ಸರ್ಕಾರಿ ಔಷಧ ವಿತರಕರ ಪ್ರತಿಭಟನೆ


Team Udayavani, Jan 3, 2020, 5:46 PM IST

uk-tdy-1

ಶಿರಸಿ: ರಾಜ್ಯ ಸರ್ಕಾರಿ ಫಾರ್ಮಸಿಸ್ಟ್‌ ಸಂಘವು ನ್ಯಾಯಯುತ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ರಾಜ್ಯಾದ್ಯಂತ ಜ.2ರಿಂದ 5 ಹಂತಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಶಿರಸಿಲಿ ಕೂಡ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಔಷಧ ಉಗ್ರಾಣದಿಂದ ಕಾಲ್ನಡಿಗೆ ಮೂಲಕ ಆಗಮಿಸಿ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ, ಅಖೀಲ ಭಾರತೀಯ ತಾಂತ್ರಿಕ ಪರಿಷತ್ತಿನಿಂದ 1987 ರಲ್ಲಿ ಫಾರ್ಮಸಿಯನ್ನು ತಾಂತ್ರಿಕ ವಿದ್ಯಾರ್ಹತೆಯೆಂದು ಪರಿಗಣಿಸಿ ಆದೇಶಿಸಿರುವುದರಿಂದ ಡಿಪ್ಲೋಮಾ ವೇತನ ಭತ್ಯೆ ನೀಡುವುದು, ಕೇಂದ್ರ ಹಾಗೂ ನೆರೆ ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಾರ್ಮಸಿಸ್ಟ್‌ಗಳಿಗಿಂತ ಕಡಿಮೆ ವೇತನ ಹಾಗೂ ಭತ್ಯೆಯನ್ನು 1982 ರಿಂದ ಪಡೆಯುತ್ತಲಿದ್ದು ಈ ಅನ್ಯಾಯವನ್ನು ಸರಿಪಡಿಸುವುದು, ಸೇವಾ ಅವಧಿಯಲ್ಲಿ ಒಮ್ಮೆ ಮಾತ್ರ 10 ವರ್ಷಗಳ ಕಾಲಮಿತಿ ವೇತನ ಮುಂಬಡ್ತಿ ಪಡೆದ ನಂತರ ಯಾವುದೇ ವೇತನ ಶ್ರೇಣಿ ಬದಲಾವಣೆ ಆಗದೆ ಇರುವುದರಿಂದ ಕರ್ನಾಟಕ ಆಡಳಿತ ನ್ಯಾಯಮಂಡಳಿ ತೀರ್ಪಿನಂತೆ ವೇತನ ಜಾರಿ ಮಾಡುವುದು, ಜನಸಂಖ್ಯೆ ಆಧಾರದ ಮೇಲೆ ಹಾಗೂ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯದ ಮೇರೆಗೆ ಹೆಚ್ಚಿನ ಹುದ್ದೆ ಸೃಜಿಸುವುದು, 1965 ರ ವೃಂದ ಮತ್ತು ನೇಮಕಾತಿಯನ್ನು ಈಗೀರುವ ವಿದ್ಯಾರ್ಹತೆಗೆ ಅನುಗುಣವಾಗಿ ಬದಲಾಯಿಸಿ ಬಡ್ತಿ ಅವಕಾಶ ಹೆಚ್ಚಿಸುವುದು, ಸೇವಾ ನಿರತ ಫಾರ್ಮಸಿಸ್ಟ್‌ಗಳಿಗೆ ಉನ್ನತ ವ್ಯಾಸಂಗಕ್ಕೆ ಸೀಟು ಕಾಯ್ದಿರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು, ಕಾಲಕಾಲಕ್ಕೆ ಮಾರುಕಟ್ಟೆಗೆ ಬಿಡುಗಡೆಯಾಗುವ ಹೊಸ ಔಷಧಿಗಳ ಕುರಿತು ತಿಳಿದುಕೊಳ್ಳಲು ಪುನರ್‌ ಮನನ ಕಾರ್ಯಕ್ರಮಗಳನ್ನು ಪ್ರಾರಂಭಿಸುವುದು ಎಂದು ಮನವಿ ಮಾಡಲಾಯಿತು.

ಔಷಧಿಗಳ ಸಾಮರ್ಥ್ಯ ಕಾಪಾಡಿಕೊಳ್ಳಲು ಎಲ್ಲಾ ಆಸ್ಪತ್ರೆಗಳಲ್ಲಿಯೂ ವೈಜ್ಞಾನಿಕವಾಗಿ ಔಷಧಿ ಉಗ್ರಾಣ ಅಭಿವೃದ್ಧಿಪಡಿಸುವುದು, ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಔಷಧಿಗಳ ಮಾಹಿತಿ ಕೇಂದ್ರ ಮತ್ತು ಸಮಾಲೋಚನಾ ಕೇಂದ್ರಗಳನ್ನು ಪ್ರಾರಂಭಿಸುವುದು, ಪದವಿಧರ ಫಾರ್ಮಸಿಸ್ಟ್‌ ಹುದ್ದೆಗೆ ಔಷಧ ನಿಯಂತ್ರಣ ಇಲಾಖೆಯಿಂದ ಅನ್ಯಪರ ಸೇವೆಯ ಮೇರೆಗೆ ನಿಯೋಜಿಸುತ್ತಿರುವ ಕಿರಿಯ ವೈಜ್ಞಾನಿಕ ಅಧಿಕಾರಿಗಳ ನೇಮಕ ನಿಲ್ಲಿಸಿ ಇಲಾಖೆಯಲ್ಲಿ ಪದವಿ ಪಡೆದ ಹಿರಿಯ ಫಾರ್ಮಸಿಸ್ಟ್‌ರಿಗೆ ಪದೋನ್ನತಿ ನೀಡುವುದು, ಫಾರ್ಮಸಿ ಕಾಯ್ದೆಯಂತೆ ಫಾರ್ಮಸಿಸ್ಟ್‌ರಲ್ಲದವರು ಔಷಧಿಗಳನ್ನು ವಿತರಿಸಲು ಅವಕಾಶ ಇಲ್ಲದೇ ಇರುವುದರಿಂದ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನನ್ನು ಭರ್ತಿ ಮಾಡುವುದು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಫಾರ್ಮಕೋ ವಿಜಿಲೆನ್ಸ್‌ ಪ್ರಾರಂಭಿಸುವುದು, ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಫಾರ್ಮಸಿಸ್ಟ್‌ರಿಗೆ ಕನಿಷ್ಠ ಮೂಲ ವೇತನ ನೀಡುವುದು ಮತ್ತು ಖಾಯಂ ಮಾಡುವುದು, ಆಹಾರ ಸುರಕ್ಷತಾ ಇಲಾಖೆಯಲ್ಲಿ ಬೇರೆ ರಾಜ್ಯಗಳಲ್ಲಿರುವಂತೆ ಫಾರ್ಮಸಿಸ್ಟ್‌ಗಳನ್ನು ನೇಮಕಾತಿ ಮಾಡುವುದು. ಮುಂತಾದ ಬೇಡಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಎಸ್‌.ವಿ. ಭಟ್‌, ಪ್ರಧಾನ ಕಾರ್ಯದರ್ಶಿ ಅಮಿತ ಆಮಠೆ, ಕೋಶಾಧ್ಯಕ್ಷ ಶೈಲೇಶ ಹೆಗಡೆ ಹಾಗೂ ಸಂಘದ ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿಮನವಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.