15ರಂದು ಪುಣ್ಯಕೋಟಿ ಗೋಸ್ವರ್ಗ ಲೋಕಾರ್ಪಣೆ

ನೆಲ ಅಂತಸ್ತಿನಲ್ಲಿ ಆಚಾರ್ಯ ಭವನಮ್‌ ನಿರ್ಮಾಣ | ಅನುಕೂಲಕ್ಕೆ ತಕ್ಕಂತೆ 150 ಗೋವುಗಳಿಗೆ ಸ್ಥಳಾವಕಾಶ

Team Udayavani, Feb 7, 2021, 6:55 PM IST

Bhatkal

ಭಟ್ಕಳ: ಗುರುಭಕ್ತಿ ಹಾಗೂ ಗುರುಗಳ ಪ್ರೇರಣೆಯಿಂದ ನಿರ್ಮಾಣಗೊಂಡ ಆಚಾರ್ಯ ಭವನಮ್‌ ಮತ್ತು ಪುಣ್ಯಕೋಟಿ ಗೋ ಸ್ವರ್ಗ ಕಟ್ಟಡ ಫೆ.15ರಂದು ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಲೋಕಾರ್ಪಣಗೊಳ್ಳಲಿದೆ.

ಜೀವನದಲ್ಲಿ ಏನಾದರೊಂದು ಸಾಧನೆ ಮಾಡಬೇಕು, ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕು ಎನ್ನುವ ಹಂಬಲದಲ್ಲಿರುವ ಕೃಷ್ಣಾನಂದ ಶಿವರಾಮ ಭಟ್ಟ ಬಲ್ಸೆ ಇವರು ಶ್ರೀಗಳ ಪ್ರೇರಣೆಯಿಂದ ಹಾಗೂ ಅನನ್ಯ ಗುರು ಭಕ್ತಿಯಿಂದ ಮುರ್ಡೇಶ್ವರ ಸಮೀಪದ ಬೈಲೂರು ನೀರಗದ್ದೆಯಲ್ಲಿ ನಿರ್ಮಾಣ ಮಾಡಿದ ಆಚಾರ್ಯ ಭವನಮ್‌ ಅತ್ಯಂತ ಸುಂದರವಾಗಿದ್ದು, ಧಾರ್ಮಿಕ ಹಾಗೂ ಸಮಾಜದ ಕಾರ್ಯಕ್ಕೆ ಮೀಸಲಿರಲಿದೆ ಎನ್ನುವ ಆವರ ಮಾತು ಎಲ್ಲರಿಗೂ ಮಾದರಿಯಾಗಿದೆ.

ಅತ್ಯಂತ ವಿನೂತನ ಶೈಲಿಯಲ್ಲಿ ವಾಸ್ತು ಪ್ರಕಾರ ಕಟ್ಟಡ ನಿರ್ಮಿಸಿದ್ದು ನೆಲ ಅಂತಸ್ತಿನಲ್ಲಿ ಆಚಾರ್ಯ ಭವನಮ್‌ ನಿರ್ಮಾಣಗೊಂಡಿದೆ. ಮೊದಲನೇ ಮಹಡಿಯಲ್ಲಿ ವಿಶಾಲವಾದ ಜಾಗಾ ಇದ್ದು ಮೂರು ಕೊಠಡಿಗಳನ್ನು ನಿರ್ಮಿಸಲಾಗಿದೆ. ನೆಲ ಮಹಡಿಯ ಮುಖ್ಯ ದ್ವಾರದಲ್ಲಿಯೇ ಕಾಣುವಂತೆ ಮಧ್ಯದಲ್ಲಿ ಶಂಕರಾಚಾರ್ಯರ ಮೂರ್ತಿ ಪ್ರತಿಪಷ್ಠಾಪಿಸಲಾಗಿದೆ.

