ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ
Team Udayavani, Jun 20, 2020, 11:40 AM IST
ಯಲ್ಲಾಪುರ: ಎಸ್ಎಸ್ಎಲ್ಸಿ ಪರೀಕ್ಷೆಗೆ ಇಲಾಖೆಯಿಂದ ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದೇ ಮಕ್ಕಳು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗುವುದೆಂದು ಬಿಇಒ ಎನ್. ಆರ್. ಹೆಗಡೆ ಹೇಳಿದರು.
ಪಟ್ಟಣದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ತಾಲೂಕಿನಲ್ಲಿ ನಾಲ್ಕು ಕೇಂದ್ರಗಳಲ್ಲಿ ಒಟ್ಟೂ 1,024 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಪ್ರಯಾಣಕ್ಕೆಂದು 8 ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದ ಹೊರ ಭಾಗದಲ್ಲಿ ಮೂರು ಅಡಿಗೊಂದರಂತೆ ಮಾರ್ಕ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಳ್ಳಲು ಅನುಕೂಲವಾಗಲಿದೆ.
ಮೂರು ದಿನ ಮೊದಲೇ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳನ್ನು ಸ್ಯಾನಿಟೈಜೇಷನ್ ಮಾಡಲಾಗುವುದು. ಕೇಂದ್ರಕ್ಕೆ ಪ್ರವೇಶಿಸುವಾಗ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವ ಜತೆಗೆ ಮಾಸ್ಕ್, ಸ್ಯಾನಿಟೈಸರ್ ನೀಡಲಾಗುವುದೆಂದರು. ಪರೀಕ್ಷಾ ಕೇಂದ್ರದ ಆವಾರದೊಳಗೆ ಪಾಲಕರಿಗೆ ಪ್ರವೇಶವಿರುವುದಿಲ್ಲ. ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗಿದ್ದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಕೊಠಡಿ ಕಾಯ್ದಿರಿಸಲಾಗಿದೆ. ಯಾವುದೇ ಭಯವಿಲ್ಲದೇ ಪಾಲಕರು ಮಕ್ಕಳನ್ನು ಪರೀಕ್ಷೆಗೆ ಕಳಿಸಬೇಕು ಎಂದರು. ಮುಕ್ತಾ ಶಂಕರ, ರವೀಂದ್ರ ಕಾಪ್ಸೆ ಹಾಗೂ ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