Dandeli; ಕುಳಗಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
ಸುರಕ್ಷಿತವಾಗಿ ಹಿಡಿದು ಮರಳಿ ಕಾಡಿಗೆ ಬಿಟ್ಟು ಬಂದ ಉರಗ ಪ್ರೇಮಿ ರಜಾಕ್ ಶಾ
Team Udayavani, Jul 9, 2023, 2:48 PM IST
ದಾಂಡೇಲಿ: ಬೃಹತ್ ಗಾತ್ರದ ಹೆಬ್ಬಾವೊಂದು ಮನೆಯ ಆವರಣದಲ್ಲಿ ಪ್ರತ್ಯಕ್ಷವಾದ ಘಟನೆ ಇಂದು ಭಾನುವಾರ ದಾಂಡೇಲಿ ತಾಲ್ಲೂಕಿನ ಕುಳಗಿ ಗ್ರಾಮದಲ್ಲಿ ನಡೆದಿದೆ.
ಅಂಚೆಪಾಲಕ ರಘುವೀರ್ ಗೌಡ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತು ಸದಸ್ಯರಾದ ಮುರಳೀಧರ್ ಗೌಡ ಅವರ ಮನೆಯ ಆವರಣದಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಹೆಬ್ಬಾವನ್ನು ಕಂಡೊಡನೆಯೆ ಮನೆಮಂದಿಯೆಲ್ಲ ಹೌಹಾರಿದ್ದರು. ಹಾವು ಬಂತೆಂದರೆ ದಾಂಡೇಲಿ ಸುತ್ತಮುತ್ತಲು ಥಟ್ಟಂನೆ ನೆನಪಿಗೆ ಬರುವ ಹೆಸರೆ ಸಾವಿರಾರು ಹಾವುಗಳನ್ನು ಸಂರಕ್ಷಿಸಿದ ಉರಗಪ್ರೇಮಿ ರಜಾಕ್ ಶಾ ಅವರ ಹೆಸರು.
ಹಾಗಾಗಿ ಮುರಳೀಧರ್ ಅವರು ರಜಾಕ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣವೆ ಸ್ಥಳಕ್ಕೆ ಭೇಟಿ ನೀಡಿದ ರಜಾಕ್ ಶಾ ಅವರು ಮುರಳೀಧರ್ ಅವರ ಮನೆಯ ಆವರಣದಲ್ಲಿ ಅವಿತುಕೂತಿದ್ದ ಹಾವನ್ನು ಸಾಹಸಿಕವಾಗಿ ಮತ್ತು ಅಷ್ಟೇ ಸುರಕ್ಷಿತವಾಗಿ ಹಿಡಿದು ಮನೆಮಂದಿಯ ಆತಂಕವನ್ನು ದೂರ ಮಾಡಿರುವುದಲ್ಲದೇ ಹಾವಿನ ಬಗ್ಗೆ ಜಾಗೃತಿಯನ್ನು ಮೂಡಿಸಿದ ಬಳಿಕ ಮರಳಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ಈ ಸಂದರ್ಭದಲ್ಲಿ ದಾಂಡೇಲಿಯ ಪತ್ರಕರ್ತ ರಾಜೇಶ್ ತಳೇಕರ್ ಹಾಗೂ ಕರವೇ (ಪ್ರ) ಬಣದ ಯುವ ಘಟಕದ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕೊಠಾರಿಯವರು ಉಪಸ್ಥಿತರಿದ್ದರು. ರಜಾಕ್ ಶಾ ಅವರ ವನ್ಯಕಾಳಜಿಗೆ ಮುರಳೀಧರ್ ಗೌಡ ಮತ್ತು ರಘುವೀರ ಗೌಡ ಹಾಗೂ ಸ್ಥಳೀಯ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ, ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