ಗುತ್ತಿಗೆದಾರರ ವಿರುದ್ಧ ಪ್ರತಿಭಟನೆ
Team Udayavani, Oct 25, 2019, 2:48 PM IST
ಅಂಕೋಲಾ: ತಾಲೂಕಿನ ಗುಂಡಬಾಳ ಮರಾಕಲ್ ಯೋಜನೆಯ ಗಂಗಾವಳಿ ನದಿ ನೀರನ್ನು ಕುಮಟಾ ತಾಲೂಕಿಗೆ ಸಾಗಿಸುವ ಯೋಜನೆಗೆ ವಿರೋಧವಿದ್ದರೂ ಬಳಲೆ ಬಳಿ ಪೈಪ್ಲೈನ್ ಅಳವಡಿಕೆ ಕಾಮಗಾರಿ ನಡೆಸುತ್ತಿರುವ ಸ್ಥಳದಲ್ಲಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗುತ್ತಿಗೆದಾರ ಮತ್ತು ಕುಮಟಾ ನೀರಾವರಿ ಅಧಿಕಾರಿ ಬೆದರಿಕೆ ಹಾಕಿರುವುದನ್ನು ಸಗಡಗೇರಿ ಜಿಲ್ಲಾ ಗ್ರಾಮೀಣ ಯುವ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಯೋಜನೆ ಕುರಿತು ಅನೇಕ ಭಾರಿ ಹೋರಾಟಗಳು ನಡೆಯುತ್ತಿದೆ. ಗುಂಡಬಾಳ ಮರಕಾಲ್ ಯೋಜನೆ ಗಂಗಾವಳಿ ನದಿ ನೀರನ್ನು ಅಂಕೋಲಾ ತಾಲೂಕಿನಗ್ರಾಮಗಳಿಗೆ ಮೊದಲು ನೀಡಿ ಆ ನಂತರ ಬೇರೆಯವರಿಗೆ ಒಯ್ಯಲು ತಮ್ಮದೇನು ತಕರಾರು ಇಲ್ಲ. ಆದರೆ ಅಂಕೋಲಾ ತಾಲೂಕಿನ ಜನರು ನೀರಿಗಾಗಿ ಪರತಪಿಸುತ್ತಿದ್ದಾರೆ.
ಆದಾಗ್ಯೂ ಬಳಲೆ ಗ್ರಾಮದಲ್ಲಿ ಮತ್ತೆ ಬೇರೆ ತಾಲೂಕಿಗೆ ನೀರನ್ನು ಸಾಗಿಸಲು ಪೈಪ್ಲೈನ್ ಅಳವಡಿಕೆ ಕಾರ್ಯ ಮಾಡುತ್ತಿದ್ದಾರೆ. ಇದನ್ನು ಪ್ರತಿಭಟಿಸಲು ಹೋದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ವಾರದ ಒಳಗೆ
ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಸ್ಥಳೀಯ ಗುತ್ತಿಗೆದಾರ ಮೇಲೆ ಮತ್ತು ಅಧಿಕಾರಿಗಳ ಮೇಲೆ ಕ್ರಮ ಜರುಗಿಸದಿದ್ದರೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು ಎಂದು ಹೋರಾಟ ಸಮಿತಿ ರವೀಂದ್ರ ನಾಯಕ, ಸತೀಶ ಗೌಡ, ಶ್ರವಣ ನಾಯ್ಕ, ಸುಬ್ಬಯ್ಯ ನಾಯಕ, ಸುಭಾಶ ನಾಯಕ, ಡಿ.ಜಿ. ನಾಯಕ, ಸುಮಿತ್ರಾ ಹರಿಕಂತ್ರ, ಸಣ್ಣಮ್ಮ ಹರಿಕಂತ್ರ, ಶಾಂತಾ ಆಗೇರ, ಮಾಸ್ತಿ ಹರಿಕಂತ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್