ಸೋಂಕಿತನ ಶವ ಸುಟ್ಟ ಪ್ರಕರಣಕ್ಕೆ ರಾಜಕೀಯ ತಿರುವು


Team Udayavani, Jul 9, 2020, 4:06 PM IST

ಸೋಂಕಿತನ ಶವ ಸುಟ್ಟ ಪ್ರಕರಣಕ್ಕೆ ರಾಜಕೀಯ ತಿರುವು

ಕಾರವಾರ: ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕಾರವಾರ: ಕೋವಿಡ್‌ ಹೊಂದಿದ್ದ ವ್ಯಕ್ತಿ ಕಳೆದ ಸೋಮವಾರ ಮಧ್ಯಾಹ್ನ ಮೃತಪಟ್ಟ ನಂತರ ಆತನ ಶವ ಸಂಸ್ಕಾರಕ್ಕೆ ಕಾರವಾರ ಮತ್ತು ಪಕ್ಕದ ನಾಲ್ಕು ಹಳ್ಳಿಗಳ ಸ್ಮಶಾನದಲ್ಲಿ ಅವಕಾಶ ಸಿಗದೆ ಸೋಮವಾರ ತಡರಾತ್ರಿ ತನಕ ಅಧಿಕಾರಿಗಳು ಪೇಚಾಡಿದ ಘಟನೆಗೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಮಾಜಿ ಶಾಸಕ ಸತೀಶ್‌ ಸೈಲ್‌ ಕೋವಿಡ್‌ನಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ಸುರಕ್ಷಿತ ಸ್ಥಳದಲ್ಲಿ ಮಾಡಲು ಆಡಳಿತ ಪಕ್ಷದ ಶಾಸಕರು ಎಡವಿದ್ದಾರೆ ಎಂದು ಆರೋಪಿಸಿದರೆ, ಇದನ್ನು ಆಡಳಿತ ಪಕ್ಷದ ಹಾಲಿ ಶಾಸಕಿ ರೂಪಾಲಿ ನಾಯ್ಕ ಅಲ್ಲಗಳೆದಿದ್ದಾರೆ.  ಕೋವಿಡ್‌ ರೋಗಿಗಳ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕೋವಿಡ್‌ನಿಂದಾದ ಮೃತರ ಅಂತ್ಯಕ್ರಿಯೆಗೆ ಪ್ರತ್ಯೇಕ ಸ್ಥಳ ಹುಡುಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಘಟನೆ ಹಿನ್ನೆಲೆ: ಬೆಂಗಳೂರಿನಲ್ಲಿ ನಿಮೋನಿಯದಿಂದ ಬಳಲುತ್ತಿದ್ದ 42 ವರ್ಷದ ಒಬ್ಬರು ಚಿಕಿತ್ಸೆಗೆ ಆಸ್ಪತ್ರೆ ಸಿಗದೇ ಸ್ವಂತ ಊರಾದ ಶಿರಸಿಗೆ ಮರಳಿದ್ದರು. ಅವರು ಕಳೆದ ರವಿವಾರ ಶಿರಸಿಗೆ ಬಂದು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಅವರಿಗೆ ಕೋವಿಡ್‌ ಇರುವುದು ಖಚಿತವಾಗುತ್ತಿದ್ದಂತೆ ಕಾರವಾರ ವೈದ್ಯಕೀಯ ಕಾಲೇಜು ಕೋವಿಡ್‌ ಘಟಕಕ್ಕೆ ಚಿಕಿತ್ಸೆಗೆ ಕರೆತರಲಾಯಿತು. ಆದರೆ ಅವರು ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದರು. ಶವವನ್ನು ಶಿರಸಿಗೆ ಕೊಂಡೊಯ್ಯಲು ಕುಟುಂಬದವರು ಆಸಕ್ತಿ ತೋರದ ಕಾರಣ, ಅಧಿಕಾರಿಗಳು ಕಾರವಾರದ ಹೈವೇ ಪಕ್ಕದ ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಮುಂದಾದರು. ಅಲ್ಲಿನ ಜನತೆಯಿಂದ ವಿರೋಧ ವ್ಯಕ್ತವಾದ ಕಾರಣ ಹಬ್ಬುವಾಡ ಸ್ಮಶಾನದಲ್ಲಿ ಸಂಸ್ಕಾರಕ್ಕೆ ಯತ್ನಿಸಿದರೆ ಅಲ್ಲೂ ವಿರೋಧ ವ್ಯಕ್ತವಾಯಿತು. ಮಾಜಾಳಿ ಗ್ರಾಮದ ಸ್ಮಾಶನದಲ್ಲಿ ಮಾಜಿ ಶಾಸಕರಿಂದ ವಿರೋಧ ವ್ಯಕ್ತವಾಯಿತು ಎನ್ನಲಾಗಿದೆ. ಚೆಂಡಿಯಾ, ತೊಡೂರು ಗ್ರಾಪಂ ವ್ಯಾಪ್ತಿಯ ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ವಿರೋಧ ವ್ಯಕ್ತವಾದ ಕಾರಣ ಸೋಮವಾರ ತಡರಾತ್ರಿ ಹೆದ್ದರಿ ಪಕ್ಕದ ಸಂಕ್ರುಬಾಗ ಅರಣ್ಯ ಪ್ರದೇಶಕ್ಕೆ ಸೇರಿದ ಜಾಗದಲ್ಲಿ ಶವ ದಹನ ಮಾಡಲಾಯಿತು. ದಹನ ಕ್ರಿಯೆ ಸರಿಯಾಗಿಲ್ಲ ಎಂಬ ಆರೋಪ ಬರುತ್ತಿದ್ದಂತೆ ಮಂಗಳವಾರ ಶವ ದಹನ ಮಾಡಿದ ಜಾಗದಲ್ಲಿ ಟ್ರಕ್‌ನಲ್ಲಿ ಮಣ್ಣು ತಂದು ಸುರಿಯಲಾಯಿತು.

