ಕೋಸ್ಟಲ್ ಗಾರ್ಡ್‌ ಗೆ ಕ್ಷಿಪ್ರ ಗಸ್ತು ಹಡಗು


Team Udayavani, Apr 3, 2021, 9:07 PM IST

2hvr1a

ಕಾರವಾರ: ಭಾರತೀಯ ಕೋಸ್ಟ್‌ ಗಾರ್ಡ್‌ ಎರಡು ಫಾಸ್ಟ್‌ ಪ್ಯಾಟ್ರೊಲಿಂಗ್‌ ಹಡಗುಗಳನ್ನು ಕಾರವಾರ ವಿಭಾಗಕ್ಕೆ ನಿಯೋಜಿಸುವ ಮೂಲಕ ಉತ್ತರ ಕನ್ನಡದ ಕರಾವಳಿಯ ಬಲವನ್ನು ಇನ್ನಷ್ಟು ಹೆಚ್ಚಿಸಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (ಐಸಿಜಿಎಸ್‌) ಕಾರವಾರ ಘಟಕವು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ, ಅಂದರೆ ಉತ್ತರದ ಮಾಜಾಳಿಯಿಂದ ದಕ್ಷಿಣದ ಭಟ್ಕಳದವರೆಗೆ ತನ್ನ ವ್ಯಾಪ್ತಿ ಹೊಂದಿದೆ.

ಐಸಿಜಿಎಸ್‌ 4 ನವೆಂಬರ್‌ 2009ರಂದು ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿದಾಗಿನಿಂದ 2 ಇಂಟರ್‌ ಸೆಪ್ಟರ್‌ ಬೋಟ್‌ಗಳು ಮತ್ತು 2 ಇಂಟರ್‌ ಸೆಪ್ಟರ್‌ ಕ್ರಾಫ್ಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. 1 ಏಪ್ರಿಲ್‌ 2021ರಿಂದ ಐಸಿಜಿಎಸ್‌ ಸಾವಿತ್ರಿಬಾಯಿ ಫುಲೆ ಮತ್ತು ಐಸಿಜಿಎಸ್‌ ಕಸ್ತೂರ್ಬಾ ಗಾಂಧಿ  ಎಂಬ ಎರಡು ಫಾಸ್ಟ್‌ ಪೆಟ್ರೋಲ್‌ ಹಡಗುಗಳನ್ನು ಇದೀಗ ಕಾರವಾರಕ್ಕೆ ನಿಯೋಜಿಸಿದೆ.

ಈ ಎರಡೂ ಹಡಗುಗಳು ಈ ಮೊದಲು ನವ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಎರಡೂ ಹಡಗುಗಳು ಗೋವಾ ಶಿಪ್‌ಯಾರ್ಡ್‌ ಲಿಮಿಟೆಡ್‌ ನಿರ್ಮಿಸಿದ ಫಾಸ್ಟ್‌ ಪೆಟ್ರೋಲ್‌ ಹಡಗುಗಳಾಗಿವೆ. ಇವು ಗಂಟೆಗೆ 35 ನಾಟ್ಸ್‌ ವೇಗವನ್ನು ಕ್ರಮಿಸಬಲ್ಲ ಸಮರ್ಥ್ಯ ಹೊಂದಿದ್ದು, 30 ಎಂಎಂಸಿಆರ್‌ ಎನ್‌ ಗನ್‌ ಕೂಡ ಇದು ಹೊಂದಿದೆ.

ಇವುಗಳನ್ನು ಇತ್ತೀಚಿನ ಉಪಗ್ರಹ ಸಂವಹನ ಮತ್ತು ಸಂಚರಣೆ ವ್ಯವಸ್ಥೆಗಳೊಂದಿಗೆ ಅಳವಡಿಸಲಾಗಿದೆ. ಹಡಗುಗಳನ್ನು ಕಣ್ಗಾವಲು, ಗಸ್ತು ತಿರುಗಲು ವಿನ್ಯಾಸಗೊಳಿಸಲಾಗಿದೆ ಮತ್ತು ಆಳವಿಲ್ಲದ ನೀರಿನ ಕಾರ್ಯಾಚರಣೆಗೂ ಇವು ಸಮರ್ಥವಾಗಿದೆ. ಎರಡೂ ಎಫ್‌ಪಿವಿಗಳು ಕಳ್ಳಸಾಗಣೆ ವಿರೋಧಿ  ಕಾರ್ಯಾಚರಣೆ, ಕಡಲ್ಗಳ್ಳತನ ವಿರೋಧಿ  ಗಸ್ತು, ಮೀನುಗಾರಿಕೆ ರಕ್ಷಣೆ ಮತ್ತು ಶೋಧ ಮತ್ತು ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ಸಹ ಸಮರ್ಥವಾಗಿವೆ.

ಎರಡೂ ಹಡಗುಗಳು ಹಲವಾರು ಎಸ್‌ಎಆರ್‌ ಕಾರ್ಯಾಚರಣೆಗಳು, ಕಡಲ್ಗಳ್ಳತನ ವಿರೋಧಿ  ಗಸ್ತು ಮತ್ತು ಕಣ್ಗಾವಲು ಪ್ರಯತ್ನಗಳಲ್ಲಿ ಭಾಗಿಯಾಗಿವೆ. ಇದಲ್ಲದೆ, ಹಲವಾರು ಸಂದರ್ಭಗಳಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಇವುಗಳ ಮೂಲಕ ನೆರವು ನೀಡಲಾಗಿದೆ. ಈ ಎರಡು ಎಫ್‌ಪಿವಿಗಳು ಕೋಸ್ಟ್‌ ಗಾರ್ಡ್‌ ಸ್ಟೇಷನ್‌ ಕಾರವಾರದ ಸಾಮರ್ಥ್ಯಗಳಿಗೆ ಹೊಸ ಆಯಾಮವನ್ನು ಸೇರಿಸುತ್ತವೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.