ಒಂದು ದಿಕ್ಕಿನಲ್ಲಿ ರಾಘವೇಶ್ವರ ಶ್ರೀಗಳ ಫೋಟೋ, ಇನ್ನೊಂದು ದಿಕ್ಕಿನಲ್ಲಿ ರಾಘವೇಂದ್ರ ಭಾರತೀ ಶ್ರೀಗಳ ಫೋಟೋ ಮತ್ತೂಂದು ದಿಕ್ಕಿನಲ್ಲಿ ರಾಮಚಂದ್ರ ಭಾರತೀ ಶ್ರೀಗಳ ಫೋಟೊ ಹಾಗೂ ಇನ್ನೊಂದು ದಿಕ್ಕಿನಲ್ಲಿ ಸಭಾ ಭವನ ಇದೆ. ನಾಲ್ಕೂ ದಿಕ್ಕಿನಲ್ಲಿ ಶಂಕರಾಚಾರ್ಯರು ಬರೆದ ಭಜಗೋವಿಂದಂನ 31 ಶ್ಲೋಕಗಳನ್ನು ಸುಂದರವಾಗಿ ಬರೆಯಲಾಗಿದೆ.

ಶ್ರೀಗಳು ಬಂದಾಗ ತಂಗಲು ಕೊಠಡಿ, ಶೌಚಾಲಯ, ವಿಶಾಲವಾದ ಅಡುಗೆ ಮನೆ, ಹತ್ತಾರು ಕೊಠಡಿಗಳು. ಎಲ್ಲಾ ಕೊಠಡಿಗಳ ಬಾಗಿಲ ತೋಳುಗಳನ್ನು ಶಿಲೆಯಿಂದಲೇ ಮಾಡಿರುವುದು ವಿಶೇಷ. ಕಂಬಗಳಲ್ಲಿನ ಅತ್ಯಂತ ಸುಂದರ ಕುಸುರಿ ಕೆಲಸ ಕೂಡಾ ಆಕರ್ಷಣೀಯವಾಗಿದೆ. ಗಣಪತಿ, ವಿಷ್ಣು ಶಿವನ ಮೂರ್ತಿಗಳು ಯಮುನೆ, ಗಜಲಕ್ಷ್ಮೀ, ಕಾಮಧೇನು ಮೂರ್ತಿಗಳನ್ನು ಎದುರುಗಡೆ ಕೆತ್ತಲಾಗಿದೆ.

ಆಚಾರ್ಯಭವನಮ್‌ ಸುತ್ತಲೂ ಗೋವುಗಳಿಗೆ ಗೋ ಸ್ವರ್ಗ ನಿರ್ಮಾಣ ಮಾಡಲಾಗಿದೆ. ಸುಮಾರು 100  ರಿಂದ 150 ಗೋವುಗಳಿಗೆ ಆಶ್ರಯ ನೀಡಲು ಸಾಧ್ಯವಾಗುವಷ್ಟು ಸ್ಥಳಾವಕಾಶವಿದ್ದು ಪ್ರಸ್ತುತ ಕೆಲವೇ ದೇಶೀ ಗೋವುಗಳಿಂದ ಆರಂಭವಾಗುವ ಗೋಸ್ವರ್ಗ ಮುಂದೆ ಅನುಕೂಲಕ್ಕೆ ತಕ್ಕಂತೆ ಗೋವುಗಳಿಗೆ ಆಶ್ರಯ ನೀಡುವ ಯೋಚನೆ ಇದೆ. ಈಗಾಗಲೇ ದೇಶಿ ಗೋ ತಳಿಗಳ ಸುಂದರ ಭಾವಚಿತ್ರಗಳೊಂದಿಗೆ ತಳಿಗಳ ಹೆಸರು ಅಳವಡಿಸಲಾಗಿದ್ದು ನೋಡುತ್ತಾ ನಿಂತರೆ ಮನಸ್ಸಿನ ಚಿಂತೆ ದೂರವಾಗಲು ಸಾಧ್ಯ.