ರಾಜಕೀಯ ತಿರುವು: ಈ ಘಟನೆ ಕಾರವಾರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ಮಾಜಿ ಶಾಸಕರು, ಇದೊಂದು ಆಡಳಿತದ ವೈಫಲ್ಯ, ಶಾಸಕಿಗೆ ಮುಂದಾಲೋಚನೆಯಿಲ್ಲ. ಕೋವಿಡ್‌ ರೋಗಿ ಸತ್ತರೆ, ಪ್ರತ್ಯೇಕ ಸ್ಥಳದಲ್ಲಿ ಶವ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಜನರ ಆತಂಕ ನಿವಾರಿಸಲು, ಜನರ ಆಗ್ರಹದಂತೆ ಶವ ದಹನಕ್ಕೆ ಸ್ಥಳೀಯ ಸ್ಮಶಾನಗಳಲ್ಲಿ ಅವಕಾಶ ನೀಡಲಿಲ್ಲ ಎಂದಿದ್ದಾರೆ. ಇದಕ್ಕೆ ಹಾಲಿ ಶಾಸಕಿ ರೂಪಾಲಿ ನಾಯ್ಕ, ಸರ್ಕಾರದ ಪ್ರತಿ ಕೆಲಸದಲ್ಲೂ ಹುಳುಕು ಹುಡುಕಲಾಗುತ್ತಿದೆ ಎಂದು ಅಪ್ತರ ಬಳಿ ಅಳಲು ತೋಡಿಕೊಂಡಿದ್ದಾರೆ. ಬುಧವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೋವಿಡ್‌ ರೋಗಿಗಳು ಸಾವನ್ನಪ್ಪಿದರೆ, ಅವರ ಶವ ಸಂಸ್ಕಾರಕ್ಕೆ ಸುರಕ್ಷಿತ ಸ್ಥಳ ಹುಡುಕಲು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಸಹ ವಿವಿಧ ತಾಲೂಕುಗಳ
ತಹಶೀಲ್ದಾರರು, ಸಹಾಯಕ ಕಮಿಷನರ್‌ ಜೊತೆ ಸಭೆ ನಡೆಸಿ, ಶವ ಸಂಸ್ಕಾರಕ್ಕೆ ಅಡ್ಡಿ ಮಾಡುವವರ ವಿರುದ್ಧ ಕೇಸು ದಾಖಲಿಸಲು ಸೂಚಿಸಿದರು. ಈತನ್ಮಧ್ಯೆ ನಗರದಲ್ಲಿ ಎಲೆಕ್ಟ್ರಾನಿಕ್‌ ಚಿತಾಗಾರ ನಿರ್ಮಿಸುವಂತೆ ಬೇಡಿಕೆ ಸಹ ಕೇಳಿ ಬಂದಿದ್ದು, ಜಿಲ್ಲಾಧಿಕಾರಿಗೆಈ ಸಂಬಂಧ ಜನಶಕ್ತಿ ವೇದಿಕೆ ಲಿಖೀತ ಮನವಿಯೂ ಸಲ್ಲಿಸಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.