ಕಾರ್ಮಿಕ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Team Udayavani, Nov 27, 2020, 5:20 PM IST

Protest-against-anti-labor-policy

ಹೊನ್ನಾವರ: ದುಡಿಯುವ ವರ್ಗಗಳ ಸಂವಿಧಾನಾತ್ಮಕ ಬೇಡಿಕೆ ಈಡೇರಿಸಲು ದೇಶಾದ್ಯಂತ 11 ಸಂಘಟನೆಗಳು ಜಂಟಿಯಾಗಿ ಮುಷ್ಕರ ನಡೆಸುತ್ತಿದ್ದು ತಾಲೂಕಿನಲ್ಲಿಯೂ ಸಿಐಟಿಯು ಜೊತೆ ವಿವಿಧ ಸಂಘಟನೆಯವರು ಒಗ್ಗೂಡಿ ಶರಾವತಿ ವೃತ್ತದ ಬಳಿಯಿಂದ ತಹಶೀಲ್ದಾರ್‌ ಕಚೇರಿವರೆಗೆ ಪ್ರತಿಭಟನಾ ಮೆರವಣೆಗೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ವಿಫಲವಾಗಿದ್ದು, ಎಲ್ಲಾ ವರ್ಗದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಮಿಕರನ್ನು ಗುಲಾಮರನ್ನಾಗಿಸುವ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಅಂಗನವಾಡಿ ಬಿಸಿಯೂಟ ಆಶಾ ಸೇರಿದಂತೆ ವಿವಿಧ ರೀತಿಯಲ್ಲಿ ದುಡಿಯುವ ನೌಕರರನ್ನು ಕಾಯಂ ಮಾಡಲು ಮೀನಾಮೇಷ ಮಾಡುತ್ತಿದ್ದು, ಸೂಕ್ತ ವೇತನ ನೀಡುತ್ತಿಲ್ಲ.

ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಮುಂದಾಗಿದ್ದು ಇದನ್ನು ಕೂಡಲೇ ರದ್ದುಗೊಳಿಸಬೇಕು. ಹಣಕಾಸು ವಲಯ, ರೈಲ್ವೆ, ರಕ್ಷಣಾ ವಲಯ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಸರ್ಕಾರಿ ನೌಕರರ ಮೇಲಿನ ಅಕಾಲಿಕ ನಿವೃತ್ತಿ ವಾಪಸ್‌ ಪಡೆಯಬೇಕು.

ಇದನ್ನೂ ಓದಿ:ಮಲೆನಾಡ ಗಂಗೆ ಎಂದೇ ಪ್ರಸಿದ್ದಿ ಪಡೆದ ಹೇಮಾವತಿ ನದಿ ಉಗಮವಾಗಿದ್ದೇ ಇಲ್ಲಿ

ಎಲ್ಲರನ್ನು ಪಿಂಚಣೆವ್ಯಾಪ್ತಿಗೆ ತಂದು ಎನ್‌ಪಿಎಸ್‌ ಪದ್ಧತಿ ರದ್ದುಗೊಳಿಸಬೇಕು. ಉದ್ಯೋಗಖಾತ್ರಿ ಯೋಜನೆ ಕೆಲಸದ ದಿನವನ್ನು 200 ದಿನಗಳಿಗೆ ಹೆಚ್ಚಿಸಿ ಕೂಲಿಯ ಹಣ ಹೆಚ್ಚಿಸಬೇಕು. ನಾಗರಿಕ ಸೇವಾ ಅಧಿನಿಯಮ ಕಾಯ್ದೆ 2020ನ್ನು ಕೂಡಲೇ ವಾಪಸ್‌ ಪಡೆಯುವಂತೆ ಪ್ರಮುಖ 12 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ತಾಲೂಕು ದಂಡಾಧಿಕಾರಿ ವಿವೇಕ ಶೇಣ್ವಿ ಮನವಿ ಸ್ವೀಕರಿಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ತಿಲಕ ಗೌಡ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಗೀತಾ ನಾಯ್ಕ, ಸಿಐಟಿಯು ತಾಲೂಕು ಅಧ್ಯಕ್ಷ ತಿಮ್ಮಪ್ಪ ಗೌಡ, ರೈತ ಸಂಘದ ಅಧ್ಯಕ್ಷ ಗಣೇಶ ಭಂಡಾರಿ, ಬಿಸಿಯೂಟ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಶ್ರೀಮತಿ ನಾಯ್ಕ, ವಿವಿಧ ಸಂಘಟನೆ ಪ್ರಮುಖರಾದ ಬೀರ ಗೌಡ, ಗೋವಿಂದ ಮುಕ್ರಿ, ಅಣ್ಣಪ್ಪ ಗೌಡ, ವನಿತಾ ಆಚಾರಿ, ಮಂಜುನಾಥ ಗೌಡ ಸೇರಿದಂತೆ ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಹಾಜರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.