಾಗರಬೆಟ್ಟದ ಆಕ್ಸ್‌ಫರ್ಡ್‌ ಪಾಟೀಲ್ಸ್‌ ನೀಟ್‌ ಅಕಾಡೆಮಿ ಅತ್ಯುತ್ತಮ ಸಾಧನೆ

ಉ.ಕ.ದಲ್ಲೇ ನಂ.1 ಸ್ಥಾನ

Team Udayavani, Mar 21, 2022, 11:13 AM IST

5

ಮುದ್ದೇಬಿಹಾಳ: ತಾಲೂಕಿನ ವಿದ್ಯಾಕಾಶಿ ನಾಗರಬೆಟ್ಟ ಗುಡ್ಡದ ಬಳಿಯ ಆಕ್ಸ್‌ಫರ್ಡ್‌ ಪಾಟೀಲ್ಸ್‌ ಸೈನ್ಸ್‌ ಪಿಯು ಕಾಲೇಜಿನಲ್ಲಿರುವ ನೀಟ್‌ ಅಕಾಡೆಮಿ 2021-22ನೇ ಸಾಲಿನ ನೀಟ್‌ ಪರೀಕ್ಷೆಯಲ್ಲಿ ಹೊಸದೊಂದು ಸಾಧನೆ ಮಾಡಿದೆ. ನೀಟ್‌ ಪರೀಕ್ಷೆಗೆ ಹಾಜರಾಗಿದ್ದ 220 ವಿದ್ಯಾರ್ಥಿಗಳ ಪೈಕಿ 141 ವಿದ್ಯಾರ್ಥಿಗಳು ಸಾಧಕರಾಗಿ ಹೊರಹೊಮ್ಮಿ ರಾಜ್ಯದ ಪ್ರತಿಷ್ಠಿತ ಮೆಡಿಕಲ್‌ ಕಾಲೇಜುಗಳಲ್ಲಿ ಎಂಬಿಬಿಎಸ್‌ ಸೇರಿ ವೈದ್ಯಕೀಯ ಪದವಿ ಸೀಟು ಪಡೆದಿದ್ದಾರೆ. ಇದರಿಂದಾಗಿ ಸಂಸ್ಥೆಯು ನೀಟ್‌ ತರಬೇತಿಯಲ್ಲಿ ಉತ್ತರ ಕರ್ನಾಟಕದ ನಂಬರ್‌ ಒನ್‌ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ವರ್ಷದ ನೀಟ್‌ ಫಲಿತಾಂಶಕ್ಕೂ ಮುನ್ನವೇ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್‌ಗೆ ಅರ್ಹತೆ ಗಳಿಸುವುದಾಗಿ ಸಂಸ್ಥೆಯ ರೂವಾರಿ, ಚೇರಮನ್‌ ಎಂ.ಎಸ್‌.ಪಾಟೀಲ ಅತ್ಯಂತ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದರು. ಫಲಿತಾಂಶ ಹೊರ ಬಿದ್ದು ಕಾಲೇಜುಗಳ ಸೀಟು ಹಂಚಿಕೆ ಮುಕ್ತಾಯ ಹಂತಕ್ಕೆ ಬಂದಾಗ ಅವರ ಆತ್ಮವಿಶ್ವಾಸ ಇನ್ನೂ ಹೆಚ್ಚಾಗಿರುವುದು ದೃಢಪಟ್ಟು 2022-23ನೇ ಸಾಲಿನಲ್ಲಿ ಇದಕ್ಕೂ ಹೆಚ್ಚು ಸಾಧನೆ ಮಾಡಲು ಪ್ರೇರಣೆ ನೀಡಿದಂತಾಗಿದೆ. ಇದು ಕಾಲೇಜಿನ ಸಾಧನೆಯ ಕಿರೀಟಕ್ಕೆ ಇನ್ನಷ್ಟು ಗರಿಗಳನ್ನು ಸೇರಿಸಿದಂತಾಗಿದೆ. ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸುತ್ತ ಗ್ರಾಮೀಣ ಭಾಗದ ಬಡವರು, ಕೃಷಿಕರ ಮಕ್ಕಳು ವೈದ್ಯರಾಗುವ ಕನಸು ನನಸು ಮಾಡುತ್ತ ಗ್ರಾಮೀಣ ಭಾಗದ ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತ ಮುನ್ನುಗ್ಗುತ್ತಿರುವುದು ಜನಮೆಚ್ಚುಗೆಗೆ ಪಾತ್ರವಾಗಿದೆ.

