ಸಾಗರ ಮಾಲಾ ಯೋಜನೆ ವಿರೋಧಿಸಿ ಪ್ರತಿಭಟನೆ


Team Udayavani, Jan 14, 2020, 4:03 PM IST

uk-tdy-1

ಕಾರವಾರ: ಇಲ್ಲಿನ ಸರ್ವಋತು ಬಂದರು ಎರಡನೇ ಹಂತದ ವಿಸ್ತರಣೆಗೆ ಕೇಂದ್ರ ಸರ್ಕಾರ ರೂಪಿಸಿ ಜಾರಿ ಮಾಡುತ್ತಿರುವ ಸಾಗರ ಮಾಲಾ ಯೋಜನೆ ವಿರೋಧಿಸಿ ಸಾವಿರಾರು ಮೀನುಗಾರರು ಕಡಲತೀರದಲ್ಲಿ ಪ್ರತಿಭಟನೆ ನಡೆಸಿದರು. ಕಾರವಾರ ಬೀಚ್‌ನಲ್ಲಿ 125 ಕೋಟಿ ವೆಚ್ಚದ ಅಲೆತಡೆ ಗೋಡೆ ಕಾಮಗಾರಿಗೆ ಅಡ್ಡಿಪಡಿಸಿದರು.

ಕಾಮಗಾರಿಗೆ ಅಡ್ಡಿಪಡಿಸಿದ ಮೀನುಗಾರ ಮುಖಂಡರು ಹಾಗೂ ಯುವಕರು, ಮಹಿಳೆಯರನ್ನು ಪೊಲೀಸರು ಬಂಧಿಸಿ ಬಸ್‌ನಲ್ಲಿ ಪೊಲೀಸ್‌ ಪರೇಡ್‌ ಮೈದಾನಕ್ಕೆ ಕರೆದೊಯ್ದರು. ಬೆಳಗಿನಿಂದ ಅಲೆತಡೆಗೋಡೆ ಕಾಮಗಾರಿ ಗುತ್ತಿಗೆ ಪಡೆದ ಏಜೆನ್ಸಿ ಪ್ರಾರಂಭಿಸಿತು. ಇದನ್ನು ಮೀನುಗಾರರು ಪ್ರತಿರೋಧಿಸುತ್ತಲೇ ಇದ್ದರು. ಪರಿಸರ ಇಲಾಖೆ ಅನುಮತಿ ಇಲ್ಲ. ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಮೀನುಗಾರಿಕೆಗೆ ತೊಂದರೆಯಾಗಲಿದೆ. ಕಾರವಾರ ಕಡಲತೀರ ಪ್ರವಾಸಿಗರಿಗೆ ಮತ್ತು ಜನತೆಗೆ ಉಳಿಯುವುದಿಲ್ಲ. ಇದು ಅವೈಜ್ಞಾನಿಕ ಕಾಮಗಾರಿ ಎಂದು ಅಧಿಕಾರಿಗಳು ಹಾಗೂ ಪೊಲೀಸರ ಜತೆ ಮುಖಂಡರು ಹಾಗೂ ಯುವಕರು ವಾಗ್ವಾದಕ್ಕೆ ಇಳಿದರು.

ಬೆಳಗಿನ 11:29ರ ಹೊತ್ತಿಗೆ ಪರಿಸ್ಥಿತಿ ಕೈ ಮೀರುವ ಸುಳಿವು ಅರಿತ ಪೊಲೀಸರು ಪ್ರತಿಭಟನಾಕಾರರ ಬಂಧನಕ್ಕೆ ಎರಡು ಬಸ್‌ ತರಿಸಿದರು. ಆರಂಭದಲ್ಲಿ ಮುಖಂಡರಾದ ಗಣಪತಿ ಮಾಂಗ್ರೆ ಹಾಗೂ ರಾಜು ತಾಂಡೇಲ ಹಾಗೂ ಯುವಕರನ್ನು, ಮಹಿಳೆಯರನ್ನು ಬಂಧಿಸಲಾಯಿತು.

ಕಾಮಗಾರಿ ತಡೆಯಲು ಯುವಕರ ಪಡೆ ನುಗ್ಗುತ್ತಿದ್ದಂತೆ ಅವರನ್ನು ಸುತ್ತುವರಿದ ಪೊಲೀಸ ಪಡೆಗಳು, ಪ್ರತಿಭಟನಾಕಾರರನ್ನು ಬಂಧಿಸಿ, ಬಸ್‌ಗಳಿಗೆ ತುಂಬಿದರು. ಪ್ರತಿಭಟಿಸುತ್ತಲೇ ಬಸ್‌ ಏರಿದ ಮೀನುಗಾರರು ಸರ್ಕಾರದ ವಿರುದ್ಧ, ಅಧಿಕಾರಿಗಳ ವಿರುದ್ಧ  ಕ್ಕಾರ ಕೂಗಿದರು. ಈ ವೇಳೆಗೆ ಎರಡು ಬಸ್‌ಗಳಲ್ಲಿ ತುಂಬಿದ್ದ ನೂರಕ್ಕೂ ಹೆಚ್ಚು ಜನರನ್ನು ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನಕ್ಕೆ ಕರೆತಂದು ಪೊಲೀಸ್‌ ಬ್ಯಾರೆಕ್‌ನಲ್ಲಿ ಇಡಲಾಯಿತು. ನಂತರ ಅವರ ಹೆಸರು ನಮೂದಿಸಿಕೊಂಡು ಬಿಡುಗಡೆ ಮಾಡಲಾಯಿತು. ಈ ವೇಳೆಗೆ ಎರಡು ತಾಸು ಕಳೆದಿತ್ತು. ಅಲೆ ತಡೆಗೋಡೆ ಕಾಮಗಾರಿಗೆ ಬುನಾದಿ ಹಾಕುವ ಕ್ರಿಯೆ ನಡೆದಿತ್ತು. ಇದನ್ನು ಸ್ಥಳದಲ್ಲಿದ್ದ ಮೀನುಗಾರರು ವಿರೋಧಿಸುತ್ತಲೇ ಇದ್ದರು. ಮಧ್ಯಾಹ್ನ ಊಟದ ವಿರಾಮದ ವೇಳೆಗೆ ಬಿಡುಗಡೆ ಹೊಂದಿದ್ದ ಮೀನುಗಾರರ ಮಹಿಳೆಯರು ಮತ್ತು ಯುವಕರು ಮತ್ತೆ ಕಾಮಗಾರಿ ತಡೆಯಲು ಪ್ರತಿಭಟನೆ ಆರಂಭಿಸಿದರು.

ಕಾಮಗಾರಿ ನಡೆವ ಸ್ಥಳಕ್ಕೆ ನುಗ್ಗಿದಾಗ ಘರ್ಷಣೆ ಉಂಟಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟು ಪೊಲೀಸರು ಕಾಮಗಾರಿ ನಡೆವ ಸ್ಥಳದಲ್ಲಿ ಕೋಟೆ ರಚಿಸಿದರು. ಇದನ್ನು ಪ್ರತಿಭಟಿಸಿದ ಈರ್ವರು ಮೀನುಗಾರ ಮಹಿಳೆಯರು, ಒಬ್ಬ ಯುವಕ ಸಮುದ್ರಕ್ಕೆ ಇಳಿದು ಅಸ್ವಸ್ಥರಾದರು. ತಕ್ಷಣ ಅವರನ್ನು ಅಂಬ್ಯುಲೆನ್ಸ್‌ ಮೂಲಕ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಕಾರವಾರ ಬೀಚ್‌ನಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.