ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಮುತ್ತಿಗೆ

ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಆಶ್ಲೀಲವಾಗಿ ಚಿತ್ರಿಸಿ ಇನಸ್ಟಾಗ್ರಾಂನಲ್ಲಿ ಹಾಕಿದಕ್ಕೆ ಆಕ್ರೋಶ

Team Udayavani, Mar 27, 2022, 5:12 PM IST

20

ಹಳಿಯಾಳ: ಅನ್ಯಕೋಮಿನ ಯುವಕನಿಂದ ಶುಕ್ರವಾರ ಸಾಯಂಕಾಲ ಛತ್ರಪತಿ ಶಿವಾಜಿ ಮಹಾರಾಜರ ಚಿತ್ರವನ್ನು ಅಶ್ಲೀಲವಾಗಿ ಆ್ಯಡಿಟ್‌ ಮಾಡಿ ಸಾಮಾಜಿಕ ಜಾಲತಾಣ ಇನಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಟ್ಟಣ ಪೋಲಿಸ್‌ ಠಾಣೆ ಎದುರು ಮಧ್ಯರಾತ್ರಿ ಪ್ರತಿಭಟನೆ ನಡೆದಿದೆ.

ಪಟ್ಟಣದ ದೇಶಪಾಂಡೆ ಆಶ್ರಯ ನಗರ ನಿವಾಸಿ, ಅನ್ಯಕೊಮಿನ ಅಪ್ರಾಪ್ತ ವಯಸ್ಸಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಈ ದುಷ್ಕೃತ್ಯ ನಡೆಸಿದ್ದಾನೆ ಎಂದು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಶುಕ್ರವಾರ ತಡರಾತ್ರಿ ಬೆಳಕಿಗೆ ಬರುತ್ತಿದ್ದಂತೆ ಪೋಲಿಸ್‌ ಠಾಣೆ ಎದುರು ಹಾಗೂ ಶಿವಾಜಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್‌, ಭಜಂಗದಳ, ಶಿವಸೇನೆ, ಶಿವಪ್ರತಿಷ್ಠಾನ, ಜೀಜಾಮಾತಾ ಮಹಿಳಾ ಸಂಘಟನೆ, ಮರಾಠಾ ಸಂಘಟನೆಗಳವರು ಜಮಾಯಿಸಿ ಕೃತ್ಯ ಖಂಡಿಸಿ ಯುವಕನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮಧ್ಯರಾತ್ರಿವರೆಗೆ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ ಮಾತನಾಡಿ, ಅನ್ಯಕೊಮಿನ ಯುವಕರಿಂದ ಮೇಲಿಂದ ಮೇಲೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಕದಡಲೆಂದೇ ಈ ರೀತಿ ಕೃತ್ಯ ಎಸಗಲಾಗುತ್ತಿದೆ ಎಂಬ ಸಂಶಯ ಮೂಡುತ್ತಿದೆ ಹಾಗೂ ಎಲ್ಲ ಸಮಯದಲ್ಲಿ ಹಿಂದೂಗಳ ಸಹನೆ ಪರೀಕ್ಷಿಸಲಾಗುತ್ತಿದ್ದು, ಇನ್ನೂ ಮುಂದೆ ಇಂತಹ ಘಟನೆ ನಡೆದರೆ ಹಿಂದೂಗಳು ಠಾಣೆಗೆ ಬರುವುದಿಲ್ಲ, ಬದಲಾಗಿ ಕೃತ್ಯ ಎಸಗಿದವರ ಮನೆಗೆ ತೆರಳಬೇಕಾಗುತ್ತದೆ.

