ಮುಖ ಬಿಟ್ಟು ಕುತ್ತಿಗೆಯಲ್ಲಿ ನೇತಾಡುವ ಮಾಸ್ಕ್

ಸರಿಯಾಗಿ ಆಗುತ್ತಿಲ್ಲ ಕೋವಿಡ್‌ ನಿಯಮ ಪಾಲನೆ

Team Udayavani, Sep 22, 2020, 6:15 PM IST

uk-tdy-1

ಹೊನ್ನಾವರ: ದೇಶದಲ್ಲಿ ಪ್ರತಿ ತಾಸಿಗೆ 4 ಜನ ಹೆಲ್ಮೆಟ್‌ ಧರಿಸದ ಬೈಕ್‌ ಸವಾರರು ಸಾಯುತ್ತಾರೆ. ಆದ್ದರಿಂದ ಸರ್ಕಾರ ಹೆಲ್ಮೆಟ್‌ ಕಡ್ಡಾಯಗೊಳಿಸಿತು.

ಕೋವಿಡ್ ತಡೆಯಲು ವ್ಯಾಕ್ಸಿನ್‌ಗಿಂತ ಹೆಚ್ಚು ಪರಿಣಾಮಕಾರಿ ಮಾಸ್ಕ್ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದೆ. ಆದರೆ ಹೆಲ್ಮೆಟನ್ನು ಬೈಕ್‌ ಹ್ಯಾಂಡಲ್‌ ಗೆ ತೂಗಾಡಿಸುವ ಬುದ್ಧಿಯ ಜನ ಮಾಸ್ಕ್ ಕುತ್ತಿಗೆಗೆ ಬಿಗಿದುಕೊಂಡು ಓಡಾಡುತ್ತಾರೆ. 2018ರಲ್ಲಿ ನಮ್ಮ ರಾಜ್ಯದಲ್ಲಿ ಹೆಲ್ಮೆಟ್‌ ಇಲ್ಲದ ಸವಾರರ ಬೈಕ್‌ ಅಪಘಾತದಲ್ಲಿ 2,353 ಜನ ಸತ್ತಿರುವುದಾಗಿ ಪೊಲೀಸ್‌ ದಾಖಲೆ ಹೇಳುತ್ತಿದೆ. ಆಗಾಗ ಪೊಲೀಸರು ಕೇಸ್‌ ಹಾಕುತ್ತಲೇ ಇದ್ದಾರೆ. ಆದರೂ ಹೆಲ್ಮೆಟ್‌ ಜನರ ತಲೆಗೇರುವುದಿಲ್ಲ. ಹೆಲ್ಮೆಟ್‌ ಧರಿಸುವುದು ನಮ್ಮ ಸುರಕ್ಷತೆಗಾಗಿ ಎಂಬ ಅರಿವಿಲ್ಲದವರೇ ಹೆಚ್ಚು.

ಇಂಥವರು ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುತ್ತಾರೆ. ಮಾಸ್ಕ್ ಕಡ್ಡಾಯ ಮಾಡಿ, ಅಂತರ ಕಾಯ್ದುಕೊಳ್ಳಲು, ಸ್ಯಾನಿಟೈಸರ್‌ ಬಳಸಲು ಸರ್ಕಾರ, ವೈದ್ಯರು ನಿತ್ಯವೂ ಹೇಳುತ್ತಾರೆ. ಮೊಬೈಲ್‌ ಎತ್ತಿಕೊಂಡಾಗೆಲ್ಲಾ ಕೋವಿಡ್ ಎಚ್ಚರಿಕೆ ಕಿವಿ ತೂತಾಗುವಂತೆ ಮೊಳ ಗುತ್ತದೆ. ಆದರೂ ಬಹುಪಾಲು ಜನ ಮಾಸ್ಕ್ ಧರಿಸುತ್ತಿಲ್ಲ. ಇನ್ನೂ ಕೆಲವರು ದಂಡ ಬೀಳುವ ಭಯದಿಂದ ಕುತ್ತಿಗೆಗೆ ತೂಗಾಡಿಸಿಕೊಂಡು ಹೋಗುತ್ತಾರೆ. ಇವರಲ್ಲಿ ಹೆಚ್ಚಿನವರು ವಿದ್ಯಾವಂತರು. 7ತಿಂಗಳಲ್ಲಿ ರಾಜ್ಯದಲ್ಲಿ ಕೋವಿಡ್ ದಿಂದ ಸತ್ತವರ ಸಂಖ್ಯೆ 8,000 ದಾಟಿದೆ.

