ಕುಡಿವ ನೀರು ಸರಬರಾಜಿಗೆ ಆದ್ಯತೆ ನೀಡಿ

•ತಾಲೂಕಾವಾರು ಅಧಿಕಾರಿಗಳ ಸಭೆ •ತಾಲೂಕಾಡಳಿತ ಚುರುಕಾಗಲು ಜಿಲ್ಲಾಧಿಕಾರಿ ಸೂಚನೆ

Team Udayavani, May 7, 2019, 1:26 PM IST

uk-tdy-1..

ಕಾರವಾರ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಕುಮಟಾ/ಅಂಕೋಲಾ/ಕಾರವಾರ: ಕುಡಿಯುವ ನೀರು ಸರಬರಾಜು ಮಾಡಲು ತಾಲೂಕು ಆಡಳಿತಗಳು ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದ್ದಾರೆ.

ಕುಮಟಾ ಹಾಗೂ ಅಂಕೋಲದಲ್ಲಿ ಸೋಮವಾರ ಪ್ರತ್ಯೇಕವಾಗಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಸ್ತುತ ಕುಡಿಯುವ ನೀರು ಪ್ರಮುಖ ವಿಷಯ. ಪ್ರಸಕ್ತ ಮಾಸದಲ್ಲಿ ಕುಡಿಯುವ ನೀರಿನ ಕುರಿತು ಸಾರ್ವಜನಿಕರಿಂದ ಅಹವಾಲುಗಳು ಕೇಳಿ ಬರುತ್ತಿದ್ದು, ತಾಲೂಕು ಆಡಳಿತ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸರಬರಾಜಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮೊದಲು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಹಾಗೂ ಸಮೀಪದ ನೀರಿನ ಮೂಲ ಯಾವುದೆಂದು ಗುರುತಿಸಿ ಅದಕ್ಕೆ ಬೇಕಿರುವ ಕಾಮಗಾರಿ ಕೈಗೆತ್ತಿಕೊಂಡು ತಕ್ಷಣದ ಕ್ರಮಕ್ಕೆ ಮುಂದಾಗಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಲಭ್ಯವಿರುವ ನೀರಿನ ಮೂಲದಿಂದ ಈ ತಿಂಗಳು ಟ್ಯಾಂಕರ್‌ಗಳ ಮೂಲಕ ನೀರಿನ ಸರಬರಾಜು ಮಾಡಲು ತಾಪಂ ಇಒಗಳು ಆಯಾ ಪಿಡಿಒಗಳೊಂದಿಗೆ ಕ್ರಮ ಕೈಗೊಳ್ಳಬೇಕು ಹಾಗೂ ನೀರಿನ ಮೂಲ ಇರುವುದನ್ನು ಗುರುತಿಸಿ ಪೈಪ್‌ಲೈನ್‌ ಅವಶ್ಯಕತೆ ಇದ್ದಲ್ಲಿ ಅದರ ಕಾಮಗಾರಿ ಕೈಗೊಳ್ಳುವ ಹಾಗೂ ಪ್ರಸ್ತುತ ನೀರಿನ ಸೆಲೆ ಕಡಿಮೆ ಆಗಿರುವ ಬೋರ್‌ವೆಲ್ಗಳನ್ನು ಪುನರ್ಜೀವಗೊಳಿಸಬೇಕು ಎಂದು ಅವರು ಹೇಳಿದರು.

ಕೆಲವು ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ಗಳಲ್ಲಿ ನೀರಿನ ಲಭ್ಯತೆ ಇದ್ದು, ಗ್ರಾಮಸ್ಥರಿಗೆ ಅನುಕೂಲವಾಗುವಂತಿದ್ದರೆ ಆ ಬೋರ್‌ವೆಲ್ ಮಾಲೀಕರೊಂದಿಗೆ ಚರ್ಚಿಸಿ ಬಾಡಿಗೆ ಆಧಾರದಲ್ಲಿ ಕುಡಿಯುವ ನೀರಿಗಾಗಿ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಮುಂದಿನ ಮುಂಗಾರು ಆರಂಭವಾಗುವವರೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದರು.

ಅಲ್ಲದೆ, ಮುಂದಿನ ಮುಂಗಾರಿನಲ್ಲಿ ಮುಳುಗಡೆ ಪ್ರದೇಶ ಹಾಗೂ ಗುಡ್ಡಕುಸಿತ ಸೇರಿದಂತೆ ವಿವಿಧ ಅವಘಡಗಳು ಈ ಹಿಂದಿನ ಘಟನೆಗಳನ್ನಾಧರಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಈ ಸಂಬಂಧ ಅಗತ್ಯ ಕಾಮಗಾರಿ ಕೈಗೊಳ್ಳುವುದಿದ್ದರೆ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಮೋದನೆ ಪಡೆದಕೊಳ್ಳಬೇಕು ಎಂದು ಅವರು ಹೇಳಿದರು.

ಅಲ್ಲದೆ ಬೇಸಿಗೆ ಹಾಗೂ ಮುಂಗಾರು ಸಂದರ್ಭದಲ್ಲಿ ಸಹಜವಾಗಿ ಕಂಡು ಬರುವ ರೋಗ ಲಕ್ಷಣಗಳ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಗಮನ ಹರಿಸಬೇಕು ಎಂದೂ ತಿಳಿಸಿದರು.

ಕುಮಟಾ ಸಹಾಯಕ ಕಮಿಷನರ್‌ ಪ್ರೀತಿ ಗೆಹ್ಲೂಟ್, ತಹಶೀಲ್ದಾರ್‌ ಪರಿಮಳ ಕೆ., ತಾಪಂ ಇಒ ಸಿ.ಟಿ. ನಾಯ್ಕ ಹಾಗೂ ಅಂಕೋಲಾದ ಸಭೆಯಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

Karwar: ಉತ್ತರ ಕನ್ನಡದಲ್ಲಿ 14 ದೃಷ್ಟಿಕೇಂದ್ರ ಆರಂಭ

14-sirsi

Sirsi: ವೈದ್ಯ ದಿನಾಚರಣೆಗೆ ವೈದ್ಯ ಕುಟುಂಬದಿಂದ ರಕ್ತದಾನ

7-sirsi

Sirsi: ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

8

Karwar: ಮಕ್ಕಳ ಬ್ಯಾಗ್‌ ಹೊರೆ ಇಳಿಯುವುದೆಂದು?

R V Deshpande

ಸಿದ್ದರಾಮಯ್ಯ ಮೊದಲು ಯಂಗ್‌ ಇದ್ದರು,ಈಗ ಸ್ವಲ್ಪ ವೀಕ್‌ ಆಗಿದ್ದಾರೆ: ಆರ್‌.ವಿ.ದೇಶಪಾಂಡೆ 

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.