ಅಕ್ರಮ ಚಟುವಟಿಕೆಗಳ ನಿಗ್ರಹಕ್ಕೆ ಸಾರ್ವಜನಿಕರ ಆಗ್ರಹ

ಪೊಲೀಸ್‌ ಠಾಣೆ ವ್ಯಾಪ್ತಿಯ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ ;ಕಾನೂನು ದುರ್ಬಳಕೆ ಕುರಿತು ಜಾಗೃತಿ ಅಗತ್ಯ

Team Udayavani, Aug 1, 2022, 4:37 PM IST

19

ಹಳಿಯಾಳ: ಇತ್ತೀಚಿನ ದಿನಗಳಲ್ಲಿ ಅಕ್ರಮ ಚಟುವಟಿಕೆಗಳಾದ ಒಸಿ, ಜುಜಾಟ ಹಾಗೂ ಎಲ್ಲೆಂದರಲ್ಲಿ ದೊರೆಯುತ್ತಿರುವ ಅಕ್ರಮ ಮದ್ಯದಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಆದ್ದರಿಂದ ಇವುಗಳನ್ನು ನಿಯಂತ್ರಿಸಲು ಪೊಲೀಸ್‌ ಇಲಾಖೆ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ರವಿವಾರ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ನಡೆದ ಹಳಿಯಾಳ ಪೊಲೀಸ್‌ ಠಾಣ ವ್ಯಾಪ್ತಿಯ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್ಪಿ ಡಾ| ಸುಮನ ಪೆನ್ನೇಕರ್‌ ಬಳಿ ಸಾರ್ವಜನಿಕರು ಮೌಖೀಕವಾಗಿ ದೂರು ಸಲ್ಲಿಸಿ ಅನ ಧಿಕೃತ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ವಿನಂತಿಸಿದರು.

ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಜುಜಾಟ ಹೆಚ್ಚಾಗಿದೆ. ಅಲ್ಲದೆ ಒಸಿ ಹಾಗೂ ಅಕ್ರಮ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಹಲವು ಕುಟುಂಬಗಳು ಬೀದಿಗೆ ಬರುತ್ತವೆ ಹಾಗೂ ಯುವಜನತೆ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಪಕ್ಕದ ಬೆಳಗಾವಿ, ಖಾನಾಪುರ ಹಾಗೂ ರಾಮನಗರದಿಂದ ಅಕ್ರಮ ಹಾಗೂ ಅನಧಿಕೃತವಾಗಿ ಮರಳು ಹಾಗೂ ಜಲ್ಲಿಕಲ್ಲುಗಳ ಸರಬರಾಜು ಪ್ರತಿನಿತ್ಯ ಜರುಗುತ್ತಿದೆ. ಇದನ್ನು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಖಾನಾಪುರ – ತಾಳಗುಪ್ಪಾ ರಾಜ್ಯ ಹೆದ್ದಾರಿವು ಪಟ್ಟಣದಲ್ಲಿ ಹಾದು ಹೋಗಿರುವುದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ರಾಜ್ಯ ಹೆದ್ದಾರಿ ಅಕ್ಕಪಕ್ಕದಲ್ಲಿಯೇ ಶಾಲಾ ಕಾಲೇಜುಗಳು ಇರುವುದರಿಂದ ಬೆಳಗ್ಗೆ ಹಾಗೂ ಸಾಯಂಕಾಲ ಮಕ್ಕಳು ತೆರಳಲು ಹರಸಾಹಸ ಪಡುವಂತಾಗಿದೆ.

ಅಳವಡಿಸಿರುವ ಸಿಸಿಟಿವಿಗಳು ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಹಾಗೂ ಅವುಗಳನ್ನು ಭೇದಿಸುವಲ್ಲಿ ಹಿನ್ನಡೆ ಉಂಟಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಸ್ಥಳೀಯ ಸಂಘ-ಸಂಸ್ಥೆಗಳು ಅವುಗಳನ್ನು ನಿರ್ವಹಣೆ ಮಾಡುವಂತೆ ಸೂಚಿಸಬೇಕು ಎಂಬ ಆಗ್ರಹಗಳು ಕೇಳಿಬಂದವು.

