ಅರಣ್ಯ ಹೋರಾಟಗಾರರ ಪ್ರತಿಭಟನೆ


Team Udayavani, Feb 21, 2020, 5:26 PM IST

uk-tdy-1

ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ತಾಲೂಕಿನ ರಾಗಿಹೊಸಳ್ಳಿಯಲ್ಲಿ ಗುರುವಾರ ಪ್ರತಿಭಟನೆ, ರಸ್ತೆ ತಡೆ ನಡೆಯಿತು.

ನೂರಾರು ಪ್ರತಿಭಟನಾಕಾರರು ಸಭೆ ನಡೆಸಿ ನಂತರ ರಸ್ತೆ ಮೇಲೆ ಕುಳಿತು ಸರಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಸಹಾಯಕ ಆಯುಕ್ತರು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಸ್ಥಳಕ್ಕಾಗಮಿಸಿದ ತಹಶೀಲ್ದಾರ್‌ಗೆ ಮನವಿ ನೀಡಲಾಯಿತು. ಸಹಾಯಕ ಆಯುಕ್ತರ ನೇತೃತ್ವದಲ್ಲಿ ಫೆ.27 ರಂದು ಸ್ಥಳೀಯವಾಗಿ ಸಭೆ ನಡೆಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಶರಾವತಿ ಅಭಯಾರಣ್ಯಕ್ಕೆ ಸೇರಿಸುವ ವಿಷಯವಾಗಿ ಸರಕಾರ ಅಧಿಸೂಚನೆ ಹೊರಡಿಸುವಾಗ ಜನರ ಅಭಿಪ್ರಾಯ ಸಂಗ್ರಹಿಸಿಲ್ಲ, ಜನರನ್ನು ಕತ್ತಲೆಯಲ್ಲಿ ಇಟ್ಟು ಆದೇಶ ಮಾಡಲಾಗಿದೆ. ಇದರಿಂದ ಅರಣ್ಯವಾಸಿಗಳು ಅತಂತ್ರರಾಗುವ ಆತಂಕವಿದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಕ್ಷೇಪಿಸಿದರು.

ಅಭಯಾರಣ್ಯ ವಿಸ್ತರಣೆ ಕುರಿತು ಜನಜಾಗೃತಿ ಮೂಡಿಸಿರಲಿಲ್ಲ. ಅರಣ್ಯ ವ್ಯಾಪ್ತಿಯಲ್ಲಿ ವಾಸ್ತವ್ಯ ಹಾಗೂ ಸಾಗುವಳಿಗೆ ಅರಣ್ಯಭೂಮಿ ಹಕ್ಕು ಪಡೆಯಲು ಅರ್ಜಿಗಳು ವಿಚಾರಣೆ ಹಂತದಲ್ಲಿರುವಾಗ ಈ ಅಧಿಸೂಚನೆಯಿಂದ ಅರಣ್ಯ ಸಾಗುವಳಿದಾರರ ಹಕ್ಕು ಕುಂಠಿತವಾಗುತ್ತದೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಂದಾಯ ಭೂಮಿ ಸಾಗುವಳಿದಾರರಿಗೆ ಸ್ವತಂತ್ರತೆ ಮತ್ತು ಸ್ವಾವಲಂಬನೆ ಜೀವನಕ್ಕೆ ಆತಂಕ ಉಂಟಾಗುತ್ತದೆ ಎಂದು ಮನವಿಯಲ್ಲಿ ದೂರಲಾಗಿದೆ.

ರಾಜ್ಯ ಸರಕಾರ ಶಿವಮೊಗ್ಗ ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ ಹೆಚ್ಚುವರಿ ಅರಣ್ಯ ಪ್ರದೇಶ ಸೇರಿಸಿ 2019 ಜುಲೈನಲ್ಲಿ ಆದೇಶ ಹೊರಡಿಸಿದೆ. 1978ರಲ್ಲಿ ಅಸ್ತಿತ್ವಕ್ಕೆ ಬಂದ ಶರಾವತಿ ವನ್ಯಜೀವಿ ಅಭಯಾರಣ್ಯವು 43,123 ಹೆಕ್ಟೇರ್‌ ಪ್ರದೇಶದಲ್ಲಿ ವ್ಯಾಪಿಸಿದ್ದು ಈಗ ಹೆಚ್ಚುವರು ಪ್ರದೇಶ ಸೇರಿಸಲ್ಪಟ್ಟು ಹೊರಡಿಸಿದ ಅಧಿಸೂಚನೆಯಲ್ಲಿ ಜಿಲ್ಲೆಯ ಅಘನಾಶಿನಿ ಸಂರಕ್ಷಣಾ ಮೀಸಲು ಪ್ರದೇಶ 29,893 ಹೆಕ್ಟೇರ್‌ ಪ್ರದೇಶಕ್ಕೆ ಹೆಚ್ಚುವರಿಯಾಗಿ ಶಿವಮೊಗ್ಗ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಸುಮಾರು 20,000 ಹೆಕ್ಟೇರ್‌ ಪ್ರದೇಶ ಮೀಸಲು ಅರಣ್ಯವನ್ನು ಶರಾವತಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಗೆ ತರಲಾಗಿದೆ. ಹೊಸ ಅಧಿಸೂಚನೆಯಂತೆ ಶರಾವತಿ ಅಭಯಾರಣ್ಯ ಒಟ್ಟು 93,016 ಹೆಕ್ಟೇರ್‌ ಪ್ರದೇಶ ಹೊಂದುತ್ತದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಬಂಡಲ ಗ್ರಾಪಂ ಅಧ್ಯಕ್ಷ ದೇವರಾಜ ಮರಾಠಿ, ಯುವ ಪ್ರಮುಖರಾದ ಪ್ರವೀಣ ಗೌಡ, ಬಾಬು ಯಂಕಾ ಮರಾಠಿ, ರಾಜು ನಾಯ್ಕ, ಎಂ.ಎನ್‌. ಹೆಗಡೆ, ಬಾಬು ಮರಾಠಿ, ಸರೋಜಿನಿ ಭಟ್ಟ, ಸಂತೋಷ ಗೌಡ, ಕೃಷ್ಣ ಮರಾಠಿ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.