ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸಿ: ಮನವಿ ಸಲ್ಲಿಕೆ
Team Udayavani, Mar 23, 2022, 6:30 PM IST
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸುವಂತೆ ಆಗ್ರಹಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯ ಮೂಲಕ ಶಿರಾಲಿಯ ವೆಂಕಟಾಪುರದ ಶ್ರೀನಿವಾಸ ಸಭಾಗ್ರಹದಿಂದ ತಾಲೂಕಾ ಆಡಳಿತ ಸೌಧಕ್ಕೆ ಆಗಮಿಸಿ ಹಾಜರಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯಲ್ಲಿ ಸರಕಾರಿ ಆದೇಶ ದಿನಾಂಕ ನವೆಂಬರ್ 4, 2019ನೇದರಲ್ಲಿ ಕರ್ನಾಟಕದಲ್ಲಿ ವಾಸಿಸುವ ಮೊಗೇರ ಜಾತಿಯ ಜನರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಸುತ್ತೋಲೆಯನ್ನು ಹೊರಡಿಸಿದರೂ ಸಹ ಜಿಲ್ಲಾಧಿಕಾರಿಗಳು ಕಾರವಾರವರ ಕಚೇರಿಯಿಂದ ಅಧೀನ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡದೇ ಇರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಸರಕಾರ 2018 ಮೇ 31ರ ಸುತ್ತೋಲೆಯನ್ನು ಹಿಂಪಡೆದು ನವೆಂಬರ್ 4, 2019ರಲ್ಲಿ ಹೊಸದಾಗಿ ಆದೇಶ ಹೊರಡಿಸಿರುವುದರಿಂದ ತಹಸೀಲ್ದಾರ್ ಅವರಿಗೆ ಸೂಕ್ತ ನಿರ್ದೇಶನ ನೀಡಿ ಮೊಗೇರ ಜಾತಿಯವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಬೇಡಿಕೆಗಳಾದ ಉತ್ತರ ಕನ್ನಡದಲ್ಲಿ ವಾಸಿಸುವ ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು, ಕೇಂದ್ರ ಸರಕಾರದ ಪರಿಶಿಷ್ಟ ಜಾತಿಯ ಪಟ್ಟಿಯನ್ನು ಹೊರತುಪಡಿಸಿ, ಇನ್ನುಳಿದ ಹಿಂದುಳಿದ ವರ್ಗ ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗದ ಪಟ್ಟಿಯಿಂದ ಮೊಗೇರ ಜಾತಿಯನ್ನು ಕೈಬಿಡಬೇಕು. ಬಾಕಿರುವ ಸಿಂಧುತ್ವ ಪ್ರಮಾಣ ಪತ್ರವನ್ನು ಕೂಡಲೇ ವಿತರಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಎಂದು ತಮ್ಮ ಸಮುದಾಯದವರ ಮೇಲೆ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂದೂ ಆಗ್ರಹಿಸಲಾಗಿದೆ.
ಸರಕಾರದ ಆದೇಶದ ಪ್ರಕಾರ ತಮ್ಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೊಡುವುದನ್ನು ಪುನ: ಆರಂಭಿಸುವ ತನಕ ಸಮುದಾಯದ ಜನರು ಮಾ.23ರಿಂದ ತಾಲೂಕಿನ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ, ರಾಸ್ತಾರೋಖೊ ಇತ್ಯಾದಿಗಳನ್ನು ನಡೆಸುತ್ತೇವೆ ಎಂದೂ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