ಸಿಎಎ-ಎನ್ಆರ್ಸಿ ಕಾಯ್ದೆ ಜಾರಿಗೆ ವಿರೋಧ
Team Udayavani, Feb 5, 2020, 4:12 PM IST
ಕಾರವಾರ: ಸಿಎಎ ಹಾಗೂ ಎನ್ ಆರ್ಸಿ ಕಾಯ್ದೆ ಜಾರಿ ವಿರೋಧಿಸಿ ಕಾರವಾರದಲ್ಲಿ ನಾರ್ಥ್ ಕೆನರಾ ಮುಸ್ಲಿಂ ಯುನೈಟೆಡ್ ಫೋರಂ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ತೆಗೆದುಹಾಕುವಂತೆ ಆಗ್ರಹಿಸಿದರು.
ಅಲ್ಲದೇ, ಸಿಎಎ ಕಾಯ್ದೆಯನ್ನು ಜಾತಿ ಆಧಾರದಲ್ಲಿ ರೂಪಿಸಿದ್ದು, ಇದರಲ್ಲಿ ಮುಸ್ಲಿಂಮರನ್ನ ದೇಶದಿಂದ ಹೊರಹಾಕುವ ದುರುದ್ದೇಶವಿದೆ. ಇದು ಅಸಂವಿಧಾನಿಕ ಕಾಯ್ದೆಯಾಗಿದ್ದು, ಸಾಮಾನ್ಯ ನಾಗರಿಕರಿಗೆ ಈ ಕಾನೂನುಗಳಿಂದ ಉಂಟಾಗುವ ತೊಂದರೆಗಳನ್ನು ನಿವಾರಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ತಕ್ಷಣ ಕೇಂದ್ರ ಸರ್ಕಾರ ಸಿಎಎ, ಎನ್ಆರ್ಸಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಕೆ.ಗೆ ಕಾಯ್ದೆ ಹಿಂಪಡೆಯುವಂತೆ ಮನವಿ ಸಲ್ಲಿಸಲಾಯಿತು.
ಸಿಪಿಐ ಪಾಲಿಟ ಬ್ಯೂರೋ ಸದಸ್ಯರು ಹಾಗೂ ಮಾಜಿ ಸಂಸದರು ಎಂ.ಎ. ಬೇಬಿ, ಸಂಸತ್ ಸದಸ್ಯರು ಎಳಮಾರಮ್ ಕರಿಂ, ರಾಜ್ಯ ಕಾರ್ಯದರ್ಶಿ ಯ.ಬಸವರಾಜ್, ಜಿಲ್ಲಾ ಸಮಿತಿ ಶಾಂತಾರಾಮ ನಾಯ್ಕ ಹಾಗೂ ಕೆನರಾ ಮುಸ್ಲಿಂ ಯುನೈಟೆಡ್ ಫೋರಂ ಸದಸ್ಯರು ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್