ಮಳೆಗಾಲದಲ್ಲೂ ಕುಡಿವ ನೀರಿಗೆ ಬರ!

ದೀವಗಿ ನವಗ್ರಾಮದ ಜನರ ಪರದಾಟ; ಬರುತ್ತಿದೆ ಶೇಡಿ ಮಣ್ಣು ಮಿಶ್ರಿತ ನೀರು ; ಬೇಕಿದೆ ಶಾಶ್ವತ ಪರಿಹಾರ

Team Udayavani, Sep 12, 2022, 4:19 PM IST

18

ಕುಮಟಾ: ಬಿರು ಬೇಸಿಗೆಯಲ್ಲಿ ಎಲ್ಲೆಡೆ ನೀರಿಗೆ ಬರ ಸಹಜ. ಆದರೆ ತಾಲೂಕಿನ ದೀವಗಿ ನವಗ್ರಾಮದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದಾಗಿ ಎಡಬಿಡದೆ ಸುರಿಯುವ ಮಳೆಯಲ್ಲೂ ಕುಡಿಯುವ ನೀರಿಗೆ ಬರದ ಛಾಯೆ ಆವರಿಸಿದೆ.

ನವಗ್ರಾಮ ಅತೀ ಎತ್ತರದ ಪ್ರದೇಶದಲ್ಲಿದ್ದು, ಸುಮಾರು 60-70 ರಷ್ಟು ಮನೆಗಳಿವೆ. ಇಲ್ಲಿ ಮನೆ ಮನೆಗೆ ನಲ್ಲಿ ಸಂಪರ್ಕದ ಮೂಲಕ ಪಂಚಾಯತನಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತದೆ. ಅದು ಕೂಡ ಶೇಡಿ ಮಣ್ಣು ಮಿಶ್ರಿತ ನೀರು. ಇದೇ ನೀರನ್ನು ಇಲ್ಲಿನ ಜನ ನಂಬಿದ್ದಾರೆ. ಆದರೆ ಹಲವು ಬಾರಿ ವಿದ್ಯುತ್‌ ಸಮಸ್ಯೆ, ಪೈಪ್‌ ಸೋರುವಿಕೆ, ಪಂಪ್‌ಸೆಟ್‌ ದುರಸ್ತಿ ಸೇರಿದಂತೆ ಅನೇಕ ಕಾರಣಗಳಿಂದ ಕೆಲವೊಮ್ಮೆ ನೀರು ಪೂರೈಸುವುದಿಲ್ಲ. ಈ ವೇಳೆ ಗ್ರಾಮಸ್ಥರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇದೆ. ಇನ್ನು ಕೆಲವರು 400 ರಿಂದ 450 ರೂ.ಗಳನ್ನು ನೀಡಿ ವಾಹನದ ಮೂಲಕ ನೀರನ್ನು ತರಿಸಿಕೊಳ್ಳುತ್ತಾರೆ. ಆದರೆ ಇದು ಬಹುತೇಕ ಬಡವರಿಂದ ಸಾಧ್ಯವಿಲ್ಲದ ಮಾತು. ಹೀಗಾಗಿ ದೂರದ ಬಾವಿಗಳಿಂದ ನೀರು ತರುವ ಪರಿಸ್ಥಿತಿ ಇದೆ. ಆ ನಂತರ ಸೂಚನೆ ಮೇರೆಗೆ ಮನೆಗೆ ತಲಾ 5 ಕೊಡ ನೀರು ಪೂರೈಸಿದ್ದಾರೆ.

