Dandeli ಪ್ರವಾಸಿಗರ‌ ಕಣ್ಮನ ಸೆಳೆಯುವ ಜೋಯಿಡಾ ಪಣಸೋಲಿಯ ಆನೆ ಶಿಬಿರ


Team Udayavani, Dec 25, 2023, 4:57 PM IST

e-3

ದಾಂಡೇಲಿ/ಜೋಯಿಡಾ: ತಾಲೂಕಿನ ಪಣಸೋಲಿ ಆನೆ ಶಿಬಿರವು ಕರ್ನಾಟಕ ಅರಣ್ಯ ಇಲಾಖೆಯಿಂದ ನಿರ್ವಹಿಸಲ್ಪಡುವ ಆನೆ ಶಿಬಿರವಾಗಿದ್ದು, ಇದು ದಾಂಡೇಲಿಯಿಂದ 12 ಕಿಮೀ ದೂರದಲ್ಲಿದೆ. ಈ ಆನೆ ಶಿಬಿರವು ಪ್ರವಾಸಿಗರ ಕಣ್ಮನ ಸೆಳೆದರೇ, ಆನೆಗಳ ಬಗ್ಗೆ ಅಧ್ಯಯನ ಮಾಡುವವರಿಗೆ ಅಧ್ಯಯನ ಕೇಂದ್ರವಾಗುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದೆ.

ಇಲ್ಲಿ ಆನೆಗಳಿಗೆ ಆಶ್ರಯದ ಜೊತೆಗೆ ಅರಣ್ಯದಲ್ಲಿ ವಾಸಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಪರಿಸರ ಪ್ರವಾಸೋದ್ಯಮ ಕೇಂದ್ರವು ಈ ಆನೆಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ಆರೈಕೆಯನ್ನು ಒದಗಿಸುತ್ತಿದೆ. ಸದ್ಯ ಶಿಬಿರದಲ್ಲಿ ನಾಲ್ಕು ಹೆಣ್ಣಾನೆಗಳಿವೆ. 28 ವರ್ಷದ ಚಾಮುಂಡಿ ಮತ್ತು ಈಕೆಯ ಮಕ್ಕಳಾದ 8 ವರ್ಷದ ಶಿವಾನಿ ಹಾಗೂ 7 ತಿಂಗಳ ಹಸುಗೂಸು ಮುದ್ದು ಗೌರಿಯ ಜೊತೆಗೆ 35 ರ ಪ್ರಾಯದ ಚಂಚಲ ಆನೆಯು ಶಿಬಿರದಲ್ಲಿ ಆಶ್ರಯ ಪಡೆದಿವೆ. ಗೌರಿ ಆನೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಶಿಬಿರದಲ್ಲಿನ ಅನುಭವಗಳು:
ಪಣಸೋಲಿ ಆನೆ ಶಿಬಿರದಲ್ಲಿ ಪ್ರವಾಸಿಗರು ಭೇಟಿ ನೀಡಲು ಹಲವಾರು ಕಾರಣಗಳಿವೆ ಏಕೆಂದರೆ ಶಿಬಿರವು ಮೃಗಾಲಯವಲ್ಲ. ಇಲ್ಲಿ ನೀವು ಆನೆಗಳನ್ನು ವೀಕ್ಷಿಸಬಹುದು. ಅದರೊಂದಿಗೆ ಫೋಟೋ ತಗೆಸಿಕೊಳ್ಳಬಹುದು. ಜೊತೆಗೆ ಆನೆಗೆ ಸ್ನಾನ ಮಾಡಿಸುವುದನ್ನು ಮತ್ತು ಅದಕ್ಕೆ ಆಹಾರ ನೀಡುತ್ತಿರುವುದನ್ನು ಕಾಣಬಹುದು. ಒಟ್ಟಿನಲ್ಲಿ ಆನೆಗಳೊಂದಿಗೆ ಸಮಯವನ್ನು ಆಹ್ಲಾದಕರವಾಗಿ ಕಳೆಯಬಹುದು. ಇದು ತರಬೇತಿ ಶಿಬಿರವಾಗಿದ್ದು, ತರಬೇತಿ ಪಡೆದ ಮಾವುತರು ಆನೆಗಳನ್ನು ನೋಡಿಕೊಳ್ಳುತ್ತಾರೆ.

