ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ


Team Udayavani, May 29, 2022, 5:23 PM IST

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಶಿರಸಿ: ಪಾವನಾ ಪರಿಸರ ಪ್ರತಿಷ್ಠಾನದಿಂದ ಕೊಡಲಾಗುವ ಪ್ರತಿಷ್ಠಿತ ಪಾವನಾ ಪರಿಸರ ಪ್ರಶಸ್ತಿಯನ್ನು ಈ ಬಾರಿ ಕೃಷಿಕ-ಪರಿಸರ ವಿಜ್ಞಾನಿ, ಲೇಖಕ ಹೆಗ್ಗರಣಿ‌ ಸಮೀಪದ ಬಾಲಚಂದ್ರ ಸಾಯಿಮನೆಗೆ ನೀಡಲು ನಿರ್ಧರಿಸಲಾಗಿದೆ.

ಪ್ರಶಸ್ತಿ 50 ಸಾವಿರ ರೂ. ಗೌರವಧನ ಹಾಗೂ ಸ್ಮರಣಿಕೆಯನ್ನೊಳಗೊಂಡ ಪ್ರಶಸ್ತಿ ಇದಾಗಿದ್ದು,  ಜೂನ್‌ 5ರ ವಿಶ್ವ ಪರಿಸರ ದಿನದಂದು ಶಿರಸಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ  ಎಚ್‌. ಎನ್‌. ನಾಗಮೋಹನ ದಾಸ್‌ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನ್ಯಾಶನಲ್‌ ಜಿಯಾಗ್ರಫಿಕ್‌ ಸಂಸ್ಥೆಯ ಅನ್ವೇಷಕಿ ಆರತಿ ಕುಮಾರ್‌ ರಾವ್‌ ಅವರು ಪಶ್ಚಿಮಘಟ್ಟದ ಪರಿಸರ ಮತ್ತು ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ವೇದಿಕೆಯಲ್ಲಿ ಬಾಲಚಂದ್ರ ಸಾಯಿಮನೆ ಅವರ  “ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌” ಹೆಸರಿನ ಪ್ರವಾಸ ಕಥನ  ಬಿಡೆಗಡೆಗೊಳ್ಳಲಿದೆ.  ಚೀನಾ ಮತ್ತು ಫಿಲಿಪೈನ್ಸ್‌ ದೇಶಗಳ ಅಡಿಕೆ, ಬೆತ್ತ, ಬಿದಿರು ಕೃಷಿಯನ್ನು ಪರಿಚಯಿಸುವ ಈ ಕೃತಿಯನ್ನು ಪತ್ರಕರ್ತ, ಲೇಖಕ ಮಹಾಬಲ ಸೀತಾಳಭಾವಿ ಪರಿಚಯಿಸಲಿದ್ದಾರೆ.

ಬಾಲಚಂದ್ರ ಸಾಯಿಮನೆಯವರು ಏಳು ದೇಶಗಳ ಎಂಟು ವಿಶ್ವವಿದ್ಯಾಲಯಗಳಲ್ಲಿ ಪರಿಸರ ವಿಜ್ಞಾನ ಕುರಿತು ವಿಶೇಷ ಅಧ್ಯಯನ ನಡೆಸಿದ್ದು ಪ್ರಸ್ತುತ  ಕೃಷಿ ಕಾಯಕ ಮಾಡುತ್ತಲೇ ಜಾಗತಿಕ ಹವಾಗುಣ ಬದಲಾವಣೆಗೆ ಪಶ್ಚಿಮಘಟ್ಟಗಳು ಹೇಗೆ ಸ್ಪಂದಿಸುತ್ತಿವೆ ಎಂಬುದರ ಕುರಿತು ತಮ್ಮದೇ ಪರಿಸರದಲ್ಲಿ ನಡೆಸುತ್ತಿರುವ ಪ್ರಯೋಗಗಳು  ಬೆಂಗಳೂರು, ಪುಣೆ, ಇಂಗ್ಲಂಡ್‌ ಮತ್ತು ಜರ್ಮನಿಯ ಹೆಸರಾಂತ ವಿಜ್ಞಾನ ಸಂಸ್ಥೆಗಳ ಮಾನ್ಯತೆ ಪಡೆದಿವೆ.

ಬಕ್ಕೆಮನೆಯ ಸ್ವಾತಂತ್ರ್ಯಯೋಧ ನಾರಾಯಣ ಹೆಗಡೆ ದಂಪತಿಯ ಹೆಸರಿನಲ್ಲಿ ಅವರ ಮಕ್ಕಳು ಸ್ಥಾಪಿಸಿದ  ʼಪಾವನಾ ಪರಿಸರ ಪ್ರತಿಷ್ಠಾನʼ ನಾಡಿನ ಅನೇಕ ಪರಿಸರ ಸಂರಕ್ಷಣಾ ಕಾರ್ಯಗಳಿಗೆ ನೆರವಾಗುತ್ತ, ಈ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ಕಾಲಕಾಲಕ್ಕೆ ಗೌರವ ಪ್ರಶಸ್ತಿಯನ್ನೂ ನೀಡುತ್ತ ಬಂದಿದೆ. ಇದುವರೆಗೆ ಡಾ. ಕುಸುಮಾ ಸೊರಬ, ಶ್ರೀಪಡ್ರೆ, ಶಿವಾನಂದ ಕಳವೆ, ಡಾ. ಅ.ನ. ಯಲ್ಲಪ್ಪರೆಡ್ಡಿ ಮತ್ತು ಡಾ. ಎಸ್‌.ಆರ್‌. ಹಿರೇಮಠರಿಗೆ ʼಪಾವನಾ ಪರಿಸರ ಪ್ರಶಸ್ತಿʼ ನೀಡಿ ಗೌರವಿಸಿದೆ.

ನಾಡೋಜ ನಾರಾಯಣ ರೆಡ್ಡಿ, ಸ್ವಾತಂತ್ರ್ಯಯೋಧ ಎಚ್‌ಎಸ್‌ ದೊರೆಸ್ವಾಮಿ, ಜಸ್ಟಿಸ್‌ ಇ.ಎಸ್‌. ವೆಂಕಟರಾಮಯ್ಯ, ಪ್ರೊ. ಎಸ್‌.ಕೆ.ರಾಮಚಂದ್ರ ರಾವ್‌, ಜಸ್ಟಿಸ್‌ ಸಂತೋಷ್‌ ಹೆಗಡೆ ಇವರುಗಳು ಈ ಹಿಂದೆ ಪಾವನಾ ಪರಿಸರ ಪ್ರಶಸ್ತಿ ಸಂಮಾನ ಸಂದರ್ಭದಲ್ಲಿ ಗೌರವ ಉಪನ್ಯಾಸ ನೀಡಿದ್ದಾರೆ ಎಂಬುದು ಉಲ್ಲೇಖನೀಯ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.