2003-04ನೇ ಸಾಲಿನಲ್ಲಿ ಆರಂಭಗೊಂಡ ಸಂಸ್ಥೆ ಇಂದಿನವರೆಗೆ ಹಿಂತಿರುಗಿ ನೋಡಿಲ್ಲ. 2008ರಲ್ಲಿ ಆರಂಭಗೊಂಡ ಸೈನ್ಸ್‌ ಪಿಯು ಕಾಲೇಜು ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತ ತನ್ನ ದಾಖಲೆಯನ್ನು ತಾನೇ ಮುರಿಯುತ್ತ ಪ್ರತಿವರ್ಷ ನೂರಾರು ವಿದ್ಯಾರ್ಥಿಗಳ ಮೆಡಿಕಲ್‌ ಶಿಕ್ಷಣದ ಕನಸನ್ನು ನನಸುಗೊಳಿಸುತ್ತ ಅವರ ಭವಿಷ್ಯ ಉಜ್ವಲಗೊಳಿಸುವತ್ತ ದಾಪುಗಾಲಿಡುತ್ತಿದೆ. ಈ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿಗೆ ಹೆಚ್ಚು ಒತ್ತು ನೀಡುವುದರಿಂದ ಈ ವಿಭಾಗಗಳಲ್ಲಿ ಶೇ.100 ಸಾಧನೆ ಮಾಡುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಕನ್ನಡಿ ಹಿಡಿದಂತಿದೆ.

ನಗರ ಪ್ರದೇಶದ ಜಂಜಾಟದಿಂದ ದೂರ ನೈಸರ್ಗಿಕ ಪ್ರಶಾಂತ ವಾತಾವರಣದಲ್ಲಿ ಶಾಲೆಯ ಭವ್ಯ ಕಟ್ಟಡವಿದೆ. ಸ್ಪರ್ಧಾ ಪರೀಕ್ಷೆಗಳು, ಪ್ರತಿ ವಾರ ಕಿರು ಪರೀಕ್ಷೆ, ವಿದ್ಯಾರ್ಥಿಗಳ ವೈಯಕ್ತಿಕ ಕಾಳಜಿ, ವಾರ್ಷಿಕ ಪರೀಕ್ಷೆ ಎದುರಿಸುವವರಿಗೆ ಪ್ರತ್ಯೇಕ ಸ್ಟಡಿ ಅವರ್ಸ್‌, ಪ್ರತ್ಯೇಕ ಸ್ಟಡಿ ಮಟೇರಿಯಲ್‌ ಸೇರಿ ಹಲವು ಸೌಲಭ್ಯ ಒದಗಿಸಲಾಗಿದೆ. ಕಲಿಕೆಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಇಂಟೆಲಿಜೆಂಟ್‌ ಲರ್ನಿಂಗ್‌ಗೆ ಹೆಚ್ಚು ಒತ್ತು ನೀಡಲಾಗಿದೆ.

ಪ್ರತಿಭೆಗೆ ತಕ್ಕಂತೆ ಲಕ್ಷಾಂತರ ರೂ. ಸಂಬಳ ಪಡೆಯುವ ಆಂಧ್ರ, ತೆಲಂಗಾಣ, ಕೇರಳ, ಕರ್ನಾಟಕ ರಾಜ್ಯಗಳ ಪ್ರತಿಭಾವಂತ ಉಪನ್ಯಾಸಕರ ತಂಡವೇ ಇಲ್ಲಿದೆ. ನೀಟ್‌, ಕೆ-ಸೆಟ್‌, ಜೆಇಇ, ಐಐಟಿಗೆ ಕ್ರ್ಯಾಶ್‌ ಕೋರ್ಸ್‌ ನಡೆಸಲಾಗುತ್ತಿದೆ. ಪರಿಣಾಮಕಾರಿ ನೋಟ್ಸ್‌ ಬಳಸಿ ಬೋಧನೆ, ಕಲಿಕೆಯಲ್ಲಿ ನಗರದವರ ಜತೆ ಗ್ರಾಮೀಣರೂ ಸರಿಸಾಟಿಯಾಗಿ ನಿಲ್ಲುವ ಸಾಮರ್ಥಯ ತಂದುಕೊಡಲು 6-10ನೇ ಕ್ಲಾಸ್‌ ವಿದ್ಯಾರ್ಥಿಗಳಿಗೆ ಮೂಲದಲ್ಲೇ ಐಐಟಿ, ನೀಟ್‌ ಫೌಂಡೇಶನ್‌ನ ತರಬೇತಿ ಕೊಟ್ಟು ಗಟ್ಟಿಗೊಳಿಸಲಾಗುತ್ತಿದೆ.

