ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ


Team Udayavani, Mar 27, 2024, 6:10 PM IST

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಉದಯವಾಣಿ ಸಮಾಚಾರ
ಹೊನ್ನಾವರ: ಲೋಕಪ್ರಸಿದ್ಧ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳು ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಬಾರಿ ಆಗಮಿಸಿ ಶ್ರೀಕ್ಷೇತ್ರ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿದ್ದರು. ನಂತರ ಮುರ್ಡೇಶ್ವರಕ್ಕೂ ಭೇಟಿ ನೀಡಿ ಮುರ್ಡೇಶ್ವರನ ದರ್ಶನ ಪಡೆದರು.

ಎಸ್‌ಆರ್‌ಎಲ್‌ ಸಾರಿಗೆ ಸಂಸ್ಥೆ ಮಾಲಕ ವೆಂಕಟ್ರಮಣ ಹೆಗಡೆ ಮತ್ತು ಕರಿಕಾನ ಪರಮೇಶ್ವರಿ ದೇವಾಲಯದ ಮುಖ್ಯ ಅರ್ಚಕ ಸುಬ್ರಹ್ಮಣ್ಯ ಭಟ್‌ ಮತ್ತು ಗಣ್ಯರ ಸ್ವಾಗತ ಸಮಿತಿ ಬಾಳೆಗದ್ದೆಯಿಂದ ಮೆರವಣಿಗೆಯಲ್ಲಿ ಮಯೂರ ಮಂಟಪಕ್ಕೆ ಕರೆದೊಯ್ಯಿತು. ಸ್ಥಳೀಯ ಸುಗ್ಗಿ ಕಲಾವಿದರು, ವಾದ್ಯ ವೃಂದದವರು ಮೆರವಣಿಗೆ ಚಂದಗೊಳಿಸಿದ್ದರು. ಸರಳ ವ್ಯಕ್ತಿತ್ವದ ಶ್ರೀಗಳು ತಮ್ಮ ಆರಾಧ್ಯದೇವರ ಸಹಿತ ದೇವಸ್ಥಾನದಲ್ಲಿಯೇ ಬಿಡಾರ ಹೂಡಿದ್ದರು.

ಪೂಜೆ ನಂತರ ಸಹಸ್ರಾರು ಭಕ್ತರಿಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಪಾದುಕೆ ಮತ್ತು ಅವರ ಪೂಜಾ ದೇವರುಗಳ ದರ್ಶನ ಮಾಡಿಸಿದರು. ಎಲ್ಲರಿಗೂ ಸ್ವಹಸ್ತದಿಂದ ಮಂತ್ರಾಕ್ಷತೆ ನೀಡಿದರು. ಭಕ್ತರಿಗೆ ಪ್ರಾರ್ಥನೆಯೊಂದಿಗೆ ಆಶೀರ್ವದಿಸಿದರು. ಮಂತ್ರಾಲಯ ಪದ್ಧತಿಯಂತೆ ಸುಬ್ರಹ್ಮಣ್ಯ ದೇವಾಲಯ ಸೇವಾ ಸಮೀತಿಯವರು ವ್ಯವಸ್ಥೆ ಮಾಡಿದ್ದರು. ಆಧ್ಯಾತ್ಮಿಕ ಪ್ರವಚನ
ನಡೆಯಿತು. ಶ್ರೀಗಳಿಗೆ ಸೇವಾ ಸಮೀತಿ ಅರ್ಪಿಸಿದ ಲಕ್ಷ ರೂ. ಗಳನ್ನು ಮಂತ್ರಾಲಯದ ಪ್ರಸಾದವಾಗಿ 10 ಸಾವಿರ ರೂ. ಸೇರಿಸಿ ಒಟ್ಟೂ ಮೊತ್ತವನ್ನು ದೇವಸ್ಥಾನಕ್ಕೆ ಬಳಸಿಕೊಳ್ಳಲು ಶ್ರೀಗಳು ಮರಳಿ ಒಪ್ಪಿಸಿದರು.

ನಂತರ ಶ್ರೀಗಳು ಮುರ್ಡೇಶ್ವರದ ಟ್ರಸ್ಟಿಗಳಾದ ಸತೀಶ ಶೆಟ್ಟಿ ಅವರ ವಿನಂತಿಯಂತೆ ಮುರ್ಡೇಶ್ವರದಲ್ಲಿ ನಡೆದ ಅಭಿವೃದ್ಧಿ
ಕಾರ್ಯಗಳನ್ನು ಕಂಡು ಸಂತೋಷಪಟ್ಟರು. ಸುಬ್ರಹ್ಮಣ್ಯ ಮತ್ತು ಮುಡೇìಶ್ವರ ದೇವರಿಗೆ  ಶ್ರೀಗಳು ಪೂಜೆ ಸಲ್ಲಿಸಿದರು. ಮಂತ್ರಾಲಯ ಮಹಿಮೆಯಂತೆ ಸುಭುದೇಂದ್ರ ತೀರ್ಥರ ಆಗಮನ, ಆಶೀರ್ವಾದ ಈ ಭಾಗದಲ್ಲಿ ಸಂಚಲನ ಮೂಡಿಸಿದೆ. ಶ್ರೀಗಳ ಕಾರ್ಯಕ್ರಮದ ವ್ಯವಸ್ಥೆ ಮಾಡಿದ ವೆಂಕಟ್ರಮಣ ಹೆಗಡೆ ಮಂತ್ರಾಲಯದ ಭಕ್ತರ ಅಭಿನಂದನೆಗೆ ಪಾತ್ರರಾದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.