ಆ ಸಂದರ್ಭದಲ್ಲಿ ಏನಾದರೂ ಅನಾಹುತಗಳಾದರೆ ಅದಕ್ಕೆ ಸಮಾಜ ಹಾಗೂ ನಾವು ಜವಾಬ್ದಾರರಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದರು. ಪ್ರತಿಭಟನಾಕಾರರ ಮನವೊಲಿಸುವುದೇ ಪೊಲೀಸರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿತು. ಬಳಿಕ ಮಾಜಿ ಶಾಸಕರು ಶನಿವಾರ ಸಾಯಂಕಾಲದ ಒಳಗೆ ಯುವಕನ ಬಂಧನವಾಗದಿದ್ದರೆ ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು ಹಾಗೂ ಪೋಲಿಸರು ಕೂಡ ಬಂಧಿಸುವ ಭರಸವೆ ನೀಡಿದ್ದರಿಂದ ಪ್ರತಿಭಟನಾಕಾರರು ಪ್ರತಿಭಟನೆ ಸ್ಥಗಿತಗೊಳಿಸಿದರು.

ಪ್ರಮುಖರಾದ ಚೂಡಪ್ಪ ಬೋಬಾಟಿ, ವಿಲಾಸ ಯಡವಿ, ಸಂತೋಷ ಘಟಕಾಂಬಳೆ, ಶಾಂತಾ ಹಿರೆಕರ, ಚಂದ್ರಕಾಂತ ಕಮ್ಮಾರ, ಮಂಗಲಾ ಕಶೀಲಕರ, ತಾನಾಜಿ ಪಟ್ಟೇಕರ, ಸರ್ವೆàಶ ಖಾಂದೊಳಕರ, ಪ್ರವೀಣ ನಾಯ್ಕೋಜಿ, ರಾಕೇಶ ವಾಣಿ, ರಾಘವೇಂದ್ರ ಆನೆಗುಂದಿ, ನಾಗರಾಜ ಪಾಟೀಲ್‌, ವಿಜಯ ಬೋಬಾಟಿ, ಗಣಪತಿ ಕುಂದೆಕರ ಮೊದಲಾದವರು ಇದ್ದರು.

ಅಪ್ರಾಪ್ತ ಆಪಾದಿತ ಪೊಲೀಸ್‌ ವಶಕ್ಕೆ

ಹಳಿಯಾಳ: ಅನ್ಯಕೋಮಿನ ಯುವಕನಿಂದ ಛತ್ರಪತಿ ಶಿವಾಜಿ ಚಿತ್ರವನ್ನು ಆಶ್ಲೀಲವಾಗಿ ಪೋಸ್ಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಅಪ್ರಾಪ್ತ ವಯಸ್ಸಿನ ಆಪಾದಿತನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಪಟ್ಟಣದ ದೇಶಪಾಂಡೆ ಆಶ್ರಯ ನಗರ ನಿವಾಸಿ ಯುವಕನನ್ನು ಮಹಾರಾಷ್ಟ್ರದಿಂದ ವಶಕ್ಕೆ ಪಡೆದಿರುವ ಹಳಿಯಾಳ ಪೊಲೀಸರು, ವಿಚಾರಣೆ ನಡೆಸುವ ವೇಳೆ ತಾನು ಮೊಬೈಲ್‌ ರಿಪೇರಿಗೆ ಕೊಟ್ಟಿದ್ದೆ, ಪೋಸ್ಟ್‌ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಯುವಕನ ಹೇಳಿಕೆಯ ನೈಜತೆ ಸಾಬೀತು ಪಡಿಸಲು ಎಫ್‌ಎಸ್‌ ಎಲ್‌ ರಿಪೋರ್ಟ್‌ ಮೂಲಕ ಯುಆರ್‌ಎಲ್‌ ಪರೀಕ್ಷೆಗೆ ಪೊಲೀಸರು ಕಳುಹಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಸಿಂಹಪಾಲು ಮರಾಠಾ ಸಮುದಾಯವನ್ನು ಹೊಂದಿರುವ ಹಳಿಯಾಳದಲ್ಲಿ ಶಿವಾಜಿ ಮಹಾರಾಜರು ಆರಾಧ್ಯ ದೈವವೇ ಸರಿ. ಇಂತಹ ಕ್ಷೇತ್ರದಲ್ಲಿ ಅನ್ಯಕೋಮಿನ ಯುವಕರಿಂದ ಮೇಲಿಂದ ಮೇಲೆ ಇಂತಹ ಘಟನೆ ನಡೆಯುತ್ತಿರುವುದು ಹಿಂದೂಗಳನ್ನು ಕೆರಳಿಸಿದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.