ಪ್ರತಿಭಾವಂತರಿಗಾಗಿ 1.5 ಕೋಟಿ ರೂ. ಮೀಸಲು

ಬಡವರು, ಕೃಷಿಕರ ಬಗ್ಗೆ ಕಾಳಜಿ, ಕನಿಕರ ಹೊಂದಿರುವ ಸರಳ ವ್ಯಕ್ತಿತ್ವದ ಸಂಸ್ಥೆಯ ಚೇರ್ಮನ್‌ ಎಂ.ಎಸ್‌.ಪಾಟೀಲರು ಪ್ರತಿ ವರ್ಷ ತಮ್ಮ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಅಂದಾಜು 1.5 ಕೋಟಿ ರೂ.ಗಳ ಆರ್ಥಿಕ ನೆರವು ಮೀಸಲಿರಿಸಿದ್ದಾರೆ. 25 ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಉಚಿತ ಶಿಕ್ಷಣ, ಎಸ್ಸೆಸ್ಸೆಲ್ಸಿಯಲ್ಲಿ ಶೇ.98ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಪಿಯುಸಿ ಉಚಿತ ಶಿಕ್ಷಣ, ಶೇ.95-98ರೊಳಗಿನ ಅಂಕ ಗಳಿಸಿದವರಿಗೆ ಶುಲ್ಕದಲ್ಲಿ ಶೇ.20, ಶೇ.90-95ರೊಳಗೆ ಅಂಕ ಗಳಿಸಿದವರಿಗೆ ಶುಲ್ಕದಲ್ಲಿ ಶೇ.10 ವಿನಾಯಿತಿ ಕೊಡುವ ಯೋಜನೆ ರೂಪಿಸಿದ್ದಾರೆ. ನೀಟ್‌ ಗಾಗಿಯೇ ಪ್ರತ್ಯೇಕ ತರಬೇತಿ ಸೌಲಭ್ಯ ಜಾರಿಗೊಳಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಲು, ಬಡವರ ಮೆಡಿಕಲ್‌ ಕನಸು ನನಸು ಮಾಡಲು ಜೀವವನ್ನು ಗಂಧದಂತೆ ತೇಯುತ್ತ ಸಾಧನೆಯ ಪರಿಮಳ ಹರಿಸತೊಡಗಿದ್ದಾರೆ.

ನೀಟ್‌ ಸಾಧಕರ ಮೆಡಿಕಲ್‌ ಕಾಲೇಜುಗಳ ವಿವರ

ಇಲ್ಲಿನ ಉಪನ್ಯಾಸಕರು 9 ವರ್ಷಗಳಿಂದ ನೀಟ್‌ ಸಹಿತ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತರಬೇತಿ ನೀಡಿದ ಅನುಭವ ಹೊಂದಿದ್ದಾರೆ. ಪ್ರಸಕ್ತ ಸಾಲಿನ ನೀಟ್‌ ಸಾಧಕರು ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಕಾರವಾರ, ಗದಗ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್‌, ರಾಯಚೂರ, ಕಾರವಾರ, ಮಡಿಕೇರಿ, ಚಾಮರಾಜನಗರ, ಕೊಪ್ಪಳ, ಮಂಗಳೂರು, ರಾಮನಗರ ಸೇರಿ ವಿವಿಧ ಪ್ರತಿಷ್ಠಿತ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟು ಪಡೆದಿರುವುದು ಸಾಧನೆಗೆ ಕೈಗನ್ನಡಿಯಂತಿದೆ. ಇಲ್ಲಿ ದೊರಕುವ ತರಬೇತಿಯನ್ನು ಮಾತುಗಳಲ್ಲಿ ಹೇಳುವುದರ ಬದಲು ಇಲ್ಲಿಗೆ ಬಂದು ಅನುಭವಿಸಿದರೇನೆ ಅದರ ನೈಜತೆ, ಸಾಮರ್ಥಯ, ಮಹತ್ವ ಅರ್ಥವಾಗುವಂತಹದ್ದು.

 

ಗ್ರಾಮೀಣ ಮಕ್ಕಳ ಮೆಡಿಕಲ್‌ ಸಹಿತ ವೃತ್ತಿಪರ ಶಿಕ್ಷಣಕ್ಕೆ ವೇದಿಕೆ ಒದಗಿಸಿಕೊಟ್ಟು ನೈಜ ಪ್ರತಿಭೆಗೆ ಮನ್ನಣೆ ದೊರಕಿಸಿಕೊಡುವುದು ನನ್ನ ಸಂಕಲ್ಪ. ಸಂಸ್ಥೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ, ಪ್ರೋತ್ಸಾಹಿಸಿದ ಪಾಲಕರಿಗೆ, ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ನನ್ನೆಲ್ಲ ಸಿಬ್ಬಂದಿ ವರ್ಗಕ್ಕೆ ಋಣಿಯಾಗಿದ್ದೇನೆ. ಎಂ.ಎಸ್‌.ಪಾಟೀಲ, ಚೇರ್ಮನ್‌.

-ಡಿ.ಬಿ.ವಡವಡಗಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.