ಮುಂಗಾರು ಹಂಗಾಮಿಗೆ ತಯಾರಿ

ಭತ್ತ ಬಿತ್ತನೆ ಕಾರ್ಯ ಆರಂಭ

Team Udayavani, May 18, 2020, 5:29 PM IST

UK-TDY-2

ಕುಮಟಾ: ಮುಂಗಾರು ಹಂಗಾಮಿಗೆ ತಾಲೂಕಿನ ರೈತಾಪಿ ಸಮುದಾಯ ಸನ್ನದ್ಧವಾಗಿದ್ದು, ಈಗಾಗಲೇ ಕೆಲ ಪ್ರದೇಶಗಳಲ್ಲಿ ಭತ್ತದ ಬಿತ್ತನೆ ಆರಂಭವಾಗಿದೆ. ಕೆಲ ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯು ಭತ್ತದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ತಾಲೂಕು ವ್ಯಾಪ್ತಿಯಲ್ಲಿ ಒಟ್ಟೂ 2.860 ಹೆಕ್ಟೇರ್‌ ಭತ್ತ ಬೆಳೆಯುವ ಪ್ರದೇಶವಿದ್ದು, ಕೂಜಳ್ಳಿ ಹಾಗೂ ಅಳ್ವೆಕೋಡಿ ಭಾಗದಲ್ಲಿನ ರೈತರು ಈಗಾಗಲೇ ಭೂಮಿಹದಗೊಳಿಸಿ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ಆಗಾಗ ಮಳೆಯಾಗುತ್ತಿರುವುದರಿಂದ ಭೂಮಿಯಲ್ಲಿ ತೇವಾಂಶ ಅಧಿಕವಾಗುತ್ತಿದ್ದು, ಇದು ಭತ್ತದ ಬಿತ್ತನೆ ಕಾರ್ಯಕ್ಕೆ ವರದಾನವಾಗಿ ಪರಿಣಮಿಸಿದೆ.

ತಾಲೂಕಿನ ಕುಮಟಾ, ಕೂಜಳ್ಳಿ, ಮಿರ್ಜಾನ ಹಾಗೂ ಗೋಕರ್ಣ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ತಾಲೂಕು ವ್ಯಾಪ್ತಿಯಲ್ಲಿ ನೀರು ಬಿತ್ತನೆ ಹಾಗೂ ಹೋಬಳಿ ಭಾಗಗಳಲ್ಲಿ ಸಾಲು ನಾಟಿ ಅಧಿಕವಾಗಿದೆ. ಮೊದಲ ಹಂತದಲ್ಲಿ 440 ಕ್ವಿಂಟಾಲ್‌ ಜಯಾ ಭತ್ತದ ಬೀಜ ಬಂದಿದ್ದು, 725 ರೈತರಿಗೆ 251 ಕ್ವಿಂಟಾಲ್‌ ಬೀಜವನ್ನು ವಿತರಿಸಲಾಗಿದೆ.  ಎಂಟಿಯು-1.000 ತಳಿಯ 220 ಕ್ವಿಂಟಾಲ್‌ ಬೀಜ ದಾಸ್ತಾನಿದ್ದು, 217 ರೈತರಿಗೆ 75 ಕ್ವಿಂಟಾಲ್‌ ಹಾಗೂ ಹೈಬ್ರಿಡ್‌ ಪಿ.ಎ.ಸಿ-837 ಭತ್ತದ ತಳಿಯ 10.5 ಕ್ವಿಂಟಾಲ್‌ ದಾಸ್ತಾನಿದ್ದು, ಇದನ್ನು 8 ರೈತರು ಮಾತ್ರ ಪಡೆದುಕೊಂಡಿದ್ದಾರೆ. ಈ ಎಲ್ಲ ಬೀಜವನ್ನು ಸಹಾಯ ಧನದಲ್ಲಿ ರೈತರಿಗೆ ವಿತರಿಸಲಾಗುತ್ತಿದೆ.

ಬೇಡಿಕೆಗೆ ತಕ್ಕಂತೆ ಮೂರು ಹಂತಗಳಲ್ಲಿ ಬಿತ್ತನೆ ಬೀಜವನ್ನು ತರಿಸಿಕೊಡಲಾಗುವುದು. ತಾಲೂಕಿ ನಲ್ಲಿ ಬೀಜ ಭತ್ತದ ಒಟ್ಟೂ ಬೇಡಿಕೆ ಸರಿ ಸುಮಾರು 950 ಕ್ವಿಂಟಾಲ್‌ ಗಳಿವೆ. ಆದರೆ ಕಳೆದ ವರ್ಷ ನೆರೆ ಹಾವಳಿಯಿಂದ ಭತ್ತದ ಬೆಳೆ ಹಾಳಾಗಿರುವುದರಿಂದ ಈ ವರ್ಷ 1 ಸಾವಿರ ಕ್ವಿಂಟಾಲ್‌ ಗಿಂತಲೂ ಅಧಿಕ ಬೇಡಿಕೆ ಬರುವ ನಿರೀಕ್ಷೆಯಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ಮಾಹಿತಿ ನೀಡಿದ್ದಾರೆ. ಕೃಷಿ ಚಟುವಟಿಕೆಗೆ ಕೂಲಿ ಕಾರ್ಮಿಕರ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಲಾಕ್‌ ಡೌನ್‌ನಿಂದ ಕೃಷಿ ಕಾರ್ಯ ವಿಳಂಬವಾಗಿದೆ. ಇದರಿಂದ ಆರ್ಥಿಕ ಸಂಕಷ್ಟವಾಗಲಿದ್ದು, ಸರ್ಕಾರ ರೈತರ ಸಹಾಯಕ್ಕೆ ನಿಲ್ಲಬೇಕು ಎನ್ನುತ್ತಾರೆ ಕೂಜಳ್ಳಿಯ ರೈತ ಮಾದೇವ ನಾಯ್ಕ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.