ಅಷ್ಟೇ ಅಲ್ಲದೇ ಎರಡು ದಿನಗಳಿಗೊಮ್ಮೆ ಪೂರೈಕೆಯಾಗುವ ನೀರನ್ನು ಪ್ರತಿನಿತ್ಯ ಪೂರೈಸಲು ಗ್ರಾಮಸ್ಥರು ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ತಿಂಗಳಿನ 30 ದಿನದಲ್ಲಿ ಎರಡು ದಿನಕ್ಕೊಮ್ಮೆಯಂತೆ 15 ದಿನ ನೀರಿನ ಪೂರೈಕೆ ಆಗುತ್ತದೆ. ಅದರಲ್ಲಿ ಎರಡು ಬಾರಿ ಪೈಪ್‌ ತುಂಡಾಗಿ, ಮಷಿನ್‌ ಹಾಳಾಗಿ ಒಂದರ ದುರಸ್ತಿಗೆ 4 ದಿನ ತೆಗೆದುಕೊಂಡು, 8 ದಿನಗಳ ಕಾಲ ದುರಸ್ತಿಯಲ್ಲಿ ಕಳೆದು ಹೋಗಿದೆ. ಇನ್ನುಳಿದ 7 ದಿನಗಳ ನೀರು ಇಡೀ ತಿಂಗಳು ಬಳಕೆ ಮಾಡಬೇಕು. ಇದು ಹೇಗೆ ಸಾಧ್ಯ ಎನ್ನುವುದು ಜನಸಾಮಾನ್ಯರ ಪ್ರಶ್ನೆ. ಕುಡಿಯುವ ನೀರಿನ ಬದಲಿ ವ್ಯವಸ್ಥೆ ಮಾಡಿಲ್ಲ. ಇದರಿಂದಾಗಿ ಗ್ರಾಮಸ್ಥರು ದೂರದಿಂದ ಒಂದೆರಡು ಕೊಡಗಳಷ್ಟು ನೀರನ್ನು ತೆಗೆದುಕೊಂಡು ಬಳಸುತ್ತಿದ್ದು, ನೀರಿನ ಸಮಸ್ಯೆ ಎದುರಿಸುತ್ತಿದ್ದರು. ನಾಲ್ಕನೇ ದಿನ ಇದೇ ರೀತಿ ಮುಂದುವರೆದಾಗ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ದೂರು ನೀಡಿ ಸಮಸ್ಯೆ ಬಗೆಹರಿಸಲು ಕೋರಿದ್ದಾರೆ.

ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಕಾರ್ಯನಿರ್ವಹಣಾಧಿಕಾರಿ ನಾಗರತ್ನ ನಾಯಕ, ನವಗ್ರಾಮದಲ್ಲಿ ಈಗಿರುವ ಓವರ್‌ ಹೆಡ್‌ ಟ್ಯಾಂಕ್‌ನ ನೀರನ್ನು ದಿನಬಳಕೆಗೆ ಬಳಸಿ, ಕುಡಿಯುವ ನೀರಿಗಾಗಿ ಇನ್ನೊಂದು ಬೋರ್‌ ಮೂಲಕ ಈ ಮೊದಲು ಬಳಸುತ್ತಿದ್ದ ಎಲ್ಲ ಹಳೆಯ ನೀರಿನ ಟ್ಯಾಂಕ್‌ಗಳ ಮೂಲಕ ಪೂರೈಸಲಾಗುವುದು. ಜೊತೆಗೆ ಹಳೆಯ ಟ್ಯಾಂಕ್‌ಗಳನ್ನು ಪರಿಶೀಲಿಸಿ, ಸ್ವತ್ಛಗೊಳೊಸಿ ಪುನಃ ಅವುಗಳಿಗೆ ನೀರಿನ ಸಂಪರ್ಕ ಕಲ್ಪಿಸುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದಿನ ದಿನಗಳಲ್ಲಿ ಸಮಸ್ಯೆ ಆಗದಂತೆ ಕುಡಿಯುವ ನೀರಿಗಾಗಿ ಟ್ಯಾಂಕ್‌ಗೆ ಪ್ರತಿದಿನ ನೀರನ್ನು ಪೂರೈಕೆ ಮಾಡಿ ಮನೆ ಸಂಪರ್ಕದ ನಲ್ಲಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಸುವಂತೆ ಸೂಚಿಸಿದರು.

ಓಟ್ಟಾರೆ ನಾಲ್ಕು ದಿನಗಳಿಂದ ನೀರಿಗಾಗಿ ಪರದಾಡುತ್ತಿದ್ದ ನವಗ್ರಾಮದ ಗ್ರಾಮಸ್ಥರಿಗೆ ತಾತ್ಕಾಲಿಕ ಪರಿಹಾರ ದೊರೆತಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂಬುದು ಕಾದು ನೋಡಬೇಕಿದೆ.

ಬೊರ್‌ವೆಲ್‌ನಿಂದ ನೀರನ್ನು ಪಂಪ್‌ ಮಾಡಿ ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ಮನೆಗಳಿಗೆ ನೀರು ಸರಬರಾಜಾಗುತ್ತದೆ. ಆದರೆ ಪಂಪ್‌ ಕೆಟ್ಟು ಹೋದ ಕಾರಣ ನೀರು ಪೂರೈಕೆಯಾಗಿರಲಿಲ್ಲ. ಇದೀಗ ಸರಿಪಡಿಸಲಾಗಿದ್ದು ಎಂದಿನಂತೆ ನೀರು ಪೂರೈಕೆಯಾಗಲಿದೆ. -ರೇಖಾ ನಾಯಕ, ಗ್ರಾಪಂ ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.