ಇ-ಸ್ವತ್ತಿನ ಸಮಸ್ಯೆಗೆ ಪರಿಹಾರ ನೀಡಲು ಆಗ್ರಹ


Team Udayavani, Dec 13, 2020, 3:42 PM IST

ಇ-ಸ್ವತ್ತಿನ ಸಮಸ್ಯೆಗೆ ಪರಿಹಾರ ನೀಡಲು ಆಗ್ರಹ

ಹೊನ್ನಾವರ: ಪಟ್ಟಣದಲ್ಲಿ ಇ-ಸ್ವತ್ತು ಪಡೆಯಲು ಅನೇಕ ಸಮಸ್ಯೆ ಉಂಟಾಗಿ ಜನರು ಪರದಾಡುತ್ತಿದ್ದಾರೆ.ಜನರಿಗೆ ಸಹಾಯವಾಗುವಂತೆ ನಿಯಮಾವಳಿಗಳನ್ನು ಸಡಿಲಗೊಳಿಸಬೇಕು. ಪ.ಪಂ. ವ್ಯಾಪ್ತಿಯಲ್ಲು ಹಲವಾರು ದಶಕಗಳಿಂದ ಅತಿಕ್ರಮಣ ಭೂಮಿಯಲ್ಲಿ ಜನರು ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಪ್ರದೇಶದಲ್ಲಿ ಮನೆ ವಿಸ್ತಾರಗೊಳಿಸಲು ಕಾನೂನಿನ ತೊಡಕು ಉಂಟಾಗುತ್ತಿದೆ. ಇದಕ್ಕೆ ಎಲ್ಲ ಸದಸ್ಯರು ಕೂಡಿ ಪರಿಹಾರ ಮಾರ್ಗ ಕಂಡುಹಿಡಿಯಬೇಕು ಎಂದು ಸದಸ್ಯ ಅಜಾದ್‌ ಅಣ್ಣಿಗೇರಿ ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ.ಪಂ. ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಇ-ಸ್ವತ್ತಿನಿಂದ ಆಗುವ ಸಮಸ್ಯೆ ಬಗೆಹರಿಸಲು ಮೇಲಾಧಿಕಾರಿಗಳಿಗೆ ವಿಜ್ಞಾಪನಾ ಪತ್ರವನ್ನು ನೀಡಲಾಗುವುದು ಎಂದರು. ಸಿಪಿಐ ಶ್ರೀಧರ ಎಸ್‌. ಮಾತನಾಡಿ, ಪಟ್ಟಣದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಬಜಾರ ಭಾಗದಲ್ಲಿ ಅಲ್ಲಲ್ಲಿ ವಾಹನ ನಿಲುಗಡೆಯಿಂದ ತುಂಬಾ ಸಮಸ್ಯೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ತಾಲೂಕು ಆಡಳಿತದೊಂದಿಗೆ ಸಮಾಲೋಚಿಸಿ ರೂಪರೇಷೆ ಸಿದ್ಧಗೊಳಿಸಬೇಕಾಗಿದೆ. ರಾತ್ರಿ 8ರಿಂದ ಬೆಳಗ್ಗೆ 8ರ ವರೆಗೆ ಬೃಹತ್‌ ವಾಹನಗಳ ಸರಕುಗಳನ್ನು ಇಳಿಸಲು ವ್ಯವಸ್ಥೆ ಕಲ್ಪಿಸಲಾಗುವುದು. ಇದಕ್ಕೆ ಎಲ್ಲ ಸದಸ್ಯರ ಅಗತ್ಯವಿದೆ ಎಂದರು.

ಕೆಲವು ವಾಣಿಜ್ಯ ಮಳಿಗೆಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡುವಂತೆ ಸೂಚಿಸಿ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ. ಆದರೆ ಪಾರ್ಕಿಂಗ್‌ ಪ್ರದೇಶದಲ್ಲಿ ಅಂಗಡಿಗಳನ್ನು ನಿರ್ಮಿಸಲಾಗಿದೆ. ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯೆ ಜೋಸಿ ನ್‌ ಡಯಾಸ್‌ ಹೇಳಿದರು. ಪಾರ್ಕಿಂಗ್‌ವ್ಯವಸ್ಥೆ ಕಲ್ಪಿಸದ ವಾಣಿಜ್ಯ ಮಳಿಗೆಗಳಿಗೆ ನೋಟಿಸ್‌ ನೀಡಿ ಕ್ರಮ ಕೈಗೊಳ್ಳಲಾಗುವುದು. ವಾಹನ ದಟ್ಟಣೆಸಮಸ್ಯೆಗೆ ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರು ಹಾಗೂ ಪ.ಪಂ. ಅಧಿಕಾರಿಗಳು, ಸದಸ್ಯರು ಸೇರಿ ಕ್ರಮ ಕೈಗೊಳ್ಳಲು ನಿರ್ಣಯಿಸಲಾಯಿತು. ಪಪಂನಲ್ಲಿ ಜನರ ಕೆಲಸಗಳು ಮಂದಗತಿಯಲ್ಲಿ ನಡೆಯುತ್ತಿದೆ. ಶೀಘ್ರವಾಗಿ ಸಾರ್ವಜನಿಕರ ಕೆಲಸಗಳಾಗಬೇಕು ಎಂದು ಅಧ್ಯಕ್ಷ ಶಿವರಾಜ ಮೇಸ್ತ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ, ನಮ್ಮ ಪ.ಪಂ. ಒಟ್ಟೂ 57 ಸಿಬ್ಬಂದಿಯ ಅಗತ್ಯವಿದೆ. ಆದರೆ ಈಗ ಕೇವಲ 27 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಹೆಚ್ಚಿನ ಸಿಬ್ಬಂದಿಯನ್ನು ನೀಡಲು ಆದೇಶಿಸಿದ್ದಾರೆ. ಆಯಾ ಸಿಬ್ಬಂದಿಗೆ ಆಯಾ ವಿಭಾಗದ ಕೆಲಸಗಳಲ್ಲಿ ನೇಮಿಸಲಾಗುವುದು. ಜನರ ಕೆಲಸವನ್ನು ಶೀಘ್ರಗತಿಯಲ್ಲಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದರು. ಉಪಾಧ್ಯಕ್ಷ ಮೇಧಾ ನಾಯ್ಕ, ಸದಸ್ಯರು ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.