ಕುಡಿವ ನೀರು ಸರಬರಾಜಿಗೆ ಆದ್ಯತೆ ನೀಡಿ

•ತಾಲೂಕಾವಾರು ಅಧಿಕಾರಿಗಳ ಸಭೆ •ತಾಲೂಕಾಡಳಿತ ಚುರುಕಾಗಲು ಜಿಲ್ಲಾಧಿಕಾರಿ ಸೂಚನೆ

Team Udayavani, May 7, 2019, 1:26 PM IST

uk-tdy-1..

ಕಾರವಾರ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಕುಮಟಾ/ಅಂಕೋಲಾ/ಕಾರವಾರ: ಕುಡಿಯುವ ನೀರು ಸರಬರಾಜು ಮಾಡಲು ತಾಲೂಕು ಆಡಳಿತಗಳು ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದ್ದಾರೆ.

ಕುಮಟಾ ಹಾಗೂ ಅಂಕೋಲದಲ್ಲಿ ಸೋಮವಾರ ಪ್ರತ್ಯೇಕವಾಗಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಸ್ತುತ ಕುಡಿಯುವ ನೀರು ಪ್ರಮುಖ ವಿಷಯ. ಪ್ರಸಕ್ತ ಮಾಸದಲ್ಲಿ ಕುಡಿಯುವ ನೀರಿನ ಕುರಿತು ಸಾರ್ವಜನಿಕರಿಂದ ಅಹವಾಲುಗಳು ಕೇಳಿ ಬರುತ್ತಿದ್ದು, ತಾಲೂಕು ಆಡಳಿತ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸರಬರಾಜಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮೊದಲು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಹಾಗೂ ಸಮೀಪದ ನೀರಿನ ಮೂಲ ಯಾವುದೆಂದು ಗುರುತಿಸಿ ಅದಕ್ಕೆ ಬೇಕಿರುವ ಕಾಮಗಾರಿ ಕೈಗೆತ್ತಿಕೊಂಡು ತಕ್ಷಣದ ಕ್ರಮಕ್ಕೆ ಮುಂದಾಗಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಲಭ್ಯವಿರುವ ನೀರಿನ ಮೂಲದಿಂದ ಈ ತಿಂಗಳು ಟ್ಯಾಂಕರ್‌ಗಳ ಮೂಲಕ ನೀರಿನ ಸರಬರಾಜು ಮಾಡಲು ತಾಪಂ ಇಒಗಳು ಆಯಾ ಪಿಡಿಒಗಳೊಂದಿಗೆ ಕ್ರಮ ಕೈಗೊಳ್ಳಬೇಕು ಹಾಗೂ ನೀರಿನ ಮೂಲ ಇರುವುದನ್ನು ಗುರುತಿಸಿ ಪೈಪ್‌ಲೈನ್‌ ಅವಶ್ಯಕತೆ ಇದ್ದಲ್ಲಿ ಅದರ ಕಾಮಗಾರಿ ಕೈಗೊಳ್ಳುವ ಹಾಗೂ ಪ್ರಸ್ತುತ ನೀರಿನ ಸೆಲೆ ಕಡಿಮೆ ಆಗಿರುವ ಬೋರ್‌ವೆಲ್ಗಳನ್ನು ಪುನರ್ಜೀವಗೊಳಿಸಬೇಕು ಎಂದು ಅವರು ಹೇಳಿದರು.

ಕೆಲವು ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ಗಳಲ್ಲಿ ನೀರಿನ ಲಭ್ಯತೆ ಇದ್ದು, ಗ್ರಾಮಸ್ಥರಿಗೆ ಅನುಕೂಲವಾಗುವಂತಿದ್ದರೆ ಆ ಬೋರ್‌ವೆಲ್ ಮಾಲೀಕರೊಂದಿಗೆ ಚರ್ಚಿಸಿ ಬಾಡಿಗೆ ಆಧಾರದಲ್ಲಿ ಕುಡಿಯುವ ನೀರಿಗಾಗಿ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಮುಂದಿನ ಮುಂಗಾರು ಆರಂಭವಾಗುವವರೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದರು.

ಅಲ್ಲದೆ, ಮುಂದಿನ ಮುಂಗಾರಿನಲ್ಲಿ ಮುಳುಗಡೆ ಪ್ರದೇಶ ಹಾಗೂ ಗುಡ್ಡಕುಸಿತ ಸೇರಿದಂತೆ ವಿವಿಧ ಅವಘಡಗಳು ಈ ಹಿಂದಿನ ಘಟನೆಗಳನ್ನಾಧರಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಈ ಸಂಬಂಧ ಅಗತ್ಯ ಕಾಮಗಾರಿ ಕೈಗೊಳ್ಳುವುದಿದ್ದರೆ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಮೋದನೆ ಪಡೆದಕೊಳ್ಳಬೇಕು ಎಂದು ಅವರು ಹೇಳಿದರು.

ಅಲ್ಲದೆ ಬೇಸಿಗೆ ಹಾಗೂ ಮುಂಗಾರು ಸಂದರ್ಭದಲ್ಲಿ ಸಹಜವಾಗಿ ಕಂಡು ಬರುವ ರೋಗ ಲಕ್ಷಣಗಳ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಗಮನ ಹರಿಸಬೇಕು ಎಂದೂ ತಿಳಿಸಿದರು.

ಕುಮಟಾ ಸಹಾಯಕ ಕಮಿಷನರ್‌ ಪ್ರೀತಿ ಗೆಹ್ಲೂಟ್, ತಹಶೀಲ್ದಾರ್‌ ಪರಿಮಳ ಕೆ., ತಾಪಂ ಇಒ ಸಿ.ಟಿ. ನಾಯ್ಕ ಹಾಗೂ ಅಂಕೋಲಾದ ಸಭೆಯಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.