ಆದರೂ ಜನ ಎಚ್ಚರಾಗಿಲ್ಲ. ಹೆಲ್ಮೆಟ್‌ ಧರಿಸದಿದ್ದವನಿಗೆ ಅಪಘಾತವಾದರೆ ಒಬ್ಬ ಸಾಯುತ್ತಾನೆ, ಆದರೆ ಮಾಸ್ಕ್ ಧರಿಸದವರು ಅವರ ಜೊತೆ ಇನ್ನಷ್ಟು ಜನರಿಗೆ ಕೋವಿಡ್‌ ಸೋಂಕು ತಗಲಿಸುತ್ತಲೇ ಹೋಗುತ್ತಾರೆ. ಎಚ್ಚರಿಸಿದರೆ ತಿರುಗಿಬೀಳುತ್ತಾರೆ. ಅಂತರ ಕಾಯ್ದುಕೊಳ್ಳುವ, ಸ್ಯಾನಿಟೈಸ್‌ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಬ್ಯಾಂಕುಗಳಲ್ಲಿ, ಮಾಲ್‌ಗ‌ಳಲ್ಲಿ, ದೊಡ್ಡ ಅಂಗಡಿಗಳಲ್ಲಿ ಸ್ಯಾನಿಟೈಸರ್‌ ಒಂದು ಮೂಲೆಯಲ್ಲಿರುತ್ತದೆ. ಮಾತನಾಡಲು ಮಾಸ್ಕ್ ಸರಿಸುವ ಗ್ರಾಹಕರು ಕುತ್ತಿಗೆಗೆ ಜೋತಾಡಿಸಿಕೊಂಡೇ ಓಡಾಡುತ್ತಾರೆ.ಇಂಥವರಿಂದಾಗಿ ಅಪಘಾತಗಳೂ ಕಡಿಮೆಯಾಗುವುದಿಲ್ಲ, ಸೋಂಕು ದೂರವಾಗುವುದಿಲ್ಲ. ಶೇ. 60 ರಷ್ಟು ವಿದ್ಯಾವಂತರಿರುವ ಜಿಲ್ಲೆಗಳ ಜನರಿಗೆ ಇಬ್ಬರು ವೈದ್ಯರು ಕೋವಿಡ್‌ ನಿಂದ ಮೃತಪಟ್ಟರೂ, ಜನಪ್ರತಿನಿಧಿಗಳು ನೂರಾರು ಜನ ಮಾಸ್ಕ್ ರಹಿತರು ಸೇರಿದ ಕಾರ್ಯಕ್ರಮದಲ್ಲಿ ಮಾಸ್ಕ್ ತೆರೆದು ಮಾತನಾಡಿ ಸಭೆ ಮಾಡುತ್ತಿದ್ದರೂ ಇದು ಅರ್ಥವಾಗಲಿಲ್ಲ, ಕ್ವಾರಂಟೈನ್‌ಗೆ ಹೋಗಿ ಮರಳಿದರು.

ಹೀಗಾದರೆ ಜನಕ್ಕೆ ಅರ್ಥ ಮಾಡಿಕೊಡುವವರು ಯಾರು ? ಹೋದವರು ಹೋಗುತ್ತಾರೆ, ಇದ್ದವರನ್ನು ಗೋಳಿಗೆ ಕೆಡವಿ ಹೋಗುತ್ತಾರೆ ಎಂಬುದು ವಿಷಾದದ ಸಂಗತಿ.

 

-ಜೀಯು, ಹೊನ್ನಾವರ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.