ಪೊಲೀಸರ ಮೇಲೆ ಹಲ್ಲೆ ಕೇಸ್: ಮಾಜಿ ಶಾಸಕ ವಿ.ಎಸ್.ಪಾಟೀಲ ಪುತ್ರ ಬಂಧನ
Team Udayavani, Feb 4, 2024, 3:40 PM IST
ಮುಂಡಗೋಡ: 2011 ರಲ್ಲಿ ಮುಂಡಗೋಡ ಪೊಲೀಸ್ ಅಧಿಕಾರಿಗಳ ಮೇಲಿನ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿನ ವಿಚಾರಣೆಗೆ ಕಳೆದ ಆರು ತಿಂಗಳಿಮದ ಹಾಜರಾಗದ ಹಿನ್ನಲೆಯಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ ಅವರ ಪುತ್ರ ಬಾಪುಗೌಡ ಪಾಟೀಲ ಅವರನ್ನು ಮುಂಡಗೋಡ ಪೊಲೀಸರು ಬಂಧಿಸಿ ಮಾಡಿ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದು ನ್ಯಾಯಾಲಯವೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
2011 ಮಾರ್ಚ್ 3 ರಂದು ಬಾಪುಗೌಡ ಪಾಟೀಲ ಅವರು ಪೊಲೀಸರು ತಮ್ಮ ಮೂಬೈಲ್ ಕರೆ ಸ್ವಿಕಾರ ಮಾಡಿಲ್ಲ ಎಂಬ ಉದ್ದೇಶದಿಂದ ಮುಂಡಗೋಡ ಪೊಲೀಸ್ ಠಾಣೆಯ ಆಗಿನ ಎಎಸ್ಐ ಆಗಿದ್ದ ಬಾಲಕೃಷ್ಣ ಪಾಲೇಕರ ಅವರನ್ನು ಮುಂಡಗೋಡ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಿಂದಿಸಿ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಜೀವ ಬೇದರಿಕೆ ಹಾಕಿದ್ದಾರೆ ಎಂದು ಬಾಪುಗೌಡ ಸೇರಿ ಹದಿನೈದು ಜನ ಆರೋಪಿಗಳ ಮೇಲೆ ಪ್ರಕರಣ ದಾಖಖಲಾಗಿತ್ತು.
ಆರೋಪಿತರ ಪೈಕಿ ಹದಿನಾಲ್ಕು ಜನರು ನ್ಯಾಯಾಲಯದ ವಿಚಾರಣೆಗೆ ಹಾಜರಾಗುತ್ತಿದ್ದರು ಬಾಪುಗೌಡ ಪಾಟೀಲ ಮಾತ್ರ ಕಳೆದ ಆರು ತಿಂಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಗೈರು ಆಗಿದ್ದರು. ಇದರಿಂದ ನ್ಯಾಯಾಲಯ ಬಾಪುಗೌಡ ಅವರನ್ನು ನ್ಯಾಯಾಲಯಕ್ಕೆ ಹಾಜರ ಪಡಿಸಲು ವಾರೆಂಟ್ ಜಾರಿ ಮಾಡಿತ್ತು. ಅದರಂತೆ ಪೊಲೀಸರು ಬಾಪುಗೌಡ ಪಾಟೀಲ ಅವರನ್ನು ಬೆಂಗಳೂರನಿಂದ ದಸ್ತಗಿರಿ ಮಾಡಿ ಕರೆ ತಂದು ಶನಿವಾರ ರಾತ್ರಿ ನ್ಯಾಯಾಧೀಶರ ಮನೆಗೆ ಹಾಜರ ಪಡಿಸಿದರು. ನ್ಯಾಯಾಲಯವೂ ಬಾಪುಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