Dandeli – ಅಳ್ನಾವರ ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jan 19, 2024, 3:07 PM IST
ದಾಂಡೇಲಿ: ಸ್ಥಗಿತಗೊಂಡಿರುವ ದಾಂಡೇಲಿ – ಅಳ್ನಾವರ ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆಆಗ್ರಹಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯು ಶುಕ್ರವಾರ ನಗರದ ಹಸನ್ಮಾಳದಲ್ಲಿರುವ ರೈಲ್ವೆ ಹಳಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯ ರಾಜ್ಯ ನಿರ್ದೇಶಕ ಫೈರೋಜ್ ಫಿರ್ಜಾದೆ, ಸಂಘಟನೆಯ ಪದಾಧಿಕಾರಿ ರವಿ ಸುತಾರ್ ಮಾತನಾಡಿ, ಬ್ರಿಟಿಷರ ಕಾಲದಿಂದಲೇ ಇದ್ದಂತ ರೈಲು ಸಂಚಾರ ಆನಂತರ ಸ್ಥಗಿತಗೊಂಡು ಸಾಕಷ್ಟು ವರ್ಷಗಳ ನಿರಂತರ ಹೋರಾಟದ ಫಲವಾಗಿ ಮತ್ತೆ ಪುನರಾರಂಭವಾಯಿತು. ಆದರೆ ನಂತರದ ದಿನಗಳಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಹೀಗೆ ಸ್ಥಗಿತಗೊಳಿಸಲಾದ ರೈಲು ಸಂಚಾರವನ್ನು ಮತ್ತೆ ಪುನರಾರಂಭಿಸಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಮನವಿಯನ್ನು ಮಾಡಿದ್ದರು ಒಂದೊಂದೇ ಕಾರಣಗಳನ್ನು ಹೇಳಿರುವುದು ಬಿಟ್ಟರೆ ಸಂಚಾರವನ್ನು ಪುನರಾರಂಭಿಸುವ ಭರವಸೆ ಮಾತ್ರ ಭರವಸೆಯಾಗಿಯೇ ಉಳಿದಿದೆ ಎಂದು ಹೇಳಿದರು.
15 ದಿನದೊಳಗಡೆ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳದೆ ಇದ್ದಲ್ಲಿ ಹುಬ್ಬಳ್ಳಿಯ ವಿಭಾಗೀಯ ರೈಲ್ವೆ ಕಾರ್ಯಾಲಯದ ಮುಂಭಾಗದಲ್ಲಿ ಮತ್ತು ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.
ರೈಲ್ವೆ ಸಚಿವರಿಗೆ ಬರೆದ ಮನವಿಯನ್ನು ಹುಬ್ಬಳ್ಳಿ ರೈಲ್ವೆ ಇಲಾಖೆಯ ಅಧಿಕಾರಿಗಳ ಮೂಲಕ ನೀಡಲಾಯಿತು.
ಪ್ರಮುಖರುಗಳಾದ ಬಲವಂತ ಬೊಮ್ಮನಳ್ಳಿ, ದಿವಾಕರ ನಾಯ್ಕ, ಸತೀಶ ನಾಯ್ಕ, ಅವಿನಾಶ್ ಘೋಡ್ಕೆ, ಗೌರೀಶ್ ಬಾಬ್ರೇಕರ, ಶ್ಯಾಮು ಬೆಂಗಳೂರು, ಶ್ರೀಕಾಂತ್ ಅಸೋದೆ, ರಾಮಲಿಂಗ ಜಾಧವ್, ಸಲೀಂ ಕಾಕರ್, ರಾಜಶೇಖರ ನಿಂಬಾಳ್ಕರ್, ಸಾಧಿಕ್ ಮುಲ್ಲಾ, ದಾದಾಪೀರ್, ಕರ್ಣಮ್ಮ ತೋಡಟ್ಟಿ, ಮುಜೀಬಾ ಛಬ್ಬಿ, ನೀಲಾ ಮಾದರ, ಸವಿತಾ ದಂಡಗಿ, ಸಮೀರ್ ಅಂಕೋಲೆಕರ, ಮಂಜುಳಾ , ಬೇಬಿ, ಸಂಗೀತಾ ಅಮ್ರೆ, ಮೇರಿ, ದಿಲ್ಶಾದ್, ಭಾರ್ಗವಿ ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದಾಂಡೇಲಿಯ ಪೊಲೀಸರು ಮತ್ತು ಹುಬ್ಬಳ್ಳಿಯ ರೈಲ್ವೆ ಪೊಲೀಸರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