ಹೆಚ್ಚುತ್ತಿದೆ ಮಾಸ್ಕ್ ಕಳಚಿ ಓಡಾಡುವವರ ಸಂಖ್ಯೆ


Team Udayavani, Nov 20, 2020, 8:30 PM IST

ಹೆಚ್ಚುತ್ತಿದೆ ಮಾಸ್ಕ್ ಕಳಚಿ ಓಡಾಡುವವರ ಸಂಖ್ಯೆ

ಹೊನ್ನಾವರ: ಲಾಕ್‌ಡೌನ್‌ ತೆಗೆದರೂ ಕೋವಿಡ್‌ ಹೋಗಿಲ್ಲ, ಮಾಸ್ಕ್ ಹಾಕಿಕೊಂಡು, ಅಂತರ ಕಾಯ್ದುಕೊಂಡು ಅಗತ್ಯವಿದ್ದರೆ ಓಡಾಡಿ ಎಂದು ಪ್ರಧಾನಿಯಿಂದ ಆರಂಭಿಸಿ ಆಶಾ ಕಾರ್ಯಕರ್ತೆಯರವರೆಗೆ ಹೇಳುತ್ತಿದ್ದರೂ ಜನಕ್ಕೆ ಅರ್ಥವಾಗುವುದೇ ಇಲ್ಲ. ಕೋವಿಡ್  ಇಳಿಮುಖವಾದಂತೆ ಕುತ್ತಿಗೆಗೆ ಇಳಿದಿದ್ದ ಮಾಸ್ಕ್ ನ್ನು ಬಿಸಾಡಿ ಓಡಾಡುವವರೇ ಹೆಚ್ಚಾಗುತ್ತಿದ್ದು, ಡಿಸೆಂಬರ್‌, ಜನವರಿ ಚಳಿ ಹಾಗೂ ಪ್ರತಿ ತಾಲೂಕಿನಲ್ಲಿ ನಿಗದಿಯಾದ ಮದುವೆಗಳು ಯಾವ ಪರಿಸ್ಥಿತಿ ತಂದಿಡುತ್ತದೆಯೋ ಗೊತ್ತಿಲ್ಲ.

ಹೀಗೆ ನಿರ್ಲಕ್ಷಿಸಿದ ಕಾರಣ ದಕ್ಷಿಣದ ಜಿಲ್ಲೆಗಳಲ್ಲಿ ಉತ್ತರ ಕನ್ನಡಕ್ಕಿಂತ ಹೆಚ್ಚು ಸಾವು, ನೋವು ಸಂಭವಿಸಿತ್ತು. ವಿರಳ ಜನಸಂಖ್ಯೆ, ವಿವಿಧ ಇಲಾಖೆಗಳ ಶ್ರಮದಿಂದ ಕೋವಿಡ್‌ ಅತಿರೇಕಕ್ಕೆ ಹೋಗದಿದ್ದರೂ ಜಿಲ್ಲೆಯನ್ನು ಕಾಡಿದ್ದನ್ನು ಮರೆಯಬಾರದು. ದೆಹಲಿಯಲ್ಲಿ ಇಳಿಮುಖವಾಗಿದ್ದ ಕೋವಿಡ್‌ ಈಗ ಅಬ್ಬರಿಸುತ್ತಿದ್ದು, ನಿತ್ಯ ಸಾವಿರ ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದ್ದು, ನೂರು ಜನ ನಿತ್ಯ ಸಾಯುತ್ತಿದ್ದಾರೆ. ಗಂಟೆಗೆ 4 ಜನರ ಸಾವು ಊಹಿಸಲೂ ಅಸಾಧ್ಯ. ಕಾಲೇಜುಗಳು ಆರಂಭವಾಗಿವೆ, ಕೋವಿಡ್‌ ಪರೀಕ್ಷೆ ನಡೆದಿದೆ, ದೀಪಾವಳಿ ಮಾತ್ರ ಮುಗಿದಿದೆ. ಕೋವಿಡ್‌ ಹೆಚ್ಚಾಗದಿರಲಿ ಎಂದು ಹಲವರು ಬೇಡಿಕೊಳ್ಳುತ್ತಿದ್ದರೆ ಸಂಬಂಧವಿಲ್ಲದಂತೆ ಇರುವವರ ಸಂಖ್ಯೆ ಹೆಚ್ಚುತ್ತಿದೆ. ಮಾಸ್ಕ್ ದಂಡಹಾಕುವುದು ನಿಂತಿದೆ. ನಮಗೆ ಬಂದಿಲ್ಲ ಎಂದ ಮಾತ್ರಕ್ಕೆ ಬರಬಾರದು ಎಂದಿಲ್ಲ ಎಂದು ತಿಳಿದುಕೊಂಡವರ ಸಂಖ್ಯೆ ಕಡಿಮೆಯಿದೆ. ಮೊದಲಿನ ಭೀತಿ ಮಾಯವಾದದ್ದು ಸರಿ, ಕೋವಿಡ್‌ ನಿರ್ಲಕ್ಷಿಸುವುದು ಸರಿಯಲ್ಲ ಎನ್ನುತ್ತಾರೆ ವೈದ್ಯರು.

ಒಂದು ವಾರ ಕೋವಿಡ್‌ ರಜೆ ಪಡೆದಂತಿತ್ತು. ಈಗ 4 ಜನರಿಗೆ ಸೋಂಕು ಪಾಸಿಟಿವ್‌ ಬಂದಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 500ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ಕೋವಿಡ್‌ ಪರೀಕ್ಷೆಯ ವರದಿ ಬರಬೇಕಿದೆ.

ಗೋವಾದಲ್ಲಿ ಕೋವಿಡ್ ಇಳಿಮುಖ :

ಪಣಜಿ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ಪ್ರಮಾಣ ಗಣನೀಯ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕುದೃಢಪಟ್ಟ ವ್ಯಕ್ತಿಯ ಕುಟುಂಬದವರ ಮತ್ತು ಅವರ ಸಂಪರ್ಕಕಕ್ಕೆ ಬಂದವರನ್ನು ತಪಾಸಣೆಗೆ ಒಳಪಡಿಸಲಾಗುವುದು ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್‌ ರಾಣೆ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ಸುಮಾರು ಹದಿನೈದು ದಿನಗಳ ಹಿಂದೆಯೇ ರಾಜ್ಯದಲ್ಲಿ ಕೊರೊನಾ ತಪಾಸಣೆ ಪ್ರಮಾಣ ಹೆಚ್ಚಳ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದುವರೆಗೂ ಒಂದು ದಿನವೂ ಕೋವಿಡ್ ತಪಾಸಣೆ ಸಂಖ್ಯೆ 2000ಕ್ಕೆ ತಲುಪಿಲ್ಲ. ಆದರಇದೀಗ ರಾಜ್ಯದಲ್ಲಿ ತಪಾಸಣೆ ಪ್ರಮಾಣ  ಹೆಚ್ಚಳ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮಂತ್ರಿ ರಾಣೆ ಪ್ರತಿಕ್ರಿಯೆ ನೀಡಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.