ಮುರ್ಡೇಶ್ವರ ದೇವಸ್ಥಾನದ ಉಪಾದಿವಂತರೂ ಆಗಿರುವ ಕೃಷ್ಣಾನಂದ ಭಟ್ಟ ಬಲ್ಸೆ ಅವರನ್ನು ಬಲ್ಸೆ ಭಟ್ಟರೆಂದೇ ಜನರು ಗುರುತಿಸುತ್ತಾರೆ. ಪೌರೋಹಿತ್ಯ ಮಾಡುತ್ತಾ ಸಮಾಜಮುಖೀಯಾಗಿ ಬಂದವರು. ಚಿಕ್ಕಂದಿನಿಂದಲೂ ಕಷ್ಟಪಟ್ಟು ಸ್ವಶಕ್ತಿಯಿಂದ ಮೇಲೆ ಬಂದಿರುವ ಅವರಿಗೆ ಸಮಾಜದಲ್ಲಿರುವ ಕಡು ಬಡವರ ಕುರಿತು ವಿಶೇಷ ಕಾಳಜಿ ಹಾಗೂ ಗುರುಗಳ ಕುರಿತು ಇರುವ ಅನನ್ಯ ಭಕ್ತಿ ಅವರನ್ನು ಇಂತಹಬೃಹತ್‌ ಆಚಾರ್ಯಭವನಮ್‌ ನಿರ್ಮಾಣಕ್ಕೆ ಪ್ರೇರೇಪಣೆ ನೀಡಿತು.

ಗುರುಭಕ್ತಿಗೆ ಕಾಣಿಕೆಯಾಗಿ ಬಹುದೊಡ್ಡ ಕಟ್ಟಡವನ್ನು ಸಮಾಜಕ್ಕೆ ಅರ್ಪಣೆ ಮಾಡುತ್ತಿರುವುದು ಅವರಲ್ಲಿರುವ ಸಮಾಜಮುಖೀ ಚಿಂತನೆಗೆ ಸಾಕ್ಷಿಯಾಗಿದೆ. ಸದಾ ಸಮಾಜದ ಕುರಿತು ಚಿಂತಿಸುವ ಅವರ ಈ  ಕೊಡುಗೆಯ ಹಿಂದೆ ಅನೇಕ ನೋವುಗಳಿವೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ವಂತ ದುಡಿಮೆಯ  ಉಳಿಕೆಯ ಹಣವನ್ನು ವಿನಿಯೋಗಿಸಿ ಕಟ್ಟಡ ಕಟ್ಟಲು ಮುಂದಾದ ಅವರಿಗೆ ಕೊರೊನಾ ಕಾಲದಲ್ಲಿ ಆರ್ಥಿಕ ಅಡಚಣೆಯಾದರೂ ಹಿಂಜರಿಯದೇ ಹಿಡಿದ ಕಾರ್ಯವನ್ನು ಮಾಡಿ ಮುಗಿಸಿದ ಅವರ ಕಾರ್ಯ ಇತರರಿಗೆ ಮಾದರಿಯಾಗಿದೆ.

ಇದನ್ನೂ ಓದಿ :ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರಿಗೆ ಗೌರವ

ಧಾರ್ಮಿಕ ಕಾರ್ಯಕ್ರಮಗಳು: ಆಚಾರ್ಯ ಭವನಮ್‌ ಮತ್ತು ಪುಣ್ಯಕೋಟಿ ಸಮರ್ಪಣಾ ಸಮಾರಂಭದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಫೆ.13 ರಂದು ಆರಂಭವಾಗಿ ಫೆ.19ರ ತನಕ ನಡೆಯಲಿದ್ದು,  ಫೆ.15ರಂದು ರಾಘವೇಶ್ವರ ಶ್ರೀಗಳಿಂದ ಲೋಕಾರ್ಪಣೆಗೊಳ್ಳಲಿದೆ.

ಪ್ರತಿದಿನ ಅನ್ನಸಂತರ್ಪಣೆ, ಚತುರ್ವೇದ ಪಾರಾಯಣ, ಮಾತೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ವಲಯೋತ್ಸವ ಹಾಗೂ ಯಕ್ಷಗಾನ ಸಪ್ತಾಹ ನಡೆಯಲಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.