ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದನೆ

ಜನರ ಅಳಲು ಕೇಳಲು- ನೀರು ಪೂರೈಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಮ್‌ ಸ್ಥಾಪನೆ: ಜಿಲ್ಲಾಧಿಕಾರಿ

Team Udayavani, May 3, 2019, 3:51 PM IST

uttar-kannada-1-tdy..

ಕಾರವಾರ: ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಜಿಲ್ಲಾಡಳಿತ ಹಾಗೂ ಜಿಪಂ ಸಂಪೂರ್ಣ ಸಜ್ಜಾಗಿವೆ ಎಂದು ಜಿಲ್ಲಾಧಿಕಾರಿ ಹರಿಶಕುಮಾರ ಕೆ. ಹೇಳಿದರು.

ಅವರು ಡಿಸಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿವ ನೀರು ಪೂರೈಸಲು ಜಿಲ್ಲಾಡಳಿತ ಹಾಗೂ ಜಿಪಂ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಆಯಾ ತಾಲೂಕುಗಳ ತಹಶೀಲ್ದಾರ್‌ ಕಾರ್ಯಾಲಯ, ಜಿಪಂ, ತಾಪಂ ಕಚೇರಿಗಳಲ್ಲಿ ತರೆಯಲಾಗಿರುವ ಕಂಟ್ರೋಲ್ ರೂಮ್‌ಗಳಿಗೆ ಸಾರ್ವಜನಿಕರು ದೂರು ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಬರ ಪರಸ್ಥಿತಿಯಲ್ಲಿ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸಲು ಯಾವುದೇ ರೀತಿಯ ಹಣಕಾಸಿನ ಸಮಸ್ಯೆ ಇಲ್ಲ, ಅಲ್ಲದೇ ಕಾನೂನಿನ ತೋಡಕು ಕೂಡಾ ಇರುವುದಿಲ್ಲ, ಆಯಾ ಉಪವಿಭಾಗದ ಸಹಾಯಕ ಆಯುಕ್ತರಿಗೆ ಜವಾಬ್ದಾರಿ ನೀಡಲಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಲಾಗುವುದು ಎಂದರು.

ಮೇವಿನ ಕೊರತೆ ಇಲ್ಲ: ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ಮೇವಿನ ಲಭ್ಯತೆ ಇದೆ. ಜಿಲ್ಲೆಯ ಜಾನುವಾರುಗಳಿಗೆ ಇನ್ನೂ 9 ವಾರಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹವಿದೆ. ಅಂತರ ಜಿಲ್ಲೆ ಅಥವಾ ಅಂತಾರಾಜ್ಯಕ್ಕೆ ಮೇವು ಸಾಗಾಣಿಕೆ ಆಗದಂತೆ ಜಿಲ್ಲೆಯ ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಪಂ ಸಿಇಒ ಎಂ. ರೋಶನ್‌ ಮಾತನಾಡಿ ಜಿಲ್ಲಾಧಿಕಾರಿ, ಜಿಪಂ ಸಿಇಒ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಪಂ ಇಒ ಹಾಗೂ ಕಾರ್ಯನಿರ್ವಾಹಕ ಇಂಜನೀಯರ್‌ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದೊಂದಿಗೆ ಪ್ರತಿ ಶನಿವಾರ ವಿಡಿಯೋ ಸಂವಾದ ನಡೆಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರವಾರ ನಗರಸಭೆ ಪೌರಾಯುಕ್ತ ಎಸ್‌ ಯೋಗೇಶ್ವರ ಮಾತನಾಡಿ, ಪ್ರತಿದಿನ ಕಾರವಾರ ನಗರಕ್ಕೆ 3.80 ಎಂಎಲ್ಡಿ, ಅಂಕೋಲಾ ಪಟ್ಟಣಕ್ಕೆ 2.07, ಶಿರಸಿ 8.17, ದಾಂಡೇಲಿ 7.00, ಭಟ್ಕಳ 2.56, ಹೊನ್ನಾವರ 1.70, ಕುಮಟಾ 2.63, ಮುಂಡಗೋಡ 2.16 ಜಾಲಿ ಪಟ್ಟಣಕ್ಕೆ 1.30, ಯಲ್ಲಾಪುರ 1.40, ಹಳಿಯಾಳ 1.93, ಸಿದ್ದಾಪುರ 0.90 ಎಮ್‌.ಎಲ್.ಡಿ ನೀರು ಸರಬರಾಜು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್‌, ಡಿ.ಯು.ಡಿ.ಸಿ ಯೋಜನಾ ನಿರ್ದೇಶಕ ವಿನಾಯಕ ಉಪಸ್ಥಿತರಿದ್ದರು.

ಜಂಟಿ ಕಾರ್ಯಾಚರಣೆ:

ಕುಡಿವ ನೀರಿಗೆ ಸಮಸ್ಯೆ ಎದುರಾಗಬಹುದಾದ ಹಳ್ಳಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇದೆ ಎಂದು ದೂರು ಬಂದ ಕೂಡಲೇ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮತ್ತು ತಾಪಂ ಇಒ ಜಂಟಿಯಾಗಿ ಆ ಹಳ್ಳಿಗೆ ಭೇಟಿ ನೀಡಿ ಕೂಡಲೇ ಅಲ್ಲಿ ಪರಿಹಾರ ಕಾರ್ಯಕ್ಕೆ ಕ್ರಮವಹಿಸಲು ನಿರ್ದೇಶನ ನೀಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಆಂತರಿಕ ಸಮಸ್ಯೆಗಳಿದ್ದಾಗ ಜಿಲ್ಲಾಧಿಕಾರಿ ಮತ್ತು ಸಿಇಒ ತೆರಳಿ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಹೇಳಿದರು.
ಖಾಸಗಿ ಬೋರವೆಲ್ ಮೂಲಕ ನೀರು ಪೂರೈಕೆ:

ಜಿಲ್ಲೆಯ 304 ಗ್ರಾಮಗಳಲ್ಲಿ 427 ಖಾಸಗಿ ಬೋರವೆಲ್ಗಳು. 112 ತೆರೆದ ಬಾವಿಗಳನ್ನು ಗುರುತಿಸಲಾಗಿದ್ದು, ಕುಡಿಯುವ ನೀರಿನ ಅವಶ್ಯಕತೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು. ಅಲ್ಲದೇ ಖಾಸಗಿ ಜಮೀನಿನಲ್ಲಿ ನೀರಿನ ಲಭ್ಯತೆ ಇದ್ದರೆ ಅವುಗಳ ಮೂಲಕ ಕುಡಿಯುವ ನೀರಿನ ಬೇಡಿಕೆ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಂದ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.