Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ
Team Udayavani, May 7, 2024, 7:26 PM IST
ದಾಂಡೇಲಿ : ರಾಷ್ಟ್ರದ ಮಹೋನ್ನತ ಚುನಾವಣೆಯಾಗಿರುವ ಲೋಕಸಭಾ ಚುನಾವಣೆಯ ಮತದಾನದ ದಿನದಂದೇ ಅಂದರೆ ಇಂದು ಮಂಗಳವಾರ ದಾಂಡೇಲಿ ನಗರ ಠಾಣೆಯ ಪಿಎಸ್ಐ ಅವರ ಸರಕಾರಿ ವಾಹನ ಗ್ಯಾರೇಜ್ ಸೇರಿಕೊಂಡ ಘಟನೆ ನಡೆದಿದೆ.
ಮೊದಲೇ ಡಕೋಟಾ ಎಕ್ಸಪ್ರೆಸ್ ಎಂಬಂತಿರುವ ವಾಹನವನ್ನು ದಾಂಡೇಲಿ ನಗರ ಠಾಣೆಯ ಪಿಎಸ್ಐ ಅವರಿಗೆ ನೀಡಲಾಗಿದೆ. ಈ ವಾಹನ ಆಟಕ್ಕುಂಟು ಲೆಕ್ಕಕ್ಕಿಲ್ಲದ ರೀತಿಯಲ್ಲಿ ಇದ್ದು, ತುರ್ತು ಸಮಯದಲ್ಲೇ ಕೈ ಕೊಡುವ ಮೂಲಕ ಇಲಾಖೆಯ ಘನತೆಯನ್ನು ಕುಗ್ಗಿಸುತ್ತಿರುವುದು ಸಾಮಾನ್ಯವಾಗಿದೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವ ವ್ಯಾಪಿ ಗಮನ ಸೆಳೆದಿರುವ ನಗರ ದಾಂಡೇಲಿ. ಅಂದ ಹಾಗೆ ದಾಂಡೇಲಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಅವರ ವಾಹನ ಮಾತ್ರ ಡಕೋಟ ಎಕ್ಸಪ್ರೆಸ್ ನಂತಿರುವುದು ಇಲಾಖೆಯ ಗೌರವಕ್ಕೆ ಚ್ಯುತಿ ಬಂದಂತಾಗಿದೆ. ಇಂದು ಮಂಗಳವಾರ ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಅತಿ ಜರೂರು ಕೆಲಸದ ನಿಮಿತ್ತ, ಹಳೆ ದಾಂಡೇಲಿಗೆ ಹೋಗುತ್ತಿರುವ ಸಂದರ್ಭದಲ್ಲಿ ವಾಹನ ನಡು ರಸ್ತೆಯಲ್ಲಿ ಕೆಟ್ಟು ನಿಂತಿದೆ. ತಕ್ಷಣವೇ ನಗರದ ಪಟೇಲ್ ವೃತ್ತದ ಸಮೀಪದಲ್ಲಿರುವ ಗ್ಯಾರೇಜಿನಲ್ಲಿ ದುರಸ್ತಿಗಾಗಿ ವಾಹನವನ್ನು ನಿಲ್ಲಿಸಲಾಗಿದೆ. ಸಮಸ್ಯೆಗಳಿಗೆ ತಡವರಿಯದೆ ಸ್ಪಂದಿಸುವ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗಮನ ಸೆಳೆದಿರುವ ವಿಷ್ಣುವರ್ಧನ್ ಅವರು ದಾಂಡೇಲಿ ನಗರ ಠಾಣೆಯ ಪಿಎಸ್ಐ ಅವರಿಗೆ ಸುಸಜ್ಜಿತ ವಾಹನವನ್ನು ಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!
Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