ಮೀನುಗಾರಿಕೆಗೆ ಶರತ್ತು ಬದ್ಧ ಅನುಮತಿ
Team Udayavani, May 6, 2020, 6:24 PM IST
ಕಾರವಾರ: ಮೀನುಗಾರಿಕೆಗೆ ಸರಕಾರ ಶರತ್ತುಬದ್ಧ ಅನುಮತಿ ನೀಡಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ಅವರು ತಾಪಂ ಸಭಾ ಭವನದಲ್ಲಿ ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಿದರು.
ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಗೆ ಅನುಮತಿ ನೀಡುವಂತೆ ಕೋರಿದ್ದೆ. ಈ ಬೇಡಿಕೆಗೆ ಸಚಿವರು ಸರತ್ತು ಬದ್ಧ ಅನುಮತಿ ನೀಡಲಾಗುವುದು. ಆದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನುಗಾರಿಕೆ ನಡೆಸಬೇಕು. ಶಾಸಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ ಎಂದು ಅವರು ವಿವರಿಸಿದರು.
ಮೀನುಗಾರ ಮುಖಂಡರಿಗೆ ಸಾಮಾಜಿಕ ಅಂತರದ ಮಹತ್ವ ವಿವರಿಸಿದ ಅವರು, ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿಮುಖ್ಯ. ಸ್ಯಾನಿಟೈಸರ್ನ್ನು ಆಗಾಗ ಬಳಸಬೇಕು. ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖಾ ನಿರ್ದೇಶಕರು, ಪೊಲೀಸ್ ಉಪಾಧೀಕ್ಷಕರು, ತಾಪಂ ಇಒ, ತಹಶಿಲ್ದಾರರು ಹಾಗೂ ಮೀನುಗಾರ ಮುಖಂಡರಾದ ಗಣಪತಿ ಉಳ್ವೆàಕರ, ಗಣಪತಿ ಮಾಂಗ್ರೆ, ಕೆ.ಟಿ. ತಾಂಡೇಲ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…