ಸಾರ್ವಜನಿಕರಿಗೆ ಕಾನೂನುಗಳ ಕುರಿತು ಅರಿವು ಮೂಡಿಸಿ ಅಪರಾಧ ಪ್ರಕರಣಗಳು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ವಾರ್ಡ್‌ ಹಾಗೂ ಗ್ರಾಪಂ ಸಭೆಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ. ದಲಿತ ದೌರ್ಜನ್ಯ ಕಾಯ್ದೆ ಕುರಿತು ಜನಸಾಮಾನ್ಯರಲ್ಲಿ ಉಂಟಾಗಿರುವ ಅನುಮಾನಗಳು ಹಾಗೂ ಕಾಯ್ದೆ ದುರ್ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂಬ ಸಲಹೆಗಳನ್ನು ಸಾರ್ವಜನಿಕರು ನೀಡಿದರು.

ರಾಜಕಾರಣಿಗಳ ಒತ್ತಡಕ್ಕೆ ಮಣಿಯಿದೆ ಮುಕ್ತವಾಗಿ ಪೊಲೀಸರು ಕೆಲಸ ನಿರ್ವಹಿಸಲಿ, ಡಿಜೆ ಬಳಕೆ ನಿಷೇಧ, ಪ್ಯಾರಿ ಸಕ್ಕರೆ ಕಾರ್ಖಾನೆಯಿಂದ ಉಂಟಾಗುತ್ತಿರುವ ತೊಂದರೆಗಳು, ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಮತ್ತು ಆರೋಪಿಗಳಿಗೆ ಪ್ರತ್ಯೇಕ ಕೊಠಡಿಗಳು, ಉದ್ಯಾನವನದಲ್ಲಿ ಯುವ ಪ್ರೇಮಿಗಳ ಕಾಟ, ಕುಡುಕರು ಹಾಗೂ ಪೋಲಿ ಹುಡುಗರ ಹಾವಳಿಗೆ ತಡೆ, ಕೋಮು ದ್ವೇಷ ಹರಡುದಂತೆ ಎಚ್ಚರಿಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಸಲಹೆ ಸಾರ್ವಜನಿಕರಿಂದ ವ್ಯಕ್ತವಾದವು.

ಸಾರ್ವಜನಿಕರಿಂದ ಕೇಳಿ ಬಂದ ಸಮಸ್ಯೆಗಳು ಹಾಗೂ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದ ಎಸ್ಪಿ ಡಾ| ಸುಮನ ಪೆನ್ನೇಕರ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಅಧಿಕಾರಿಗಳಿಗೆ ಸೂಚನೆ ನೀಡಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರಮಿಸುತ್ತೇವೆ ಎಂದರು.

ಕಾನೂನು ಬಾಹಿರ ಚಟುವಟಿಕೆಗಳಿದ್ದರೆ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಿ ಮಾಹಿತಿ ನೀಡಿ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ತಿಂಗಳೊಳಗೆ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಣಕ್ಕೆ ತರಲಿದ್ದಾರೆ ಎಂದು ಭರವಸೆ ನೀಡಿದರು.

ಡಿವೈಎಸ್ಪಿ ಕೆ.ಎಲ್‌. ಗಣೇಶ, ದಾಂಡೇಲಿ ಸಿಪಿಐ ಬಿ.ಎಸ್‌. ಲೋಕಾಪುರ, ಜೋಯಿಡಾ ಸಿಪಿಐ ದಯಾನಂದ ಶೆಗುಣಸಿ, ಪಿಎಸ್‌ ಐಗಳಾದ ವಿನೋದ ರೆಡ್ಡಿ, ಉಮಾ ಬಸರಕೋಡ ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.