ವೀಕ್ಷಣೆ:
ಕಲಿಕೆಯ ಅತ್ಯುತ್ತಮ ಮಾರ್ಗವೆಂದರೆ ವೀಕ್ಷಣೆ. ಆನೆಗಳು ಹೇಗೆ ವರ್ತಿಸುತ್ತವೆ, ಆಹಾರವನ್ನು ತಿನ್ನುತ್ತವೆ, ಅವುಗಳ ಮನಸ್ಥಿತಿಗಳು ಮತ್ತು ಇತರ ನಡವಳಿಕೆಯ ಮಾದರಿಗಳನ್ನು ವೀಕ್ಷಿಸಲು ಶಿಬಿರದಲ್ಲಿ ಸ್ವಲ್ಪ ಸಮಯವನ್ನು ಕಳೆದಾಗ ಅರಿವಿಗೆ ಬರುತ್ತದೆ. ಆನೆಗಳನ್ನು ಪ್ರತಿದಿನ ಬೆಳಿಗ್ಗೆ 8.30 ರಿಂದ 10 ರವರೆಗೆ ಹಾಗೂ ಸಂಜೆ 4 ರಿಂದ 6 ವರೆಗೆ ಶಿಬಿರಕ್ಕೆ ತರಲಾಗುತ್ತದೆ. ಈ ಸಮಯದಲ್ಲಿ ಆನೆಗಳು ಮತ್ತು ಅದರ ಸ್ವಭಾವದ ಕುರಿತು ಸಂಪೂರ್ಣವಾಗಿ ವೀಕ್ಷಿಸಬಹುದು.

ತರಬೇತಿ ಪಡೆದ ಮಾವುತರು ಆನೆಗಳಿಗೆ ಸ್ನಾನವನ್ನು ಹೇಗೆ ಮಾಡಿಸುತ್ತಾರೆ ಎಂಬುದು ನೋಡುವುದೇ ಒಂದು ಆನಂದ. ಶಿಬಿರದಲ್ಲಿ ಆನೆಗಳಿಗೆ ಕಾಡಿನಲ್ಲಿರುವ ಕೊಳದಲ್ಲಿ ಎರಡು ದಿನಕೊಮ್ಮೆ ಸ್ನಾನವನ್ನು ಮಾಡಿಸಲಾಗುತ್ತದೆ. ಆನೆ ಶಿಬಿರದ ಹತ್ತಿರ ನೀರಿನಲ್ಲಿ ಆಟವಾಡಲು ಅರಣ್ಯ ಇಲಾಖೆಯಿಂದ ನೀರಿನ ಟ್ಯಾಂಕನ್ನು ನಿರ್ಮಿಸಲಾಗಿದೆ.

ಇಲ್ಲಿ ಆನೆಗಳಿಗೆ ಬೆಳಗಿನ ಉಪಹಾರವನ್ನು ಶಿಬಿರದಲ್ಲಿಯೇ ತಯಾರಿಸಲಾಗುತ್ತದೆ. ಮಾವುತರು ಮತ್ತು ಅವರ ಸಹಾಯಕರು ಆನೆಗಳಿಗೆ ಆಹಾರವನ್ನು ನೀಡುತ್ತಾರೆ.

ಒಟ್ಟಿನಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವ್ಯವಸ್ಥಿತ ಕಾರ್ಯನಿರ್ವಹಣೆಯಿಂದಾಗಿ ಮತ್ತಿ ಮಾವುತರು ಆನೆಗಳನ್ನು ಪ್ರೀತಿಯಿಂದ ಸಾಕಿ ಸಲಹುತ್ತಿರುವುದೇ ಈ ಆನೆ ಶಿಬಿರ ಪ್ರಸಿದ್ಧಿಯನ್ನು ಪಡೆಯಲು ಸಾಧ್ಯವಾಗಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.