ಪೋಸ್ಟ್ಮನ್ನಿಂದ ಲಕ್ಷಾಂತರ ರೂ. ಪಂಗನಾಮ
Team Udayavani, Jan 8, 2020, 5:18 PM IST
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮದ ಪೋಸ್ಟಮನ್ ಸಾರ್ವಜನಿಕರ ಲಕ್ಷಾಂತರ ರೂ. ದುರ್ಬಳಕೆ ಮಾಡಿಕೊಂಡು ಪರಾರಿಯಾಗಿ ಮೂರು ತಿಂಗಳಾದರೂ ಅಂಚೆ ಇಲಾಖೆ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸದೆ ಮೌನ ವಹಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹನುಮಾಪುರದ ಯುವಕನೊಬ್ಬ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದನು. ಗ್ರಾಮದ ವ್ಯಕ್ತಿ ಎಂಬ ನಂಬಿಕೆಯಿಂದ ಜನ ಈತನ ಕೈಯಲ್ಲಿ ಉಳಿತಾಯ ಖಾತೆ ಮತ್ತು ಮರುಕಳಿಸುವ ಠೇವಣಿ ಖಾತೆಗೆ ಜಮಾ ಮಾಡಲು ಪಾಸ್ಬುಕ್ ಮತ್ತು ಹಣ ಕೊಡುತ್ತಿದ್ದರು. ಆದರೆ ಈತ ಹಣವನ್ನು ಜಮಾ ಮಾಡದೆ ಕೇವಲ ಪಾಸ್ಬುಕ್ ನಲ್ಲಿ ಮಾತ್ರ ಕೈ ಬರಹದಿಂದ ನಮೂದಿಸಿ ಮೊಹರು ಹಾಕಿ ಕೆಲವು ಜನರಿಗೆ ಪಾಸ್ ಬುಕ್ ಕೊಟ್ಟು ಇನ್ನು ಕೆಲವರ ಪಾಸ್ಬುಕ್ ಗಳನ್ನು ತನ್ನ ಬಳಿಯೆ ಇಟ್ಟುಕೊಳ್ಳುತ್ತಿದ್ದ. ಹಾಗೂ ವಿಧವಾ ವೇತನ, ವೃದ್ಧಾಪ್ಯವೇತನ ಮತ್ತು ಅಂಗವಿಕಲರಿಗೆಬರುವ ವೇತನದಲ್ಲಿಯೂ ಕೆಲವರಿಗೆ ವಂಚಿಸಿದ್ದಾನೆ.
ಅಂಚೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಬಂದು ಮನೆ ಮನೆಗೆ ತೆರಳಿ ವಂಚನೆಗೆ ಒಳಗಾದವರ ಮಾಹಿತಿ ಪಡೆದುಕೊಂಡು ಹೋಗಿ ಮೂರು ತಿಂಗಳು ಕಳೆದಿವೆ. ಆದರೆ ಅಂಚೆ ಇಲಾಖೆಯವರು ಇದೂವರೆಗೂ ಪೋಸ್ಟ್ಮನ್ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಹಾಗೂ ಅವರ ವಿರುದ್ಧ ಪೊಲೀಸ್ ದೂರು ಸಹ ದಾಖಲಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ತಹಶೀಲ್ದಾರ್ಗೆ ದೂರು: ತಾಲೂಕಿನ ಹನುಮಾಪುರ ಗ್ರಾಮದ ಕೆಲವು ಮಹಿಳೆಯರು ತಹಶೀಲ್ದಾರ್ ಶ್ರೀಧರ ಮುಂದಲಮನೆ ಅವರನ್ನು ಭೇಟಿಯಾಗಿ ತಮಗಾದ ಅನ್ಯಾಯದ ಕುರಿತು ಮಾಹಿತಿ ನೀಡಿದರು. ಹಾಗೂ ಅಂಚೆ ಇಲಾಖೆಯಿಂದ ನಮಗೆ ಹಣ ಮರಳಿ ಕೊಡಿಸುವಂತೆ ವಿನಂತಿಸಿದರು. ಈ ಕುರಿತು ಅಂಚೆ ಇಲಾಖೆಯವರೊಂದಿಗೆ ಮಾತನಾಡಿ ಹಣ ಮರಳಿಸಲು ಕ್ರಮ ವಹಿಸುತ್ತೇನೆ ಎಂದು ಮಹಿಳೆಯರಿಗೆ ಭರವಸೆ ನೀಡಿದರು. ಅಂಚೆ ಇಲಾಖೆ ಹಿರಿಯ ಅಧಿಕಾರಿಗಳು ಇನ್ನಾದರೂ ಇತ್ತ ಗಮನ ಹರಿಸಿ ಬಡ ಜನರಿಗೆ ನ್ಯಾಯ ಒದಗಿಸುವರೆ ಎಂಬುದನ್ನು ಕಾದೂ ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